Gali Janardhana Reddy: ಜನಾರ್ದನ ರೆಡ್ಡಿ ಮೇಲಿದ್ದ ನೂರಕ್ಕೂ ಹೆಚ್ಚು ಪ್ರಕರಣಗಳು ಈಗ ಏನಾಗಿದೆ..?
ಬೆಂಗಳೂರು, ಏಪ್ರಿಲ್ 03: ಒಬ್ಬ ಸಾಮಾನ್ಯ ಮನುಷ್ಯನನ್ನು ನಿಲ್ಲಿಸಿ ನೂರು ಜನ ಗುಂಡಿನ ದಾಳಿ ನಡೆಸಿದರೆ ಹೇಗಾಗುತ್ತದೆಯೋ ಅಂತಹ ಪರಿಸ್ಥಿತಿ ನನ್ನದಾಗಿತ್ತು. ಇದೇ ರೀತಿ ನನ್ನ ಮೇಲೆ ಸುಮಾರು ನೂರ ಇಪ್ಪತ್ತಕ್ಕೂ ಹೆಚ್ಚು ಎಲ್ಲಾ ಇಲಾಖೆಯಲ್ಲೂ ಪ್ರಕರಣ ದಾಖಲಾಗಿತ್ತು. ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಲು ಎಷ್ಟೆಲ್ಲಾ ಪ್ರಕರಣ ದಾಖಲು ಮಾಡಬೇಕೋ ಅಷ್ಟೆಲ್ಲಾ ಪ್ರಕರಣವನ್ನು ದಾಖಲು ಮಾಡಿದ್ದರು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ತಮ್ಮ ಮೇಲಿನ ಪ್ರಕರಣಗಳು ಏನಾಯ್ತು ಎನ್ನುವುದರ ಬಗ್ಗೆ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಇಂದು ನನಗೆ ನ್ಯಾಯಾಲಯದ ಮೇಲಿರುವ ನಂಬಿಕೆಯಿಂದ, ಕಳೆದ ಹನ್ನೆರಡು ವರ್ಷಗಳಲ್ಲಿ ಎಲ್ಲಾ ಪ್ರಕರಣಗಳಿಂದ ಹೊರಗಡೆ ಬಂದಿದ್ದೇನೆ. ಸದ್ಯ ಕರ್ನಾಟಕದಲ್ಲಿ ನಾಲ್ಕು ಪ್ರಕರಣಗಳನ್ನು ಒಂದುಗೂಡಿಸಿ ಒಂದೇ ಪ್ರಕರಣವಾಗಿಸಿ ತನಿಖೆ ನಡೆಯುತ್ತಿದೆ. ಇನ್ನೊಂದು ಪ್ರಕರಣ ಸೇರಿ ಒಟ್ಟು ಕರ್ನಾಟಕದಲ್ಲಿ ಎರಡು ಪ್ರಕರಣವಿದೆ. ಜೊತೆಗೆ ಆಂಧ್ರದಲ್ಲಿ ಒಂದು ಪ್ರಕರಣ ಇದೆ. ಸದ್ಯ ಮೂರು ಪ್ರಕರಣಗಳು ನನ್ನ ಮೇಲೆ ನಡೆಯುತ್ತಿದೆ ಎಂದು ಹೇಳಿದರು.

ಈ ಮೂರು ಪ್ರಕರಣದಲ್ಲಿ ಸಿಬಿಐ ಅವರು ಚಾರ್ಜ್ಶೀಟ್ ಏನು ಸಲ್ಲಿಕೆ ಮಾಡಿದ್ದಾರೆ. ಅವರು ನನ್ನ ಮೇಲೆ ಆರೋಪ ಮಾಡಿರುವ ಮೊತ್ತ ಎರಡು ರಾಜ್ಯಗಳಲ್ಲಿ ಸೇರಿ 887 ಕೋಟಿ ರೂಪಾಯಿಯನ್ನು ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ದೇನೆ ಎಂದು ಚಾರ್ಜ್ಶೀಟ್ ಹಾಕಿದ್ದಾರೆ. ಅವರ ಯುಪಿಐ ಸರ್ಕಾರ ಇರುವ ಸಮಯದಲ್ಲಿ ಅವರ ಕೈಯಲ್ಲಿದ್ದ ಸಿಬಿಐ ಅವರೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಪ್ರಧಾನಿ ಮೋದಿ ಸರ್ಕಾರ ಬಂದ ಮೇಲೆ ಯಾವುದೇ ಚಾರ್ಜ್ಶೀಟ್ ಸಲ್ಲಿಕೆ ಆಗಿಲ್ಲ ಎಂದರು.
ಇನ್ನು ಪ್ರಕರಣ ಸಂಬಂಧ ನನ್ನನ್ನು ನಾಲ್ಕು ವರ್ಷ ಜೈಲಿನಲ್ಲಿಟ್ಟು, ದೇಶ-ವಿದೇಶಿಗಳಿಗೆ ತೆರಳಿ ನನ್ನ ಬಗ್ಗೆ ಅಪಪ್ರಚಾರ ಮಾಡಿ, ಮಾಧ್ಯಮಗಳಿಗೆ ಸುಳ್ಳು ಮಾಹಿತಿಯನ್ನು ನೀಡಿದರು. ಯಾಕೆಂದರೆ ಒಬ್ಬ ಒಳ್ಳೆಯ ವ್ಯಕ್ತಿಯನ್ನು ಬಂಧನ ಮಾಡಿದರೆ, ಆ ವ್ಯಕ್ತಿಯನ್ನು ತಪ್ಪಿತಸ್ಥನಾಗಿ ಮಾಡಲು ಎಷ್ಟೆಲ್ಲಾ ಅಪಪ್ರಚಾರ ಮಾಡಬೇಕು ಅಷ್ಟೆಲ್ಲಾ ಮಾಡಿದರು, ಅದಕ್ಕೆ ಈಗ ಅನುಭವಿಸಬೇಕಾದವರು ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಸಾರ್ವಜನಿಕವಾಗಿ ಯಾವಾಗಲೂ ಹೇಳುತ್ತೇನೆ. ನಾನು ಯಾವ ತಪ್ಪೂ ಮಾಡದ ಕಾರಣ, ನನ್ನ ಬಗ್ಗೆ ನನಗೆ ವಿಶ್ವಾಸ ಇರುವ ಕಾರಣ ದೇವರು ನನಗೆ ಬಿಪಿ, ಶುಗರ್ ಇತರ ಆರೋಗ್ಯ ಸಮಸ್ಯೆ ಯಾವುದನ್ನೂ ಕೊಟ್ಟಿಲ್ಲ. ನಾನು ಯಾವ ತಪ್ಪನ್ನೂ ಮಾಡಿಲ್ಲ. ಆ ಧೈರ್ಯವೇ ನನ್ನನ್ನು ಆರೋಗ್ಯಕರವಾಗಿ ಇಟ್ಟಿದೆ ಎಂದು ಹೇಳಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications