ಸ್ತ್ರೀ ರಕ್ಷಣೆ ಕಾನೂನು ದುರ್ಬಳಕೆ, ವೆಡ್ಡಿಂಗ್ ಗಿಫ್ಟ್ ಚಿತ್ರದ ಟ್ರೈಲರ್
ಬೆಂಗಳೂರು, ಜೂನ್ 17: ಪ್ರಸ್ತುತ ಸಮಾಜದ ವಾಸ್ತವಿಕ ಸ್ಥಿತಿಯ ಅನೇಕ ಅಂಶಗಳೇ ಈಗ ಬರುವ ಸಿನಿಮಾಗಳ ಮುಖ್ಯ ಕಥಾವಸ್ತುವಾಗಿರುತ್ತೆ. ಅಂತಹದ್ದೇ ಒಂದು ಗಂಭೀರ ಅಂಶವನ್ನಿಟ್ಕೊಂಡು ಮೂಡಿಬರ್ತಿರುವ ಬಹುನಿರೀಕ್ಷಿತ ಸಿನಿಮಾ ವೆಡ್ಡಿಂಗ್ ಗಿಫ್ಟ್.
ಟೈಟಲ್ನಿಂದಲೇ ಒಂದು ರೀತಿ ಕುತೂಹಲ ಹುಟ್ಟು ಹಾಕಿದ್ದ ಚಿತ್ರತಂಡ ನಂತ್ರ ಟೀಸರ್ ರಿವೀಲ್ ಮಾಡಿ ಸಿನಿಮಾ ಕಥೆ ಬಗ್ಗೆ ಕೊಂಚ ಬೆಳಕು ಚೆಲ್ಲಿತ್ತು. ಈಗಾಗಲೇ ಚಿತ್ರದ ಕೆಲ ಹಾಡುಗಳು ಕೂಡ ಹೊರಬಂದಿದ್ದು ಜನಮನ ಗೆದ್ದಿವೆ. ಸದ್ಯ ವೆಡ್ಡಿಂಗ್ ಗಿಫ್ಟ್ ಸಿನಿಮಾದ ಟ್ರೈಲರ್ ಕೂಡ ಹೊರಬಂದಿದೆ.
ಮಹಿಳೆಯರ ಮೇಲಿನ ಹಿಂಸೆ, ಶೋಷಣೆಯ ಬಗ್ಗೆ ಬಹಳಷ್ಟು ಸಿನಿಮಾಗಳು ಬಂದಿವೆ. ಕೆಲ ವರ್ಷಗಳ ಹಿಂದೆ ಮೀ ಟೂ ವಿವಾದ ಹೆಚ್ಚು ಸುದ್ದಿಯಾಗಿತ್ತು. ಅದೇ ರೀತಿ ಇದೀಗ ಮೆನ್ ಟೂ ಪ್ರಕರಣಗಳೂ ಸಹ ಬೆಳಕಿಗೆ ಬರ್ತಿವೆ.
ಸಮಾಜದಲ್ಲಿ ಹಲವಾರು ಪುರುಷರೂ ಕೂಡ ಮಹಿಳೆಯರಿಂದ ಶೋಷಣೆಗೆ ಒಳಗಾಗ್ತಿದ್ದಾರೆ. ಅಲ್ಲದೆ ಮಹಿಳೆಯರ ರಕ್ಷಣೆಗಾಗಿರುವ ಕಾನೂನನ್ನೇ ಸ್ತ್ರೀಯರು ಅಸ್ತ್ರವನ್ನಾಗಿ ಬಳಸಿಕೊಂಡು ಅದನ್ನು ದುರ್ಬಳಕೆ ಮಾಡಿ ಪುರುಷರನ್ನು ಶೋಷಿಸುವ ಸಾಕಷ್ಟು ಪ್ರಕರಣಗಳಿವೆ.

ಈ ವಿಚಾರವೇ ವೆಡ್ಡಿಂಗ್ ಗಿಫ್ಟ್ ಚಿತ್ರದ ಮುಖ್ಯ ಕಥಾವಸ್ತುವಾಗಿದೆ. ವಿನಾ ಕಾರಣ ಜಿದ್ದಿಗೆ ಬಿದ್ದ ಹೆಣ್ಣೊಬ್ಬಳು ತನ್ನ ಗಂಡನನ್ನು ಕಾನೂನಿನ ಮೂಲಕ ಹೇಗೆಲ್ಲಾ ಹಿಂಸಿಸುತ್ತಾಳೆ ಅನ್ನುವುದರ ಸೂಕ್ಷ್ಮ ನೋಟಗಳು ಈ ಟ್ರೈಲರ್ನಲ್ಲಿವೆ.

ನಾಯಕನಾಗಿ ನಿಶಾನ್ ಹಾಗೂ ನಾಯಕಿಯಾಗಿ ಸೋನು ಗೌಡ ಕಾಣಿಸಿಕೊಂಡಿದ್ದಾರೆ. ನಟಿ ಸೋನು ಇಲ್ಲಿ ಬಹಳ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನೂ ಸ್ಯಾಂಡಲ್ವುಡ್ನ ಸ್ಟಾರ್ ನಟಿ ಪ್ರೇಮ ಲಾಯರ್ ಆಗಿ ಮಿಂಚಿದ್ದು, ಅವರ ಪಾತ್ರ ಎಲ್ಲರ ಗಮನ ಸೆಳೆಯುತ್ತೆ. ಜೊತೆಗೆ ಅಚ್ಯುತ್ ಕುಮಾರ್ ಕೂಡ ಲಾಯರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇನ್ನೂ ಪವಿತ್ರ ಲೋಕೇಶ್ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ವಿಕ್ರಂಪ್ರಭು ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ತಾವೇ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಬಾಲಚಂದ್ರ ಪ್ರಭು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ಉದಯ್ ಲೀಲಾ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಹೊರಬಂದಿರುವ ವೆಡ್ಡಿಂಗ್ ಗಿಫ್ಟ್ ಚಿತ್ರದ ಟ್ರೈಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ತಿದೆ. ಜುಲೈ 8ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications