ಬಿಜೆಪಿಯಲ್ಲಿ ಯಡಿಯೂರಪ್ಪ ಏನು ಬದಲಾವಣೆ ತರಬಲ್ಲರು?
ಬೆಂಗಳೂರು, ಏಪ್ರಿಲ್ 09 : ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಅವರು ಮುಂದಿರುವ ಪ್ರಮುಖವಾದ ಗುರಿ.
ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಬಿಜೆಪಿಯಲ್ಲಿ ಇಂದಿಗೂ ಪ್ರಭಾವಿ ನಾಯಕರು ಎಂಬ ಮಾತನ್ನು ಎಲ್ಲರೂ ಒಪ್ಪಲೇಬೇಕು. ಪ್ರಬಲ ಲಿಂಗಾಯಿತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಸಿಕ್ಕಿದೆ. [ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿ ಆಯ್ಕೆ]

ದೆಹಲಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಶುಕ್ರವಾರ ಸಂಜೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ಸಿಕ್ಕಿತು. ಪಕ್ಷದ ಹಲವಾರು ನಾಯಕರು ಯಡಿಯೂರಪ್ಪ ಅವರನ್ನು ಬರಮಾಡಿಕೊಂಡರು, ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಅವರನ್ನು ಸ್ವಾಗತಿಸಿದರು. [FIR ರದ್ದಾದರೂ ಕಾನೂನು ಹೋರಾಟ ಮುಗಿದಿಲ್ಲ]
ಯಾರ ಹೆಸರು ಪರಿಗಣಿಸಿರಲಿಲ್ಲ : ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ ಬೇರೆ ಯಾವ ಹೆಸರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿರಲಿಲ್ಲ ಎಂದು ದೆಹಲಿಯ ಬಿಜೆಪಿ ನಾಯಕರು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ. ಬೇರೆ-ಬೇರೆ ನಾಯಕರ ಹೆಸರುಗಳು ಮಾಧ್ಯಮದಲ್ಲಿ ಮಾತ್ರ ಹರಿದಾಡುತ್ತಿದ್ದವು. ನಳೀನ್ ಕುಮಾರ್ ಕಟೀಲ್ ಮತ್ತು ಆರ್.ಅಶೋಕ್ ಹೆಸರು ಪಟ್ಟಿಯಲ್ಲಿ ಇರಲಿಲ್ಲ ಎಂದು ಬಿಜೆಪಿಯ ಮೂಲಗಳು ಸ್ಪಷ್ಟಪಡಿಸಿವೆ. [16ನೇ FIR ರದ್ದುಗೊಳಿಸಲು ಯಡಿಯೂರಪ್ಪ ಮನವಿ]
ಕಾಂಗ್ರೆಸ್ ಮೇಲೆ ಸವಾರಿ : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಲ್ಲಿ ನನಗೆ ಯಾವುದೇ ಅನುಮಾನವಿಲ್ಲ' ಎಂದು ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಶುಕ್ರವಾರ ಹೇಳಿದ್ದಾರೆ. ಹೌದು, ಯಡಿಯೂರಪ್ಪ ಅವರ ಮುಂದಿನ ಗುರಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದು ಎಂಬುದಂತೂ ಸ್ಪಷ್ಟವಾಗಿದೆ.
ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವುದು ಯಡಿಯೂರಪ್ಪ ಅವರ ಮುಂದಿರುವ ಸವಾಲು. ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತಾ, ವಿಧಾನಸಭೆ ಚುನಾವಣೆ ಕಾರ್ಯವನ್ನು ಅವರು ಆರಂಭಿಸಬೇಕಿದೆ.
ಕಾನೂನು ಹೋರಾಟ : ತಮ್ಮ ವಿರುದ್ಧದ ಪ್ರಕರಣಗಳಿಂದ ಹೊರಬರುವ ಸವಾಲು ಯಡಿಯೂರಪ್ಪ ಅವರ ಮುಂದಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಅವರ ವಿರುದ್ಧ ಹಾಕಿದ್ದ 15 ಪ್ರಕರಣಗಳು ರದ್ದಾಗಿವೆ. 20 ಕೋಟಿ ದೇಣಿಗೆ ಪಡೆದ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಅದರಿಂದ ಯಡಿಯೂರಪ್ಪ ಅವರು ಮುಕ್ತಿ ಪಡೆಯಬೇಕಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications