ಹಿಜಾಬ್ ಬ್ಯಾನ್ ರದ್ದು ನಿರ್ಧಾರದಿಂದ ಸಿದ್ದರಾಮಯ್ಯ ಹಿಂದೇಟಿಗೆ ಕಾರಣವೇನು?
ಬೆಂಗಳೂರು, ಡಿಸೆಂಬರ್ 25: ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣಮಕ್ಕಳು ಹಿಜಾಬ್ ಧರಿಸುವುದಕ್ಕೆ ನೀಡಿದ್ದ ತಡೆಯನ್ನು ರದ್ದು ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಧಿಡೀರ್ ನಿರ್ಧಾರ ಬದಲಿಸಿ ಸಂಪೂರ್ಣ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ.
ಸಮಾಜವಾದಿ ನಾಯಕ, ಅಲ್ಪಸಂಖ್ಯಾತರ ಆಶಾಕಿರಣ ಎಂದೆಲ್ಲ ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು, ತಮ್ಮ ಪ್ರಜಾಸತ್ತಾತ್ಮಕ ನಿಲುವುಗಳಿಂದ ಕರ್ನಾಟಕ ರಾಜಕಾರಣದಲ್ಲಿ ವಿಭಿನ್ನವಾಗಿ ಎದ್ದು ಕಾಣುತ್ತಾರೆ. ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿದ್ದ ಅವರು, ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಹೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ಹಿಜಾಬ್ ವಿವಾದ ಶುರುವಾದಾಗ ಮುನ್ನೆಲೆಗೆ ಬಂದಿದ್ದ ಮಂಡ್ಯದ ಮುಸ್ಕನ್ ಖಾನ್ ಎಂಬ ವಿದ್ಯಾರ್ಥಿ ಸಿಎಂ ಅವರನ್ನು ಹೊಗಳಿದ್ದರು. ಹಿಜಾಬ್ ನಿಷೇಧ ಕಾರಣದಿಂದ ಅವರು ತಾವು ಓದುತ್ತಿದ್ದ ಬಿಕಾಂ ಪದವಿಯನ್ನು ಮೊಟಕುಗೊಳಿಸಿದ್ದರು. ಆದರೆ ಸಿದ್ದರಾಮಯ್ಯ ಅವರ ಮಾತಿನಿಂದ ಸಂತಸಗೊಂಡಿದ್ದ ಅವರು ತಾವು ಮತ್ತೆ ಓದು ಮುಂದುವರೆಸುವುದಾಗಿ ಹೇಳಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಕ್ಕಳಿಗೆ ಶಿಕ್ಷಣ, ಧಾರ್ಮಿಕ ಸ್ವಾತಂತ್ರ್ಯವನ್ನು ಒದಗಿಸಿಕೊಟ್ಟಿದ್ದರು.
ಆದರೆ ಹಿಜಾಬ್ ಕುರಿತ ಅವರ ಹೇಳಿಕೆಯಿಂದ ಕರ್ನಾಟಕದಲ್ಲಿ ಉಂಟಾದ ಪ್ರತಿರೋಧದಿಂದ ಅವರು ತಮ್ಮ ನಿರ್ಧಾರವನ್ನು ಬದಲಿಸಬೇಕಾಯಿತು. ಕಾರಣ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹಿಂದೂಗಳ ಅವಕೃಪೆಗೆ ಒಳಗಾಗಬೇಕಾಗಿ ಇದು ಮತ ಕುಸಿತವಾಗುವ ಭಯ ಕಾಡಿದಂತೆ ಕಂಡು ಬಂದಿದೆ.
ಹಿಜಾಬ್ ನಿಷೇಧದ ಹಿಂಪಡೆಯುವಿಕೆಯ ನಿರ್ಧಾರದ ಕುರಿತು ಲೋಕಸಭೆ ಚುನಾವಣೆಯವರೆಗೂ ಈ ವಿಷಯವನ್ನು ಪ್ರಸ್ತಾಪಿಸದಿರಲು ಸರ್ಕಾರ ಈಗ ನಿರ್ಧರಿಸಿದೆ ಎನ್ನಲಾಗಿದೆ. ಡಿಸೆಂಬರ್ 22 ರಂದು ಮೈಸೂರು ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, 2022 ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದರು.

ಸಿಎಂ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ವಿಷಯ ಬಾಕಿ ಇರುವಾಗಲೂ ಸಿಎಂ ಅವರ ನಿರ್ಧಾರದ ಬಗ್ಗೆ ಹಲವಾರು ನಾಯಕರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಅವರ ಘೋಷಣೆ ಪ್ರಮುಖ ವಿಷಯವಾದ ನಂತರ, ಭಾನುವಾರದಂದು ಸಿಎಂ ಧ್ವನಿಯನ್ನು ತಗ್ಗಿಸಿ, ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.
ಹಿಜಾಬ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಸಚಿವರು ಅತೃಪ್ತಿ ವ್ಯಕ್ತಪಡಿಸಿದ್ದು, ವಿವಾದಿತ ವಿಚಾರದಲ್ಲಿ ನಿಧಾನವಾಗಿ ನಡೆಯುವಂತೆ ಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆಂತರಿಕ ಚರ್ಚೆಯ ನಂತರ, ಕಾಂಗ್ರೆಸ್ ನೇತೃತ್ವದ ಸರ್ಕಾರವು ಈಗ ಕನಿಷ್ಠ ಲೋಕಸಭೆ ಚುನಾವಣೆ ಮುಗಿಯುವವರೆಗೂ ವಿವಾದಾತ್ಮಕ ವಿಷಯವನ್ನು ಪ್ರಸ್ತಾಪಿಸದಿರಲು ನಿರ್ಧರಿಸಿದೆ ಎನ್ನಲಾಗಿದೆ.
ಈ ಕುರಿತು ಸೋಮವಾರ ಪ್ರತಿಕ್ರಿಯಿಸಿದ ಶಿವಕುಮಾರ್, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ. ಹಿಜಾಬ್ ವಿಚಾರವು ಬಿಜೆಪಿಗೆ ಹಿಂದೂ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕರು ಭಯಪಡುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಆದೇಶ ನೀಡುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಈ ಥರದ ನಿಲುವು ತಳೆಯುವ ವಿಚಾರವಾಗಿ ಘರ್ಷಣೆ ನಡೆದಿತ್ತು. ಶಿವಕುಮಾರ್ ಹೈಕಮಾಂಡ್ ನಿಂದ ಸಿದ್ದರಾಮಯ್ಯ ಮೇಲೆ ಒತ್ತಡ ತಂದಿದ್ದು, ಹೈಜಾಬ್ ವಿಷಯದಲ್ಲಿ ಪಕ್ಷ ತಟಸ್ಥ ನಿಲುವು ತಳೆದಿದೆ.
-
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications