ಯಡಿಯೂರಪ್ಪ ಮುಂದಿನ ನಡೆಯ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದೇನು?
ತಮ್ಮ ಮುಖ್ಯಮಂತ್ರಿ ಹುದ್ದೆಯ ಅವಧಿ ಮುಗಿದ ನಂತರ ಆಡ್ವಾಣಿ, ಮುರಳಿ ಮನೋಹರ್ ಜೋಷಿಗೆ ಆದಂತೆ, ಯಡಿಯೂರಪ್ಪನವರಿಗೂ ಆಗಲಿದೆಯೇ? ಈ ರೀತಿಯ ಪ್ರಶ್ನೆ ಮತ್ತೆ ಹುಟ್ಟಿರುವುದು ಕಲ್ಲಡ್ಕ ಪ್ರಭಾಕರ ಭಟ್ ಅವರ ಹೇಳಿಕೆಯ ನಂತರ.
ನಿಮ್ಮನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ. ಯಾವುದಾದರೂ ಒಂದು ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡುತ್ತೇವೆ. ಮಗನಿಗೆ ಸಚಿವ ಸ್ಥಾನ ನೀಡುತ್ತೇವೆ.. ಈ ರೀತಿಯ ಆಫರ್ ಗಳು ಯಡಿಯೂರಪ್ಪನವರಿಗೆ ವರಿಷ್ಠರಿಂದ ಬಂದಿತ್ತು ಎನ್ನುವ ಸುದ್ದಿ ಹರಿದಾಡುತ್ತಿತ್ತು.
ಈಗ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ಕಲ್ಲಡ್ಕ ಪ್ರಭಾಕರ ಭಟ್ ನೀಡಿರುವ ಹೇಳಿಕೆ, ಇದನ್ನೆಲ್ಲಾ ಪುಷ್ಟೀಕರಿಸುವಂತಿದೆ. "ಯಡಿಯೂರಪ್ಪನವರು ನನ್ನಲ್ಲೇ ಈ ಮಾತನ್ನು ಹೇಳಿದ್ದಾರೆ" ಎನ್ನುವ ಹೇಳಿಕೆಯನ್ನೂ ಕಲ್ಲಡ್ಕ ಭಟ್ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ಅವಧಿ (ಸರಕಾರ ಪತನಗೊಳ್ಲದಿದ್ದಲ್ಲಿ ಅಥವಾ ಯಾವುದೇ ಬದಲಾವಣೆ ಆಗದಿದ್ದಲ್ಲಿ) ಇನ್ನು ಮೂರುವರೆ ವರ್ಷವಿದೆ. ಕಲ್ಲಡ್ಕ ಭಟ್ ನುಡಿದದ್ದು, ಇದಾದ ಮೇಲೆ ಬಿಎಸ್ವೈ ಅವರ ಮುಂದಿನ ನಡೆಯ ಬಗ್ಗೆ:

ಡಿಸಿಎಂ ಹುದ್ದೆಯ ಬಗ್ಗೆಯೂ ನನಗೆ ಮಾಹಿತಿ ಇರಲಿಲ್ಲ ಎಂದಿದ್ದ ಯಡಿಯೂರಪ್ಪ
ಅಧಿಕಾರಕ್ಕೆ ಬಂದ ಆರಂಭದ ದಿನಗಳಲ್ಲಿ ಯಡಿಯೂರಪ್ಪನವರಿಗೆ ವರಿಷ್ಠರು ಪೂರ್ಣ ಸ್ವಾತಂತ್ರ್ಯವನ್ನು ನೀಡಿರಲಿಲ್ಲ. ಡಿಸಿಎಂ ಹುದ್ದೆಯ ಬಗ್ಗೆಯೂ ನನಗೆ ಮಾಹಿತಿ ಇರಲಿಲ್ಲ. ಭೇಟಿ ಮಾಡಲು ಅಪಾಯಿಟ್ಮೆಂಟ್ ಕೂಡಾ ನೀಡುತ್ತಿಲ್ಲ. ಹೀಗೆ, ಹಲವು ಬಾರಿ, ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದುಂಟು.

ಕಲ್ಲಡ್ಕ ಪ್ರಭಾಕರ ಭಟ್ ಹೇಳಿದಿಷ್ಟು
ಚಿಕ್ಕಬಳ್ಳಾಪುರದಲ್ಲಿ ಮಾತನಾಡುತ್ತಿದ್ದ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದಿಷ್ಟು, "ಮುಂಬರುವ ಯಾವುದೇ ಚುನಾವಣೆಯಲ್ಲಿ ಯಡಿಯೂರಪ್ಪನವರು ಸ್ಪರ್ಧಿಸುವುದಿಲ್ಲ. ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಉನ್ನತ ಹುದ್ದೆಯನ್ನೂ ಯಡಿಯೂರಪ್ಪನವರು ಅಲಂಕರಿಸಿದ್ದಾರೆ".

ಯಡಿಯೂರಪ್ಪನವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ದುಡಿಯಲಿದ್ದಾರೆ
"ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ದುಡಿಯಲಿದ್ದಾರೆ. ಪಕ್ಷ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ, ಖುದ್ದು ಅವರೇ ನನಗೆ ಹಿಂದೆ ಹೇಳಿದ್ದಾರೆ" ಎನ್ನುವ ಮಾತನ್ನು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಮೂರುವರೆ ವರ್ಷದ ಅವಧಿಯವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ
"ಮುಂದಿನ ಮೂರುವರೆ ವರ್ಷದ ಅವಧಿಯವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ. ಈ ಬಗ್ಗೆ ಯಾವ ಅನುಮಾನವೂ ಬೇಡ. ಅವರು ಉತ್ತಮವಾದ ಆಡಳಿತವನ್ನು ನೀಡಲಿದ್ದಾರೆ" ಎಂದು ಕಲ್ಲಡ್ಕ ಪ್ರಭಾಕರ ಭಟ್, ಬಿಎಸ್ವೈ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications