Get Updates
Get notified of breaking news, exclusive insights, and must-see stories!

ಕಲ್ಯಾಣ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಕೊಡುಗೆ ಏನು: ಎಲ್.ಕೆ. ಅಡ್ವಾಣಿ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವೀಟ್!

ಬೆಂಗಳೂರು ಹಾಗೂ ಮೈಸೂರಿನಂತೆ ಕಲ್ಯಾಣ ಕರ್ನಾಟಕವೂ ಅಭಿವೃದ್ಧಿ ಆಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವುದು ಬಿಜೆಪಿ - ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ರಾಜಕೀಯ ಪಕ್ಷವೊಂದರ ಸೋಷಿಯಲ್ ಮೀಡಿಯಾ ಖಾತೆ ವಾಟ್ಸಾಪ್ ವಿಶ್ವವಿದ್ಯಾಲಯದ ಪಠ್ಯಕ್ರಮವನ್ನು ಮೀರಿದೆ ಎಂದು ಬಿಜೆಪಿ ಟ್ವೀಟ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಎದುರಿಸುತ್ತಿರುವ ಹಾಗೂ ಇತಿಹಾಸದ ಅನ್ಯಾಯಗಳನ್ನು ಗ್ರಹಿಸಲು ವಿಫಲರಾಗಿದ್ದಾರೆ. ಎಲ್.ಕೆ. ಅಡ್ವಾಣಿ ಉಪಪ್ರಧಾನಿಯಾಗಿದ್ದಾಗ, ಹೈದರಾಬಾದ್ - ಕರ್ನಾಟಕ ಪ್ರದೇಶಕ್ಕೆ ವಿಶೇಷ ಮೀಸಲಾತಿ ಬೇಡಿಕೆಯನ್ನು ಅವರು ಸ್ಪಷ್ಟವಾಗಿ ನಿರಾಕರಿಸಿದರು ಎಂಬುದು ಆಶ್ಚರ್ಯವೇನಿಲ್ಲ. ಬಿಜೆಪಿ 371(ಜೆ) ವಿಧಿಯ ಉದ್ದೇಶ ಮತ್ತು ಸಾಂವಿಧಾನಿಕ ಚೌಕಟ್ಟನ್ನು ಅರ್ಥಮಾಡಿಕೊಳ್ಳುತ್ತದೆಯೇ? ಅಥವಾ "ವಿಶೇಷ ಸ್ಥಾನಮಾನ" ನೀಡುವುದರ ಹಿಂದಿನ ತಾರ್ಕಿಕತೆಯನ್ನು ಅರ್ಥ
ಮಾಡಿಕೊಳ್ಳುತ್ತದೆಯೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

What is Mallikarjun Kharge Congress contribution to Kalyan Karnataka Priyank Kharge tweets about LK Advani

ನೀವು ದಾಟುವ ಅಣೆಕಟ್ಟುಗಳು, ನೀವು ಓಡಿಸುವ ರಸ್ತೆಗಳು, ನೀವು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳು, ನೀವು ಬಳಸುವ ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳು, ನಿಮ್ಮ ಮಕ್ಕಳು ವ್ಯಾಸಂಗ ಮಾಡುವ ಶಾಲೆಗಳು ಮತ್ತು ಕಾಲೇಜುಗಳು ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಕೊಡುಗೆಯಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ರಾಯಚೂರಿನಲ್ಲಿ AIIMS ಅನ್ನು ಸ್ಥಾಪಿಸುವಲ್ಲಿ ಬಿಜೆಪಿ ಪದೇ ಪದೇ ವಿಫಲವಾಗಿದ್ದರೂ, ಕಲಬುರಗಿಗೆ ESIC, GIMS, ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆಗಳನ್ನು ಈ ಭಾಗಕ್ಕೆ ನೀಡಿದ್ದು ಮತ್ತದೆ ಕಾಂಗ್ರೆಸ್.

ಬಿಜೆಪಿ ವಿರೋಧಿಸಿದ 371(ಜೆ) ಮೀಸಲಾತಿ ಜಾತಿ ಅಥವಾ ಧರ್ಮವನ್ನು ಆಧರಿತವಲ್ಲ; ಇದು ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸುವ ಆಧಾರದ ಮೇಲೆ ರೂಪುಗೊಂಡಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಪ್ರದೇಶಕ್ಕೆ ಏನನ್ನೂ ಮಾಡಿಲ್ಲ ಎಂದು ಬಿಜೆಪಿ ನಂಬಿದರೆ, ಅವರ ಪಕ್ಷದ ಸದಸ್ಯರು ಮತ್ತು ಅವರ ಕುಟುಂಬಗಳು 371(ಜೆ) ವಿಧಿಯ ಅಡಿಯಲ್ಲಿ ನೀಡಲಾದ ಪ್ರತಿಯೊಂದು ಪ್ರಯೋಜನವನ್ನು ತಿರಸ್ಕರಿಸುತ್ತಾರೆ ಎಂದು ಸಾರ್ವಜನಿಕವಾಗಿ ಘೋಷಿಸಲಿ. ಆದರೆ, ಈ ಅಭಿವೃದ್ಧಿಯ ಬೀಜವನ್ನು ಯಾರು ಬಿತ್ತಿದರು ಎಂಬುದರ ಬಗ್ಗೆ ಅಜ್ಞಾನದಿಂದ ವರ್ತಿಸುತ್ತಲ್ಲೇ ಸೌಲಭ್ಯಗಳನ್ನು ಅನುಭವಿಸುತ್ತಲೇ ಇದ್ದಾರೆ ಎಂದು ಅವರು ಅಕ್ರೋಶ ವ್ಯಕ್ತಪಡಿದ್ದಾರೆ.

ಖರ್ಗೆ ಅವರು ಈ ಭಾಗಕ್ಕೆ ನೀಡಿದ ಪ್ರಮುಖ ಕೊಡುಗೆಗಳು

2013 ಮತ್ತು 2022-23 ರ ನಡುವೆ:

ಕೆಕೆಆರ್‌ಡಿಬಿ ಅಡಿಯಲ್ಲಿ ಒಟ್ಟು 29,257 ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ.

371(J) ಅಡಿಯಲ್ಲಿ ಶಿಕ್ಷಣ ಪ್ರಯೋಜನಗಳು:

• ವೈದ್ಯಕೀಯ ಸೀಟುಗಳು: 6,795

• ದಂತ ವೈದ್ಯಕೀಯ ಸೀಟುಗಳು: 1,388

• ಎಂಜಿನಿಯರಿಂಗ್ ಸೀಟುಗಳು: 22,219 ಎನ್ನುವುದು ಸೇರಿದಂತೆ ಹಲವು ಕೊಡುಗೆಗಳನ್ನು ನೀಡಲಾಗಿದೆ.

ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಪ್ರಶ್ನೆ ಮಾಡಿರುವ ಅವರು ಅದನ್ನೂ ಪಟ್ಟಿ ಮಾಡಿದ್ದಾರೆ.

•ಕಲಬುರಗಿಯಿಂದ ಯಾವುದೇ ಕ್ಯಾಬಿನೆಟ್ ಮಂತ್ರಿಗಳಿಲ್ಲ - ಪಶುಸಂಗೋಪನೆಗೆ ಒಮ್ಮೆ ಹೊರತುಪಡಿಸಿ

•ನಿರಾಕರಿಸಲಾಗಿದೆ: ರಾಯಚೂರಿಗೆ ಐಐಟಿ

•ನಿರಾಕರಿಸಲಾಗಿದೆ: ಕಲಬುರಗಿ ರೈಲ್ವೆ ವಿಭಾಗ

•ನಿರಾಕರಿಸಲಾಗಿದೆ: ರೈಲ್ವೆ ಕೋಚ್ ಕಾರ್ಖಾನೆ

•ನಿರಾಕರಿಸಲಾಗಿದೆ: NIMZ

•ರದ್ದುಗೊಳಿಸಲಾಗಿದೆ: ಸ್ಮಾರ್ಟ್ ಸಿಟಿ ಯೋಜನೆಗಳು

•ನಿರ್ಲಕ್ಷಿಸಲಾಗಿದೆ: 371(J) ಅಡಿಯಲ್ಲಿ ನೇರ ನೇಮಕಾತಿ

•ಕಿತ್ತುಹಾಕಲಾಗಿದೆ: ಕಲಬುರಗಿಯಿಂದ ನವೀಕರಿಸಬಹುದಾದ ಇಂಧನ ಪ್ರಾದೇಶಿಕ ಕಚೇರಿ

•ವರ್ಗಾವಣೆ ಮಾಡಲಾಗಿದೆ: ಆಹಾರ ಸುರಕ್ಷತಾ ಸಂಶೋಧನಾ ಪ್ರಯೋಗಾಲಯ

ಬಿಜೆಪಿಯ ನಿರ್ಲಕ್ಷ್ಯದ ಪಟ್ಟಿ ಉದ್ದವಾಗಿದೆ, ಉದ್ದೇಶಪೂರ್ವಕವಾಗಿದೆ ಮತ್ತು ಅವಮಾನಕರವಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಮುಂದುವರಿದು ಕಾಂಗ್ರೆಸ್ ಅಥವಾ ಮಲ್ಲಿಕಾರ್ಜುನ ಖರ್ಗೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸುವ ಧೈರ್ಯ ಅವರಿಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+