ಕೋರ್ಟ್ ಕಟಕಟೆಯಲ್ಲಿ ನಿಂತ ಸೋನು ಗೌಡ...
ಸ್ಯಾಂಡಲ್ ವುಡ್ ಅಂಗಳದಲ್ಲೀಗ ವೆಡ್ಡಿಂಗ್ ಗಿಫ್ಟ್ ಸಿನಿಮಾದ ಸದ್ದು ಮತ್ತೆ ಜೋರಾಗಿದೆ. ಅದಕ್ಕೆ ಕಾರಣ ಈಗಷ್ಟೇ ಬಂದ ಟೀಸರ್ ಝಲಕ್. ಸಖತ್ ಪ್ರಾಮಿಸಿಂಗ್ ಆಗಿ ಮೂಡಿ ಬಂದಿರುವ ಟೀಸರ್ ಸಮಾಜದಲ್ಲಿ ನಡುವೆ ಗಂಭೀರ ವಿಷ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಈ ಟೀಸರ್ ನೋಡ್ತಿದ್ರೆ ಕನ್ನಡ ಸಿನಿ ಸಾಮ್ರಾಜ್ಯಕ್ಕೆ ಮತ್ತೊಬ್ಬ ಪ್ರತಿಭಾನ್ವಿತ ನಿರ್ದೇಶಕನ ಆಗಮನವಾದಂತಿದೆ.
ಒಂದಷ್ಟು ಹಿರಿಯ ನಿರ್ದೇಶಕರ ಗರಡಿಯಲ್ಲಿ ಪಳಗಿದ ವಿಕ್ರಂ ಪ್ರಭು ತಮ್ಮ ಇಷ್ಟು ವರ್ಷದ ಅನುಭವನ್ನು ಧಾರೆ ಎರೆದು ವೆಡ್ಡಿಂಗ್ ಗಿಫ್ಟ್ ಸಿನಿಮಾವನ್ನು ತಯಾರಿಸಿದ್ದಾರೆ ಅನ್ನೋದಕ್ಕೆ ಟೀಸರ್ ತಾಜಾ ಉದಾಹರಣೆ.

ತಮ್ಮ ರಕ್ಷಣೆಗಾಗಿ ಇರುವ ಕಾನೂನುಗಳನ್ನು ಅಸ್ತವ್ಯಸ್ತವಾಗಿಸಿಕೊಂಡು ಹೆಣ್ಣುಮಕ್ಕಳು ಗಂಡು ಸಂತತಿಯನ್ನು ಕಷ್ಟದ ಕೂಪಕ್ಕೆ ತಳ್ಳುತ್ತಾರೆ. ಹೇಗೆಲ್ಲಾ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಅನ್ನೋದನ್ನು ಟೀಸರ್ ಝಲಕ್ ನಲ್ಲಿ ಅನಾವರಣ ಮಾಡಲಾಗಿದೆ. ಇಂಥ ಸೂಕ್ಷ್ಮ ಎಳೆಯ ಕಂಟೆಂಟಿನೊಂದಿಗೆ ಒಂದಷ್ಟು ಮನರಂಜನೆ ನೀಡುವ ವೆಡ್ಡಿಂಗ್ ಗಿಫ್ಟ್ ಸಿನಿಮಾದಲ್ಲಿ ಸೋನು ಗೌಡ ನಾಯಕಿಯಾಗಿ ಅಭಿನಯಿಸಿದ್ರೆ, ನಂದೀಶ್ ನಾಣಯ್ಯ ನಾಯಕನಾಗಿ ನಟಿಸಿದ್ದಾರೆ.

ಸೋನು ತಮ್ಮ ಸಿನಿಕರಿಯರ್ನಲ್ಲಿ ಇದೊಂದು ವಿಶೇಷವೆಂದು ಈಗಾಗಲೇ ಹೇಳಿಕೊಂಡಿದ್ದಾರೆ. ಇನ್ನು ಈ ಸಿನಿಮಾದ ಮತ್ತೊಂದು ವಿಶೇಷ ಎಂದರೆ ನಟನೆಯಿಂದ ದೂರವೇ ಸರಿದಿದ್ದ ಪ್ರೇಮಾ ಮತ್ತೆ ಕಂಬ್ಯಾಕ್ ಮಾಡಿದ್ದು ಈ ಚಿತ್ರದಿಂದಲೇ. ಇಲ್ಲಿ ಪ್ರೇಮ ಲಾಯರ್ ಖದರ್ ನಲ್ಲಿ ಮಿಂಚಿದ್ದಾರೆ. ನಿರ್ದೇಶನದ ಜೊತೆಗೆ ವಿಕ್ರಂ ಪ್ರಭು ನಿರ್ಮಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

Recommended Video
ಪವಿತ್ರಾ ಲೋಕೇಶ್, ಅಚ್ಯುತ್ ಕುಮಾರ್ ಸೇರಿದಂತೆ ಹಲವು ಕಲಾವಿದರು ತಾರಾಬಳಗದ ಸಿನಿಮಾಗೆ ಉದಯ್ ಲೀಲಾ ಛಾಯಾಗ್ರಹಣ, ಬಾಲಚಂದ್ರ ಪ್ರಭು ಸಂಗೀತ ನಿರ್ದೇಶನವಿದೆ.
-
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ












Click it and Unblock the Notifications