ಶಾಸಕರ ರಾಜೀನಾಮೆ ಅಂಗೀಕಾರ ಆಗುತ್ತದೆಯೋ? ಇಲ್ಲವೋ? ಸ್ಪೀಕರ್ ನಡೆ ಏನು?
Recommended Video
ಬೆಂಗಳೂರು, ಜುಲೈ 08: ಬರೋಬ್ಬರಿ 13 ಶಾಸಕರು ಈಗಾಗಲೇ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ, ಇಬ್ಬರು ಪಕ್ಷೇತರರು ತಮ್ಮ ಬೆಂಬಲ ವಾಪಸ್ ಪಡೆದಿದ್ದಾರೆ, ಸರ್ಕಾರ ಪತನದ ಹಾದಿ ಹಿಡಿದಂತೆ ಗೋಚರವಾಗುತ್ತಿದೆ, ಆದರೆ ಎಲ್ಲದಕ್ಕೂ ನಾಳೆ ಉತ್ತರ ಸಿಗಲಿದೆ.
ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬೇಕಿರುವ ಸ್ಪೀಕರ್ ರಮೇಶ್ ಕುಮಾರ್ ಅವರು ತಮಿಳುನಾಡಿನ ವೆಲ್ಲೂರಿಗೆ ತೆರಳಿದ್ದು, ನಾಳೆ ವಿಧಾನಸೌಧಕ್ಕೆ ಬರಲಿದ್ದಾರೆ. ಅವರು ಬಂದ ನಂತರ ಶಾಸಕರ ರಾಜೀನಾಮೆ ಪರಿಶೀಲನೆ ನಡೆಯಲಿದೆ.
ರಮೇಶ್ ಕುಮಾರ್ ಅವರು ಬಂದ ಕೂಡಲೇ ರಾಜೀನಾಮೆಯನ್ನು ಅಂಗೀಕರಿಸಿಬಿಡುತ್ತಾರೆ ಎಂದೇನೂ ಇಲ್ಲ. ನಿಯಮದ ಪ್ರಕಾರ ರಮೇಶ್ ಕುಮಾರ್ ಅವರು ಶಾಸಕರನ್ನು ರಾಜೀನಾಮೆಗೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಲಿದ್ದಾರೆ, ಮೊದಲು ರಾಜೀನಾಮೆ ಸಲ್ಲಿಸಿದ ಆನಂದ್ ಸಿಂಗ್ಗೆ ಇಂದು ನೊಟೀಸ್ ನೀಡಲಾಗಿದೆ.
ಶಾಸಕರು ರಾಜೀನಾಮೆಗೆ ಸಮಂಜಸವಾದ ಕಾರಣ ನೀಡಬೇಕಾಗುತ್ತದೆ. ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿರುವ ಶಾಸಕರನ್ನು ಕರೆದು ಕಾರಣ ಕೇಳುತ್ತಾರೆ, ಅಷ್ಟೆ ಅಲ್ಲದೆ, ತಮ್ಮ ನಿರ್ಣಯವನ್ನು ಪುನರ್ ಪರಿಶೀಲನೆ ಮಾಡಿಕೊಳ್ಳಲು ಸಮಯ ಸಹ ನೀಡುತ್ತಾರೆ.

ಶಾಸಕ ಸ್ಥಾನ ಅನರ್ಹಗೊಳಿಸುವ ಅಧಿಕಾರವಿದೆ
ಪಕ್ಷಾಂತರ ಉದ್ದೇಶದಿಂದ ರಾಜೀನಾಮೆ ಅಥವಾ ಆಮೀಷ ಕಾರಣ ಎಂದು ಅಕಸ್ಮಾತ್ ಸ್ಪೀಕರ್ಗೆ ಮನದಟ್ಟಾದರೆ, ಶಾಸಕ ಸ್ಥಾನ ಅನರ್ಹಗೊಳಿಸುವ ಅಧಿಕಾರವೂ ಅವರಿಗೆ ಇದೆ, ತಮಿಳುನಾಡಿನಲ್ಲಿ ಹೀಗೆಯೇ ನಡೆದಿದೆ, ರಾಜೀನಾಮೆ ಸಲ್ಲಿಸಿದ್ದ 18 ಶಾಸಕರನ್ನು ಅನರ್ಹಗೊಳಿಸಿದ್ದರು ಅಲ್ಲಿನ ಸ್ಪೀಕರ್.

ಎಲ್ಲ ಶಾಸಕರ ಭೇಟಿಗೆ ಕರೆಯಬಹುದು
ರಾಜೀನಾಮೆ ನೀಡಿರುವ ಎಲ್ಲ ಶಾಸಕರನ್ನೂ ಸ್ಪೀಕರ್ ಅವರು ನಾಳೆ ಭೇಟಿಗೆ ಕರೆಯಬಹುದು, ಕರೆದು ಮಾತನಾಡಿ, ದೂರುಗಳನ್ನು ಕೇಳಿ ರಾಜೀನಾಮೆ ನಿರ್ಧಾರ ಬದಲಿಸುವ ಮನವಿ ಮಾಡಬಹುದು, ಇದು ನಿಯಮವೂ ಹೌದು, ಆದರೆ ಶಾಸಕರು ಸ್ಪೀಕರ್ ಮನವಿಗೆ ಒಪ್ಪುವ ಸಾಧ್ಯತೆ ಅತ್ಯಂತ ಕಡಿಮೆ.

ರಾಜೀನಾಮೆ ನಿರಾಕರಿಸುವ ಸಾಧ್ಯತೆ ಇಲ್ಲ
ರಾಜೀನಾಮೆ ಅಂಗೀಕಾರ ಮಾಡುವಲ್ಲಿ ಸ್ಪೀಕರ್ ಅವರು ತಡ ಮಾಡಬಹುದೇ ವಿನಃ ರಾಜೀನಾಮೆ ಸ್ವೀಕರಿಸದೇ ನಿರಾಕರಿಸುವ ಅವಕಾಶ ಅತ್ಯಂತ ಕಡಿಮೆ. ಜೊತೆಗೆ ನಾಳೆಯೇ ಎಲ್ಲ ಶಾಸಕರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯೂ ಕಡಿಮೆ ಇದೆ.

ನಿಯಮ ಪಾಲಿಸುತ್ತಾರೆ ರಮೇಶ್ ಕುಮಾರ್
ಸ್ಪೀಕರ್ ರಮೇಶ್ ಕುಮಾರ್ ಅವರು, ನಿಯಮಗಳನ್ನು ಪಾಲಿಸುವಲ್ಲಿ, ಸ್ಪೀಕರ್ ಹುದ್ದೆಯಲ್ಲಿದ್ದಾಗ ಪಕ್ಷಪಾತವಿಲ್ಲದೆ ನಿರ್ಣಯಗಳನ್ನು ತೆಗೆದುಕೊಳ್ಳಲು ಗುರುತಿಸಿಕೊಂಡಿರುವವರು. ಸಂವಿಧಾನಬದ್ಧವಾಗಿ, ನಿಯಮದ ಅಡಿಯಲ್ಲಿ, ಜನಪರವಾಗಿ ರಮೇಶ್ ಕುಮಾರ್ ಅವರು ನಾಳೆ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications