ಅಳಿಯನ ಆತ್ಮಹತ್ಯೆಗೂ ಮುನ್ನ ಮಾಜಿ ಸಚಿವ ಬಿಸಿ ಪಾಟೀಲ್ ಪೊಲೀಸರಿಗೆ ಹೇಳಿದ್ದೇನು?
ಮಾಜಿ ಸಚಿವ ಬಿಸಿ ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಾ ಪಾಟೀಲ್ ಅವರ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನಡೆದಿದೆ. ವಿಷವನ್ನು ಸೇವಿಸಿ ಬಿಸಿ ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಶಿವಮೊಗ್ಗಾದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿ ಪಾಟೀಲ್ ಅವರ ಅಳಿಯ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಿಸಿ ಪಾಟೀಲ್ ಹೇಳಿದ್ದೇನು?
ತಮ್ಮ ಮಗಳ ಪತಿ ಆತ್ಮ ಹತ್ಯೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾಗಿದ್ದ ಮಾಜಿ ಸಚಿವ ಬಿಸಿ ಪಾಟೀಲ್, ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರು. ಅಲ್ಲದೆ ಕೂಡಲೇ ಅಳಿಯನನ್ನು ಪತ್ತೆ ಹಚ್ಚವಂತೆ ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿಕೊಂಡರು. ಕೊಂಚ ಸಮಯದ ಬಳಿಕ ಶಿವಮೊಗ್ಗ ಪೊಲೀಸರು ಬಿಸಿ ಪಾಟೀಲ್ ಅಳಿಯನ ಕಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿದ್ದಾರೆ.
ರಸ್ತೆಯ ಮಧ್ಯದಲ್ಲಿ ಸಾವು
ಜೋಳಕ್ಕೆ ಹಾಕುವ ಔಷಧ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಮುಂದಾಗಿದ್ದ ಪ್ರತಾಪ್ ಕುಮಾರ್ ಅವರನ್ನು ದಾವಣಗೆರೆ ಶಿಫ್ಟ್ ಮಾಡುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಶಿವಮೊಗ್ಗ ಹತ್ತಿರವಾಗುವುದರಿಂದ ಅಲ್ಲಿಗೆ ಶಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಅಲ್ಲದೆ ಶಿಕಾರಿಪುರ ಹತ್ತರಿ ಬರುವಾಗಲೇ ಪ್ರತಾಪ್ ಕುಮಾರ್ ಜೀವ ಹೋಗಿತ್ತು ಎಂದು ಅಧಿಕಾರಿಗಳು ತಿಳಿಸಿದರು ಎಂದು ಮಾಜಿ ಸಚಿವ ಬಿಸಿ ಪಾಟೀಲ್ ತಿಳಿಸಿದ್ದಾರೆ.

ಮಕ್ಕಳ ವಿಚಾರದಲ್ಲಿ ಅವರಿಗೆ ಕೊರಗಿತ್ತು. ಡಿ ಅಡಿಕ್ಷನ್ ಸೆಂಟರ್ನಲ್ಲಿ ಎರಡು ತಿಂಗಳೂ ಸಹ ಇದ್ದರು. ಆಗ ಅವರು ಸರಿ ಹೋಗಿದ್ದರು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೆ ನೋಡಿಕೊಳ್ಳುತ್ತಿದ್ದರು. 16 ವರ್ಷಗಳ ಹಿಂದೆ ಮದುವೆ ಆಗಿದೆ ಎಂದು ಬಿಸಿ ಪಾಟೀಲ್ ಹೇಳಿದ್ದಾರೆ.
ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ಕೆರೆಗಳಿಗೆ ಹೋಗಿ ಭೇಟಿ ನೀಡಿ ಬರುವಾಗ ವಿಷಯ ಗೊತ್ತಾಯ್ತು. ನಾಳೆ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವರು ತಿಳಿಸಿದ್ದಾರೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications