ಸಚಿವ ಸುಧಾಕರ ಏಕಪತ್ನಿ ವ್ರತಸ್ಥ ಹೇಳಿಕೆಗೆ ವೆಲ್ಫೇರ್ ಪಾರ್ಟಿ ಖಂಡನೆ
ಬೆಂಗಳೂರು, ಮಾರ್ಚ್ 25: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ವಾಗ್ವಾದ ಮುಂದುವರಿದಿದೆ. ಈ ಮಧ್ಯೆ 'ಏಕಪತ್ನಿ ವ್ರತಸ್ಥರು ಯಾರಿದ್ದಾರೆ' ಎಂದು ಸವಾಲು ಹಾಕಿರುವ ವೈದ್ಯಕೀಯ ಸಚಿವ ಡಾ.ಸುಧಾಕರ್ ವಿರುದ್ದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹೇಳಿಕೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಬಹುಶ ಅರೋಗ್ಯ ಸಚಿವರ ಮಾನಸಿಕ ಅರೋಗ್ಯ ದಲ್ಲಿ ವ್ಯತ್ಯಾಸ ಆಗಿರಬಹುದು, ಯಾರೋ ಮಾಡಿದ ತಪ್ಪು ಸಮರ್ಥನೆ ಮಾಡಿಕೊಳ್ಳಲು ಮತ್ಯಾರನ್ನೋ ಎಳೆದು ತರುವುದು ಅವರಿಗೆ ಶೋಭೆ ತರುವಂತದ್ದಲ್ಲ. ಸಂಸ್ಕಾರ ಇದ್ದವರು ಈ ರೀತಿಯಲ್ಲಿ ಮಾತನಾಡುತ್ತಿರಲಿಲ್ಲ ಎಂದು ಅವರು ಅಸಮಾಧಾನ ತೋರಿದರು.
ಎಲ್ಲವನ್ನೂ ಬೀದಿ ರಂಪ ಮಾಡಿ ಸದನದ ಗೌರವ ಘನತೆ ಹರಾಜು ಹಾಕಿರುವುದು ಅಲ್ಲದೆ ಶಾಸಕರಲ್ಲಿ ಮಹಿಳೆಯರು ಇದ್ದರೆ, ಈ ರೀತಿಯ ಹೇಳಿಕೆ ಇಂದ ಮಹಿಳೆಯರ ಅವಮಾನ ವಾಗುತ್ತದೆ ಎಂಬ ಪರಿಜ್ಞಾನವು ಸಚಿವರಿಗೆ ಇಲ್ಲ. ಇವರ ಈ ಬೇಜವಾಬ್ದಾರಿ ಹೇಳಿಕೆಯಿಂದ ಒಳ್ಳೆಯ ವ್ಯಕ್ತಿತ್ವ ಇರುವ ರಾಜಕಾರಣಿ ಗಳ ಮೇಲೆ ಜನ ಅನುಮಾನ ಪಡುವಂಥ ವಾತಾವರಣ ನಿರ್ಮಾಣ ವಾಗಿದೆ, ಸಚಿವರು ತಮ್ಮ ಈ ಹೇಳಿಕೆಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ವೆಲ್ಫೇರ್ ಪಾರ್ಟಿ ಅಗ್ರಹಿಸಿದೆ.
Recommended Video
'224 ಶಾಸಕರಿಗೆ ಚಾಲೆಂಜ್ ಹಾಕಿರುವ ಸುಧಾಕರ್ ಅವರ ಹೇಳಿಕೆ ಆಕ್ಷೇಪಾರ್ಹವಾದದ್ದು. ಇದು ಎಲ್ಲರಿಗಾದ ಅವಮಾನ' ಎಂದು ವೆಲ್ಫೇರ್ ಪಾರ್ಟಿ ಹೇಳಿದರು.