ಕರ್ನಾಟಕ ಚುನಾವಣೆ : ಜಾತಿ ಲೆಕ್ಕಾಚಾರವೇನು?
ಬೆಂಗಳೂರು, ಫೆಬ್ರವರಿ 27 : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರವನ್ನು ಕಡೆಗಣಿಸುವಂತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಜಾತಿ ಲೆಕ್ಕಾಚಾರ ಮಹತ್ವದ ಪಾತ್ರ ವಹಿಸಲಿದೆ.
ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ವಿಚಾರಗಳು ಚುನಾವಣೆಯ ಪ್ರಮುಖ ಅಂಶಗಳಾಗಿವೆ. ಅದರ ಜೊತೆಗೆ ಜಾತಿ ಲೆಕ್ಕಾಚಾರವೂ ಸೇರಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಕರ್ನಾಟಕದಲ್ಲಿ ಈಗಲೇ ಚುನಾವಣೆ ನಡೆದರೆ ಜಾತಿಯ ಲೆಕ್ಕಾಚಾರ ಪ್ರಮುಖ ಪಾತ್ರ ವಹಿಸಲಿದೆ. ಗ್ರಾಮೀಣ ಪ್ರದೇಶದ ಜನರು ತಮ್ಮ ಹಕ್ಕು ಚಲಾಯಿಸುವಾಗ, ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮುಂತಾದ ವಿಷಯಗಳ ಜೊತೆ ಅಭ್ಯರ್ಥಿಯ ಜಾತಿಯನ್ನು ನೋಡಿ ಮತ ನೀಡಲಿದ್ದಾರೆ.

ರಾಜಕೀಯ ವಿಶ್ಲೇಷಕ ಮತ್ತು ಜೈನ್ ವಿವಿಯ ಉಪ ಕುಲಪತಿ ಡಾ.ಸಂದೀಪ್ ಶಾಸ್ತ್ರಿ ಅವರು ಕುರಿತು ಮಾತನಾಡಿದ್ದಾರೆ. 'ಅಭಿವೃದ್ದಿಯ ಮಾತು, ಆಡಳಿತ ಪಕ್ಷದ ಯೋಜನೆಗಳು ಮುಂತಾದವುಗಳನ್ನು ಮೀರಿಸುವ ಶಕ್ತಿ ಜಾತಿ ಲೆಕ್ಕಾಚಾರಕ್ಕಿದೆ' ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಸುಮಾರು 1300 ವಿವಿಧ ಸಮುದಾಯಗಳಿವೆ. ಆದರೆ, ಲಿಂಗಾಯತ ಮತ್ತು ಒಕ್ಕಲಿಗೆ ಸಮುದಾಯಗಳಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಕ್ಕಿದೆ. ಸ್ವತಂತ್ರ ಬಂದ ಬಳಿಕ ಇದೇ ಸಮುದಾಯದ ಹೆಚ್ಚಿನ ಪ್ರತಿನಿಧಿಗಳು ಮುಖ್ಯಮಂತ್ರಿಯಾಗಿದ್ದಾರೆ.
2013ರಲ್ಲಿ ಸಿದ್ದರಾಮಯ್ಯ ಅವರು ಅಹಿಂದ ನಾಯಕರಾಗಿ ಮುಖ್ಯಮಂತ್ರಿ ಪಟ್ಟಕ್ಕೇರಿದರು. 2015ರಲ್ಲಿ ಜಾತಿಗಣತಿ ಆರಂಭಿಸುವ ಮೂಲಕ ಹೊಸ ಚರ್ಚೆಯನ್ನು ಹುಟ್ಟು ಹಾಕಿದರು. ಜಾತಿಗಣತಿ ವರದಿ ಇನ್ನೂ ಬಿಡುಗಡೆಗೊಂಡಿಲ್ಲ.
ಎಲ್ಲಾ ಜಾತಿಗಳಿಗೂ ಎಲ್ಲಾ ಪಕ್ಷದಲ್ಲೂ ಹಲವಾರು ರಾಜಕೀಯ ನೇತಾರರು ಇದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಹೈದರಾಬಾದ್-ಕರ್ನಾಟಕ ಭಾಗದ 371 (ಜೆ) ಅನುಷ್ಠಾನ, ಜನಪರ ಯೋಜನೆಗಳಿಂದ ಚುನಾವಣೆಯಲ್ಲಿ ಸಹಾಯಕವಾಗಲಿದೆ ಎಂಬ ನಿರೀಕ್ಷೆಯಲ್ಲಿದೆ.
ಲಿಂಗಾಯತ ಸಮುದಾಯ ಬಿಜೆಪಿ ಜೊತೆ ಇದೆ. ಇದೇ ಸಮುದಾಯಕ್ಕೆ ಸೇರಿದ ಬಿ.ಎಸ್.ಯಡಿಯೂರಪ್ಪ ಈ ಬಾರಿ ಮುಖ್ಯಮಂತ್ರಿ ಅಭ್ಯರ್ಥಿ. ಒಕ್ಕಲಿಗೆ ಸಮುದಾಯದವರು ಜೆಡಿಎಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ.
'ಈಗ ಜನರು ಜಾತಿಯ ಬಗ್ಗೆ ಹೆಚ್ಚು ಆಲೋಚನೆ ಮಾಡುವುದಿಲ್ಲ. ತಮ್ಮ ಕ್ಷೇತ್ರ, ಗ್ರಾಮದಲ್ಲಿ ಹೇಗೆ ಅಭಿವೃದ್ಧಿಯಾಗಿದೆ ಎಂದು ನೋಡುತ್ತಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications