Get Updates
Get notified of breaking news, exclusive insights, and must-see stories!

ಮುಂದುವರೆದ ಬಿಜೆಪಿ ಆಪರೇಷನ್:‌ ಕೈ ಬಿಡದಂತೆ ಲಕ್ಷ್ಮಣ್‌ ಸವದಿಗೆ ಡಿಕೆ ಶಿವಕುಮಾರ್‌ ಕೊಟ್ಟ ಆಫರ್ ಏನು?

ಬೆಂಗಳೂರು, ಜನವರಿ 31: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್‌, ಲೋಕಸಭಾ ಚುನಾವಣೆ ಆಪರೇಷನ್‌ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ನ ಅಸಮಾಧಾನಿತ ನಾಯಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕಿತ್ತು. ಆದರೆ, ಇದೀಗ ಬಿಜೆಪಿ ರಿವರ್ಸ್‌ ಆಪರೇಷನ್‌ ನಡೆಸಿದೆ.

ಹೌದು, ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿದ್ದ ಬಳಿಕ ಬಿಜೆಪಿಯಿಂದ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಹಲವು ಹಿರಿಯ ನಾಯಕರನ್ನ ಕರೆತರುವ ನಿಟ್ಟಿನಲ್ಲಿ ತಂತ್ರಗಾರಿಕೆ ಎಣೆದಿದ್ದು, ಅದರಂತೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನ ಬಿಜೆಪಿ ಕರೆತಂದಿದ್ದಾರೆ. ಇದೀಗ ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ಅವರನ್ನ ಬಿಜೆಪಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಜವಾಬ್ದಾರಿ ನೀಡಿದ್ದು, ಡಿ ಕೆ ಶಿವಕುಮಾರ್‌ ಪಕ್ಷದಲ್ಲೇ ಉಳಿಸಿಕೊಳ್ಳಲು ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ.

What Offer Did DK Shivakumar Extend to Laxman Savadi to Prevent His Return to BJP from Congress?

ಇತ್ತ ಬಿಜೆಪಿಗೆ ಲಕ್ಷ್ಮಣ್‌ ಸವದಿ ಅವರು ಮರು ಸೇರ್ಪಡೆಯಾಗುವುದನ್ನ ತಡೆಯುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಈಗಾಗಲೇ ಲಕ್ಷ್ಮಣ್‌ ಸವದಿ ಅವರ ಜೊತೆಗೆ ಸುದೀರ್ಘ ಚರ್ಚೆಯನ್ನ ನಡೆಸಿದ್ದಾರೆ. ಈ ವೇಳೆ ನಾನು ಬಿಜೆಪಿಗೆ ಹೋಗಲ್ಲ ಅಂದಿದ್ದರಂತೆ. ಬಿಜೆಪಿ ಟಿಕೆಟ್​ ಸಿಗದೇ ಕಾಂಗ್ರೆಸ್​ ಸೇರಿ ಅಥಣಿ ಕ್ಷೇತ್ರದಿಂದ ಶಾಸಕರಾಗಿಯೂ ಲಕ್ಷ್ಮಣ ಸವದಿ ಗೆದ್ದು ಬಂದರು. ಆದರೆ ಸವದಿಯವರು ಬಿಜೆಪಿಗೆ ವಾಪಸ್​ ಬರ್ತಾರೆ ಎನ್ನುವ ಚರ್ಚೆ ಬೆನ್ನಲ್ಲೇ ಕನಕಪುರದ ಬಂಡೆ ಡಿ ಕೆ ಶಿವಕುಮಾರ್‌ ಅವರು ಸವದಿ ಜೊತೆಗೆ ಚರ್ಚೆ ನಡೆಸಿದ್ದಾರೆ.

ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಹಲವು ಮೂಲ ಬಿಜೆಪಿ ನಾಯಕರನ್ನ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಂತ್ರಗಾರಿಕೆಯನ್ನ ಎಣೆದಿದ್ದಾರೆ. ಜಗದೀಶ್‌ ಶೆಟ್ಟರ್‌ ಅವರನ್ನ ಗಾಳ ಹಾಕುವ ಮೂಲಕ ರಾಜಹುಲಿ ಯಶಸ್ವಿಯಾಗಿದ್ದು, ಇದೀಗ ಲಕ್ಷ್ಮಣ್‌ ಸವದಿ ಅವರಗೆ ಗಾಳ ಹಾಕಿದ್ದಾರೆ. ಹೀಗಾಗಿ ಲಕ್ಷ್ಮಣ ಸವದಿಯವರನ್ನ ಕರೆಸಿ ಮಾತುಕತೆನೂ ನಡೆಸಿ, ಬಿಜೆಪಿಗೆ ಹೋಗದಂತೆ ಬ್ರೈನ್​ ವಾಶ್​ ಕೂಡ ಮಾಡಿದ್ದರು. ಜೊತೆಗೆ ಉನ್ನತ ಸ್ಥಾನಮಾನದ ಆಫರ್​ ಕೂಡ ಕೊಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಲಕ್ಷ್ಮಣ್‌ ಸವದಿಗೆ ಡಿ ಕೆ ಶಿವಕುಮಾರ್‌ ಕೊಟ್ಟ ಆಫರ್‌ ಏನು?

ಲೋಕಸಭಾ ಚುನಾವಣೆ ಹಿನ್ನಲೆ ಶಾಸಕರಿಗೆ ಈಗಾಗಲೇ ನಿಗಮ ಮಂಡಳಿಯಲ್ಲಿ ಅವಕಾಶವನ್ನ ಕಲ್ಪಿಸಿದ್ದು, ನಿಗಮ ಮಂಡಳಿಯಲ್ಲಿ ನಿಮ್ಮ ಬೆಂಬಲಿಗರಿ ಅಥವಾ ನಿಮ್ಮ ಆಪ್ತರಿಗೆ ಸ್ಥಾನಮಾನ ಕಲ್ಪಸಿಕೊಡುವ ನಿಟ್ಟಿನಲ್ಲಿ ಆಫರ್‌ ನೀಡಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕ ಎರಡು-ಮೂರು ಲೋಕಸಭಾ ಕ್ಷೇತ್ರವನ್ನ ಗೆಲ್ಲಿಸುವ ನಿಟ್ಟಿನಲ್ಲಿ ಜವಾಬ್ದಾರಿಯನ್ನ ನೀಡುವ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಲೋಕಸಭಾ ಚುನಾವಣೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ, ಲೋಕಸಭಾ ಚುನಾವಣೆಯ ಬಳಿಕ ನಿಮ್ಮನ್ನ ಮಂತ್ರಿ ಮಾಡ್ತೀವಿ ಎನ್ನುವ ಆಫರ್‌ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ನಿಮ್ಮ ಪುತ್ರನಿಗೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನವನ್ನ ನೀಡುವ ಭರವಸೆಯನ್ನ ನೀಡಿದ್ದಾರೆ. ಇನ್ನೂ ಲೋಕಸಭಾ ಚುನಾವಣೆ ಹೊತ್ತಲಿ ಬಿಜೆಪಿಯ ಪ್ರಮುಖರನ್ನೂ ಕಾಂಗ್ರೆಸ್​ಗೆ ಕರೆತರಲು ಟಾಸ್ಕ್​ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+