ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆ, ಇನ್ನು 3-4 ದಿನ
ಬೆಂಗಳೂರು, ಜೂನ್ 06: ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬವಾಗುತ್ತಿದ್ದು, ಕರ್ನಾಟಕಕ್ಕೂ ಒಂದೆರಡು ದಿನ ತಡವಾಗಿ ಮುಂಗಾರು ಪ್ರವೇಶವಾಗಲಿದೆ. ಈ ನಡುವೆ ಮುಂಗಾರು ಪೂರ್ವ ಮಳೆ ಆರ್ಭಟ ಇನ್ನೂ 3 ರಿಂದ 4 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂಗಾರು ಪ್ರವೇಶದ ತನಕ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. ಕರ್ನಾಟಕದಲ್ಲಿ ಹಲವೆಡೆ ಬರ ಪರಿಸ್ಥಿತಿ ಮುಂದುವರೆದಿದ್ದು, ರಾಜ್ಯದ ಪ್ರಮುಖ ದೇಗುಲಗಳಲ್ಲಿ ಇಂದು ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪರ್ಜನ್ಯ ಹೋಮ, ಪೂಜೆ ನೆರವೇರುತ್ತಿದೆ.

ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಜೋರಾದ ಗಾಳಿ ಬೀಸಲಿದೆ.
Rainfall Forecast (for next 24 hours): Isolated to scattered light to moderate rains likely over the state. pic.twitter.com/lyT3whLLfQ
— KSNDMC (@KarnatakaSNDMC) June 4, 2019
ದಕ್ಷಿಣ ಒಳನಾಡಿನಲ್ಲಿ ವಾಯುಭಾರ ಕುಸಿತದ ಕಾರಣ ಬೆಂಗಳೂರು, ಮಂಗಳೂರು, ಮೈಸೂರು ಮಳೆಯಿಂದ ತಂಪಾಗಲಿವೆ ಎಂದು ಸ್ಕೈಮೆಟ್ ವೆದರ್ ಸಂಸ್ಥೆ ಹೇಳಿದೆ. ಜೂನ್ 07-08ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಇದಾದ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಪ್ರವೇಶ ಪಡೆಯಲಿದೆ.












Click it and Unblock the Notifications