ಸಚಿವ ಸುಧಾಕರ ಏಕಪತ್ನಿ ವ್ರತಸ್ಥ ಹೇಳಿಕೆಗೆ ವೆಲ್ಫೇರ್ ಪಾರ್ಟಿ ಖಂಡನೆ

ಬೆಂಗಳೂರು, ಮಾರ್ಚ್ 25: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ವಾಗ್ವಾದ ಮುಂದುವರಿದಿದೆ. ಈ ಮಧ್ಯೆ 'ಏಕಪತ್ನಿ ವ್ರತಸ್ಥರು ಯಾರಿದ್ದಾರೆ' ಎಂದು ಸವಾಲು ಹಾಕಿರುವ ವೈದ್ಯಕೀಯ ಸಚಿವ ಡಾ.ಸುಧಾಕರ್ ವಿರುದ್ದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆ ಅವರ‌ ಮನಸ್ಥಿತಿಯನ್ನು ತೋರಿಸುತ್ತದೆ. ಬಹುಶ ಅರೋಗ್ಯ ಸಚಿವರ ಮಾನಸಿಕ ಅರೋಗ್ಯ ದಲ್ಲಿ ವ್ಯತ್ಯಾಸ ಆಗಿರಬಹುದು, ಯಾರೋ ಮಾಡಿದ ತಪ್ಪು ಸಮರ್ಥನೆ ಮಾಡಿಕೊಳ್ಳಲು ಮತ್ಯಾರನ್ನೋ ಎಳೆದು ತರುವುದು ಅವರಿಗೆ ಶೋಭೆ ತರುವಂತದ್ದಲ್ಲ. ಸಂಸ್ಕಾರ ಇದ್ದವರು ಈ ರೀತಿಯಲ್ಲಿ ಮಾತನಾಡುತ್ತಿರಲಿಲ್ಲ ಎಂದು ಅವರು ಅಸಮಾಧಾನ ತೋರಿದರು.

ಎಲ್ಲವನ್ನೂ ಬೀದಿ ರಂಪ‌ ಮಾಡಿ ಸದನದ ಗೌರವ ಘನತೆ ಹರಾಜು ಹಾಕಿರುವುದು ಅಲ್ಲದೆ ಶಾಸಕರಲ್ಲಿ ಮಹಿಳೆಯರು ಇದ್ದರೆ, ಈ ರೀತಿಯ ಹೇಳಿಕೆ ಇಂದ ಮಹಿಳೆಯರ ಅವಮಾನ ವಾಗುತ್ತದೆ ಎಂಬ ಪರಿಜ್ಞಾನವು ಸಚಿವರಿಗೆ ಇಲ್ಲ. ಇವರ ಈ ಬೇಜವಾಬ್ದಾರಿ ಹೇಳಿಕೆಯಿಂದ ಒಳ್ಳೆಯ ವ್ಯಕ್ತಿತ್ವ ಇರುವ ರಾಜಕಾರಣಿ ಗಳ ಮೇಲೆ ಜನ ಅನುಮಾನ ಪಡುವಂಥ ವಾತಾವರಣ ನಿರ್ಮಾಣ ವಾಗಿದೆ, ಸಚಿವರು ತಮ್ಮ ಈ ಹೇಳಿಕೆಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ವೆಲ್ಫೇರ್ ಪಾರ್ಟಿ ಅಗ್ರಹಿಸಿದೆ.

Welfare party India condemns minister Sudhakar statement

Recommended Video

      ವ್ಯಂಗ್ಯ ಭರಿತ ಕಿರು ನಾಟಕ ಪ್ರದರ್ಶಿಸಿ ಆರೋಗ್ಯ ಸಚಿವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ | Oneindia Kannada

      '224 ಶಾಸಕರಿಗೆ ಚಾಲೆಂಜ್ ಹಾಕಿರುವ ಸುಧಾಕರ್ ಅವರ ಹೇಳಿಕೆ ಆಕ್ಷೇಪಾರ್ಹವಾದದ್ದು. ಇದು ಎಲ್ಲರಿಗಾದ ಅವಮಾನ' ಎಂದು ವೆಲ್ಫೇರ್ ಪಾರ್ಟಿ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+