Malur: 30 ತಿಂಗಳ ಬಳಿಕ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರುಮತ ಎಣಿಕೆ! ಕಾರಣವೇನು?
ಬೆಂಗಳೂರು, ನವೆಂಬರ್ 11: ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರ ಒಳಗೊಂಡು 2023ರ ಮೇ ತಿಂಗಳಲ್ಲಿ ಚುನಾವಣೆ ನಡೆದಿತ್ತು. ಆದರೆ ಈ ಮಾಲೂರು ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿನ ಒಂದಷ್ಟು ಗೊಂದಲಗಳು ಉಂಟಾಗಿದೆ. ಪಾರದರ್ಶಕವಾಗಿ ನಡೆದಿಲ್ಲ ಎಂಬ ಆರೋಪ ಕೇಳಿ ಬಂತು. ಈ ವಿಚಾರ ಸುಪ್ರೀಂ ಕೋರ್ಟ್ ಅಂಗಳ ತಲುಪಿತು. ಕೋರ್ಟ್ ಆದೇಶ ಮೇರೆಗೆ ಇಂದು ನವೆಂಬರ್ 11ರಂದು (ಕ್ಷೇತ್ರದಲ್ಲಿ) ಮರು ಮತಎಣಿಕೆ ನಡೆಯುತ್ತಿದೆ.
ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ, ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಮತ್ತು ಪಕ್ಷೇತರ ಅಭ್ಯರ್ಥಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಅಂದು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಅವರು ವಿಜಯ ಸಾಧಿಸಿದರು. ಕೇವಲ 248 ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ಇಷ್ಟು ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದಕ್ಕೆ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಅನುಮಾನ ವ್ಯಕ್ತಪಡಿಸಿದರು. ಪಾರದರ್ಶಕವಾಗಿ ಮತ ಎಣಿಕೆ ನಡೆದಿಲ್ಲ ಎಂದು ಮೊದಲು ಹೈಕೋರ್ಟ್ ಮೆಟ್ಟಿಲೇರಿದ್ದರು.

ಮತ ಎಣಿಕೆ ಮೇಲೆ ಅನುಮಾನ, ಕೋರ್ಟ್ ಮೊರೆ
2023ರಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಬಿರುಸಿನ ಪ್ರಚಾರ ನಡೆದಿತ್ತು. ತ್ರಿಕೋನ ಸ್ಫರ್ಧೆ ಏರ್ಪಟ್ಟಿತ್ತು. ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪ್ರಬಲ ನಾಯಕರು ಜಿದ್ದಾ ಜಿದ್ದಿಗೆ ಬಿದ್ದಿದ್ದರು. ಕೊನೆಗೆ ಕಾಂಗ್ರೆಸ್ ನಂಜೇಗೌಡ ಅವರು ಗೆದ್ದು ಬೀಗಿದರು. ಅವರಿಗೆ ಕಡಿಮೆ ಮತಗಳ ಅಂತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಐದು ಮತಗಟ್ಟೆಗಳಲ್ಲಿ ವಿವಿ ಪ್ಯಾಟ್ಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಎಣಿಕೆ ಮಾಡಲಾಗಿದೆ ಎಂದಿದ್ದರು. ಪಾರದರ್ಶಕವಾಗಿ ನಡೆದಿಲ್ಲ ಎಂದಿದ್ದರು. ಇದೆಲ್ಲ ಅಂಶ ಉಲ್ಲೇಖಿಸಿ ನ್ಯಾಯಾಲಯ ಮೆಟ್ಟಿಲೇರಿದ್ದರು.
ಮೊದಲಿಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆದಿತ್ತು. ಮಾಲೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಹೈಕೋರ್ಟ್ ಕೇಳಿತ್ತು. 2024 ಆಗಸ್ಟ್ 13ರಂದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ಮಧ್ಯಸ್ತಿಕೆಯಲ್ಲಿ ಇವಿಎಂ ಉಗ್ರಾಣದ ಬಾಗಿಲು ತೆರೆದು ದಾಖಲೆಗಳನ್ನು ತೆಗೆದುಕೊಳ್ಳಲಾಯಿತು. ಮತ ಎಣಿಕೆ ದಿನದ ದಾಖಲೆಗಳು ಸಿಕ್ಕಿವೆ ವಿನಃ ಅಂದಿನ ವಿಡಿಯೋ ಹಾಗೂ ಇತರ ದಾಖಲೆಗಳು ಸಿಕ್ಕಿಲ್ಲ ಎನ್ನಲಾಗಿದೆ.
ಮರು ಮತಎಣಿಕೆಗೆ ಸುಪ್ರೀಂ ಆದೇಶ
ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನಂಜೇಗೌಡರ ಗೆಲುವನ್ನು ಅಸಿಂಧು ಗೊಳಿಸಿತು. ಮರು ಮತ ಎಣಿಕೆಗೆ ಆದೇಶ ಹೊರಡಿಸಿತು. ಆಗ ನಂಜೇಗೌಡ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಮರು ಮತ ಎಣಿಕೆಗೆ ಗ್ರೀನ್ ಸಿಗ್ನಲ್ ನೀಡಿತು. ಈ ಸುಪ್ರಿಂ ಕೋರ್ಟ್ ಆದೇಶದನ್ವಯ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಮಾಲೂರು ಮರು ಮತದಾನ ಎಣಿಕೆಗೆ ಚುನಾವಣಾಧಿಕಾರಿಗಳು ಆದ ಕೋಲಾರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದರು.
ಕೋರ್ಟ್ ಆದೇಶದಂತೆ ಇಂದು ನವೆಂಬರ್ 11ರಂದು ಮಾಲೂರಿನಲ್ಲಿ ಮರು ಮತದಾನ ನಡೆಯುತ್ತಿದೆ. ರಾಜಕೀಯ ಪಕ್ಷಗಳ ಗಮನ ಇಂದಿನ ಫಲಿತಾಂಶದತ್ತ ನೆಟ್ಟಿದೆ. ಮಧ್ಯಾಹ್ನದ ಹೊತ್ತಿಗೆ ವಿಜೇತರ ಸುದ್ದಿ ಪ್ರಕಟಗೊಳ್ಳಲಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications