ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆಗೆ ಕಾರಣ ಏನು?
ಯಡಿಯೂರಪ್ಪ ಅವರಿಗೆ ಈಗ ಬಂಧನದ ಭೀತಿ ಎದುರಾಗಿದೆ, ಅದರಲ್ಲೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಅರೆಸ್ಟ್ ಮಾಡಲು ಇದೀಗ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಹಾಗಾದ್ರೆ, ಯಡಿಯೂರಪ್ಪ ಅವರ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸುತ್ತಿರುವ ಹಿಂದಿನ ಕಾರಣ ಏನು? ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.
ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ 3 ಬಾರಿ ಸಿಎಂ ಆಗಿದ್ದವರು ಹಾಗೂ ಒಂದು ಬಾರಿ ಅವರು ಡಿಸಿಎಂ ಕೂಡ ಆಗಿದ್ದರು. ಹೀಗಿದ್ದಾಗ ಯಡಿಯೂರಪ್ಪ ಅವರನ್ನು ಅರೆಸ್ಟ್ ಮಾಡಲು ಇದೀಗ ವೇದಿಕೆ ಸಜ್ಜಾಗಿದೆ. ಅದರಲ್ಲೂ ಯಡಿಯೂರಪ್ಪ ಅವರ ವಿರುದ್ದ ಕೇಳಿಬಂದಿರುವ ಗಂಭೀರವಾದ ಪ್ರಕರಣ ಅವರನ್ನ ಮತ್ತೊಮ್ಮೆ ಜೈಲು ಕಂಬಿ ಹಿಂದೆ ತಳ್ಳುವಂತೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾದ್ರೆ ಅಸಲಿಗೆ, ಯಡಿಯೂರಪ್ಪ ಅವರನ್ನ ಅರೆಸ್ಟ್ ಮಾಡಲು ಕರ್ನಾಟಕದ ಪೊಲೀಸರು ಯಾಕೆ ಸಿದ್ಧತೆ ಕೈಗೊಂಡಿದ್ದಾರೆ? ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.

ಯಡಿಯೂರಪ್ಪ ಬಂಧನ ಗ್ಯಾರಂಟಿ?
ಮಾಜಿ ಸಿಎಂ ಯಡಿಯೂರಪ್ಪ ಅವರು 'ಪೋಕ್ಸೊ' ಅಂದ್ರೆ 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ' ಅಡಿಯಲ್ಲಿ ಕೇಸ್ ಎದುರಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರು ದೊಡ್ಡ ಹಿನ್ನಡೆ ಅನುಭವಿಸುತ್ತಿದ್ದಾರೆ. ಇದೀಗ ಕರ್ನಾಟಕದ ಮಾಜಿ ಸಿಎಂಗೆ ದೊಡ್ಡದಾದ ಕಂಟಕ ಎದುರಾಗಿದೆ. ಅದು ಏನೆಂದರೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಯಡಿಯೂರಪ್ಪ ಅವರು ಅರೆಸ್ಟ್ ಆಗುವ ಅಂದ್ರೆ ಬಂಧನ ಆಗುವ ಎಲ್ಲಾ ಸಾಧ್ಯತೆ ದಟ್ಟವಾಗಿ ಇದೆ.
ಅರೆಸ್ಟ್ ಮಾಡಲು ಪೊಲೀಸರ ಸಿದ್ಧತೆ?
ಕೆಲವು ತಿಂಗಳ ಹಿಂದಷ್ಟೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಅಪ್ರಾಪ್ತಗೆ ಅಂದ್ರೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಅಡಿ, ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಂದ್ರ ತನಿಖಾ ದಳ ಅಂದ್ರೆ ಸಿಐಡಿ ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಯಡಿಯೂರಪ್ಪ ಅವರನ್ನು ಯಾವ ಕ್ಷಣದಲ್ಲಿ ಬೇಕಾದರೂ ಬಂಧಿಸುವ ಸಾಧ್ಯತೆ ದಟ್ಟವಾಗಿದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications