ಶಾಸಕರ ರಾಜೀನಾಮೆ ಅಂಗೀಕಾರ ಆಗುತ್ತದೆಯೋ? ಇಲ್ಲವೋ? ಸ್ಪೀಕರ್ ನಡೆ ಏನು?
Recommended Video
ಬೆಂಗಳೂರು, ಜುಲೈ 08: ಬರೋಬ್ಬರಿ 13 ಶಾಸಕರು ಈಗಾಗಲೇ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ, ಇಬ್ಬರು ಪಕ್ಷೇತರರು ತಮ್ಮ ಬೆಂಬಲ ವಾಪಸ್ ಪಡೆದಿದ್ದಾರೆ, ಸರ್ಕಾರ ಪತನದ ಹಾದಿ ಹಿಡಿದಂತೆ ಗೋಚರವಾಗುತ್ತಿದೆ, ಆದರೆ ಎಲ್ಲದಕ್ಕೂ ನಾಳೆ ಉತ್ತರ ಸಿಗಲಿದೆ.
ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬೇಕಿರುವ ಸ್ಪೀಕರ್ ರಮೇಶ್ ಕುಮಾರ್ ಅವರು ತಮಿಳುನಾಡಿನ ವೆಲ್ಲೂರಿಗೆ ತೆರಳಿದ್ದು, ನಾಳೆ ವಿಧಾನಸೌಧಕ್ಕೆ ಬರಲಿದ್ದಾರೆ. ಅವರು ಬಂದ ನಂತರ ಶಾಸಕರ ರಾಜೀನಾಮೆ ಪರಿಶೀಲನೆ ನಡೆಯಲಿದೆ.
ರಮೇಶ್ ಕುಮಾರ್ ಅವರು ಬಂದ ಕೂಡಲೇ ರಾಜೀನಾಮೆಯನ್ನು ಅಂಗೀಕರಿಸಿಬಿಡುತ್ತಾರೆ ಎಂದೇನೂ ಇಲ್ಲ. ನಿಯಮದ ಪ್ರಕಾರ ರಮೇಶ್ ಕುಮಾರ್ ಅವರು ಶಾಸಕರನ್ನು ರಾಜೀನಾಮೆಗೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಲಿದ್ದಾರೆ, ಮೊದಲು ರಾಜೀನಾಮೆ ಸಲ್ಲಿಸಿದ ಆನಂದ್ ಸಿಂಗ್ಗೆ ಇಂದು ನೊಟೀಸ್ ನೀಡಲಾಗಿದೆ.
ಶಾಸಕರು ರಾಜೀನಾಮೆಗೆ ಸಮಂಜಸವಾದ ಕಾರಣ ನೀಡಬೇಕಾಗುತ್ತದೆ. ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿರುವ ಶಾಸಕರನ್ನು ಕರೆದು ಕಾರಣ ಕೇಳುತ್ತಾರೆ, ಅಷ್ಟೆ ಅಲ್ಲದೆ, ತಮ್ಮ ನಿರ್ಣಯವನ್ನು ಪುನರ್ ಪರಿಶೀಲನೆ ಮಾಡಿಕೊಳ್ಳಲು ಸಮಯ ಸಹ ನೀಡುತ್ತಾರೆ.

ಶಾಸಕ ಸ್ಥಾನ ಅನರ್ಹಗೊಳಿಸುವ ಅಧಿಕಾರವಿದೆ
ಪಕ್ಷಾಂತರ ಉದ್ದೇಶದಿಂದ ರಾಜೀನಾಮೆ ಅಥವಾ ಆಮೀಷ ಕಾರಣ ಎಂದು ಅಕಸ್ಮಾತ್ ಸ್ಪೀಕರ್ಗೆ ಮನದಟ್ಟಾದರೆ, ಶಾಸಕ ಸ್ಥಾನ ಅನರ್ಹಗೊಳಿಸುವ ಅಧಿಕಾರವೂ ಅವರಿಗೆ ಇದೆ, ತಮಿಳುನಾಡಿನಲ್ಲಿ ಹೀಗೆಯೇ ನಡೆದಿದೆ, ರಾಜೀನಾಮೆ ಸಲ್ಲಿಸಿದ್ದ 18 ಶಾಸಕರನ್ನು ಅನರ್ಹಗೊಳಿಸಿದ್ದರು ಅಲ್ಲಿನ ಸ್ಪೀಕರ್.

ಎಲ್ಲ ಶಾಸಕರ ಭೇಟಿಗೆ ಕರೆಯಬಹುದು
ರಾಜೀನಾಮೆ ನೀಡಿರುವ ಎಲ್ಲ ಶಾಸಕರನ್ನೂ ಸ್ಪೀಕರ್ ಅವರು ನಾಳೆ ಭೇಟಿಗೆ ಕರೆಯಬಹುದು, ಕರೆದು ಮಾತನಾಡಿ, ದೂರುಗಳನ್ನು ಕೇಳಿ ರಾಜೀನಾಮೆ ನಿರ್ಧಾರ ಬದಲಿಸುವ ಮನವಿ ಮಾಡಬಹುದು, ಇದು ನಿಯಮವೂ ಹೌದು, ಆದರೆ ಶಾಸಕರು ಸ್ಪೀಕರ್ ಮನವಿಗೆ ಒಪ್ಪುವ ಸಾಧ್ಯತೆ ಅತ್ಯಂತ ಕಡಿಮೆ.

ರಾಜೀನಾಮೆ ನಿರಾಕರಿಸುವ ಸಾಧ್ಯತೆ ಇಲ್ಲ
ರಾಜೀನಾಮೆ ಅಂಗೀಕಾರ ಮಾಡುವಲ್ಲಿ ಸ್ಪೀಕರ್ ಅವರು ತಡ ಮಾಡಬಹುದೇ ವಿನಃ ರಾಜೀನಾಮೆ ಸ್ವೀಕರಿಸದೇ ನಿರಾಕರಿಸುವ ಅವಕಾಶ ಅತ್ಯಂತ ಕಡಿಮೆ. ಜೊತೆಗೆ ನಾಳೆಯೇ ಎಲ್ಲ ಶಾಸಕರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯೂ ಕಡಿಮೆ ಇದೆ.

ನಿಯಮ ಪಾಲಿಸುತ್ತಾರೆ ರಮೇಶ್ ಕುಮಾರ್
ಸ್ಪೀಕರ್ ರಮೇಶ್ ಕುಮಾರ್ ಅವರು, ನಿಯಮಗಳನ್ನು ಪಾಲಿಸುವಲ್ಲಿ, ಸ್ಪೀಕರ್ ಹುದ್ದೆಯಲ್ಲಿದ್ದಾಗ ಪಕ್ಷಪಾತವಿಲ್ಲದೆ ನಿರ್ಣಯಗಳನ್ನು ತೆಗೆದುಕೊಳ್ಳಲು ಗುರುತಿಸಿಕೊಂಡಿರುವವರು. ಸಂವಿಧಾನಬದ್ಧವಾಗಿ, ನಿಯಮದ ಅಡಿಯಲ್ಲಿ, ಜನಪರವಾಗಿ ರಮೇಶ್ ಕುಮಾರ್ ಅವರು ನಾಳೆ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications