ಕೆಎಸ್ಆರ್ಟಿಸಿಯಿಂದ ವಾರಾಂತ್ಯ ಜೋಗ ಪ್ರವಾಸ
ಬೆಂಗಳೂರು,ಜುಲೈ.19: ದೈನಿಂದಿನ ಬಿಡುವಿಲ್ಲದ ಕೆಲಸದಿಂದ ಒಂದು ಸಣ್ಣ ಚೇಂಚ್ ಓವರ್ಗಾಗಿ ಯೋಚಿಸಿ ಈ ವಾರಂತ್ಯಕ್ಕೆ ಏನಾದರೂ ಹೊಸ ಪ್ಲಾನ್ ಏನು ಸಿಗುತ್ತಿಲ್ಲವೇ? ಆಗಿದ್ದರೆ ನಿಮಗಾಗಿಯೇ ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಈ ಮುಂಗಾರು ಮಳೆಯ ಸ್ವಾದದ ಅನುಭವ ಪಡೆಯಲು ನೂತನ ಪ್ರವಾಸ ಯೋಜನೆ ತಂದಿದೆ.
ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭಿಸಿದೆ.
ಕೆಎಸ್ಆರ್ಟಿಸಿ ಬೆಂಗಳೂರು ಕೇಂದ್ರಿಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಜೋಗ ಜಲಪಾತ ಶಿವಮೊಗ್ಗ ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ ಅಂದರೆ, ಶುಕ್ರವಾರ ಮತ್ತು ಶನಿವಾರ ಪ್ಯಾಕೇಜ್ ಪ್ರವಾಸವನ್ನು 22 ಜುಲೈ 2022ರಿಂದ ಪ್ರಾರಂಭಿಸಿ ಈ ಯೋಜನೆಯ ಕಾರ್ಯಾಚರಣೆಯಂತೆ ಮಾಡಲಾಗುತ್ತದೆ.

ಪ್ರವಾಸದ ಯೋಜನೆಯ ಪ್ಲಾನ್ ಇಂತಿದೆ. ಬೆಂಗಳೂರಿನಿಂದ ರಾತ್ರಿ 10.30ಕ್ಕೆ ಹೊರಟು ಬೆಳಗ್ಗೆ 5.30 ತಲುಪುವುದು, ಬೆಳಗ್ಗೆ 7ರ ವರೆಗೂ ವಿಶ್ರಾಂತಿ ಪಡೆಯುವುದು. ನಂತರ 7ಕ್ಕೆ ಉಪಹಾರ ಸೇವನೆ ಮಾಡುವುದು 7.15ಕ್ಕೆ ಸಾಗರದಿಂದ ಹೊರಟು ವರದಹಳ್ಳಿಗೆ 7.30ಕ್ಕೆ ತಲುಪುವುದು, ವರದ ಹಳ್ಳಿಯಿಂದ 7.15ಕ್ಕೆ ಹೊರಟು ವರದಮೂಲಕ್ಕೆ 9ಕ್ಕೆ ತಲುಪುವುದು.
ವರದಮೂಲ ನೋಡಿಕೊಂಡು ಇಕ್ಕೇರಿಗೆ 9.30ಕ್ಕೆ ತಲುಪುವುದು, ಅಲ್ಲಿ 10ರವೆರಗೂ ತಾಣ ನೋಡುವುದು. ನಂತರ ಇಕ್ಕೇರಿ ನೋಡಿಕೊಂಡು 10.30ಕ್ಕೆ ಹೊರಟು 11ಕ್ಕೆ ಕೆಳದಿಗೆ ತಲುಪುವುದು. 12ಕ್ಕೆ ಕೆಳದಿಯಿಂದ ಹೊರಟು 12.30ಕ್ಕೆ ಸಾಗರ ತಲುಪಲಾಗುತ್ತದೆ. ನಂತರ ಸಾಗರದಲ್ಲಿ 12.45ರಿಂದ 1.15ರವರೆಗೆ ಊಟದ ಸಮಯ, 1.30ವರೆಗೆ ಸಾಗರದಿಂದ ಹೊರಟು 2.13ಕ್ಕೆ ಜೋಗ ತಲುಪುವುದು ಅಲ್ಲಿ ಸಂಜೆ 5ರವರೆಗೂ ಜೋಗದ ಅಹ್ಲಾದಕರ ವಾತಾವರಣ ಸವಿಯುವುದು.

ನಂತರ 6.15ಕ್ಕೆ ಹೊರಟು ಸಂಜೆ 7ಕ್ಕೆ ಸಾಗರ ತಲುಪುವುದು, 7ರಿಂದ 8ರವರೆಗೆ ಒಂದು ಗಂಟೆ ಸಾಗರದಲ್ಲಿ ಶಾಪಿಂಗ್ ಸಮಯವಿರುತ್ತದೆ. ನಂತರ 8.30ಕ್ಕೆ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ನಂತರ ರಾತ್ರಿ 10 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 5ಗಂಟೆಗೆ ಬೆಂಗಳೂರು ತಲುಪುವುದು. ಇದು ಯೋಜನೆಯ ಪ್ಲಾನ್ ಆಗಿರುತ್ತದೆ.
ಬೆಂಗಳೂರು- ಜೋಗ ಜಲಪಾತ ಪ್ಯಾಕೇಜ್ ಟೂರ್ನ ಪ್ರಯಾಣದ ದರಗಳು ಇಂತಿವೆ. ವಯಸ್ಕರಿಗೆ 2,300 ರುಪಾಯಿಗಳು. 6ರಿಂದ 12 ವರ್ಷದ ಒಳಗಿನ ಮಕ್ಕಳಿಗೆ 2100 ರುಪಾಯಿಗಳು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications