ಪ್ರತಿಭಟನೆ ಮಾಡಲು ಯಡಿಯೂರಪ್ಪಗೆ ಯಾವ ನೈತಿಕ ಹಕ್ಕಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 27: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಎಸ್ ಯಡಿಯೂರಪ್ಪನವರೇ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ನೀವು ಈಡೇರಿಸಿದ್ದೀರಾ? ಪ್ರತಿಭಟನೆ ಮಾಡಲು ನಿಮಗೆ ಯಾವ ನೈತಿಕ ಹಕ್ಕಿದೆ? ಕಾಂಗ್ರೆಸ್ 2013ರಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಜಾರಿಗೆ ತಂದಿದೆ. ಈ ಚುನಾವಣೆಗೆ ನೀಡಿದ್ದ 5 ಚುನಾವಣೆ ಗ್ಯಾರಂಟಿಗಳನ್ನು ಈಡೇರಿಸಲು ನಾವು ಕ್ರಮ ಕೈಗೊಂಡಿದ್ದೇವೆ. ಬಿಎಸ್ ಯಡಿಯೂರಪ್ಪನವರು ಏನು ಮಾಡಿದ್ದರೂ ಅದು ರಾಜಕೀಯ ಗಿಮಿಕ್ ಆಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಚುನಾವಣಾ ಭರವಸೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜುಲೈ 4 ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಜುಲೈ 3 ರಿಂದ 14 ರವರೆಗೆ ವಿಧಾನಮಂಡಲದ ಅಧಿವೇಶನವನ್ನು ನಿಗದಿಪಡಿಸಲಾಗಿದ್ದು, ಹೊಸ ಸರ್ಕಾರವು ಹೊಸ ಬಜೆಟ್ ಅನ್ನು ಸಹ ಮಂಡಿಸಲಿದೆ.
"ಕರ್ನಾಟಕ ಚುನಾವಣೆಯಲ್ಲಿ ಜನರು ತಮ್ಮ (ಕಾಂಗ್ರೆಸ್) ಗ್ಯಾರಂಟಿ ಕಾರ್ಡ್ ಅನ್ನು ನಂಬಿದ್ದರು, ಈಗ ಅವರು ಮೋಸ ಹೋಗಿದ್ದಾರೆ,.ಅದರ ಪರಿಣಾಮವಾಗಿ ನಾವು (ಬಿಜೆಪಿ) 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಸರ್ಕಾರದ ರೈತ ವಿರೋಧಿ, ಜನವಿರೋಧಿ ನೀತಿಗಳು ಮತ್ತು ಭರವಸೆ ನೀಡಿದಂತೆ 24 ಗಂಟೆಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿರುವ ಕಾರಣ ವಿಧಾನಸಭೆಯ ಒಳಗೆ ಮತ್ತು ಹೊರಗೆ ನಾವು ಪ್ರತಿಭಟನೆ ಮಾಡುತ್ತೇವೆ" ಎಂದು ಯಡಿಯೂರಪ್ಪ ಹೇಳಿದ್ದಾರೆ.

ಪಕ್ಷದ ಸಭೆಯಲ್ಲಿ ಯಡಿಯೂರಪ್ಪ ಅವರು, ಸರ್ಕಾರವು ಇಲ್ಲಿಯವರೆಗೆ ಸಾರ್ವಜನಿಕ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಒಂದೇ ಒಂದು ಗ್ಯಾರಂಟಿಯನ್ನು ಜಾರಿಗೆ ತಂದಿದೆ. ಇದಕ್ಕೂ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ. ಜನತೆಗೆ ದ್ರೋಹ ಬಗೆದಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿ ಹಂತದಲ್ಲೂ ಪ್ರತಿಭಟನೆ ಅಥವಾ ಆಂದೋಲನಗಳನ್ನು ಹಮ್ಮಿಕೊಂಡು ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ.
ಈ ಹಿಂದೆ ಜೂನ್ 5 ರಂದು ಕರ್ನಾಟಕ ಸಿಎಂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲಾ ಐದು ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಜಾರಿಗೆ ತರಲಾಗುವುದು. ಇದಕ್ಕಾಗಿ ಪ್ರತಿ ವರ್ಷ ಅಂದಾಜು 50,000 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ತಿಳಿಸಿದ್ದರು. ಮೇ 20 ರಂದು ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿ ಆಡಳಿತಾರೂಢ ಬಿಜೆಪಿಯನ್ನು ಹೊರಹಾಕಿತು, ಇದು ದಕ್ಷಿಣದ ಏಕೈಕ ರಾಜ್ಯದಿಂದ 66 ಸ್ಥಾನಗಳನ್ನು ಪಡೆದುಕೊಂಡಿತ್ತು.












Click it and Unblock the Notifications