ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ ಮಂಡನೆಗೆ ಕ್ಷಣಗಣನೆ : ಏನಿರಲಿದೆ ಬಜೆಟ್ ನ ಹೈಲೈಟ್ಸ್ ?

By Yashaswini
|
Google Oneindia Kannada News

Recommended Video

ಕರ್ನಾಟಕ ಬಜೆಟ್ 2018 : ಬಜೆಟ್ ನ ಹೈಲೈಟ್ಸ್ | ಬಜೆಟ್ ಮಂಡನೆಗೆ ಕ್ಷಣಗಣನೆ | Oneindia Kannada

ಮೈಸೂರು, ಫೆಬ್ರವರಿ 16 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಲಿರುವ, ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಕೊನೆಯ ಹಾಗೂ ಐದನೆಯ ಬಜೆಟ್ ಮಂಡನೆಗೆ ಅಂತಿಮ ಕಸರತ್ತು ಆರಂಭವಾಗಿದೆ.

ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಮಂಡಿಸುವ ಬಜೆಟ್ ಇದಾಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಆದ್ಯತೆ ನೀಡಲೇಬೇಕಾಗಿದ್ದು, ಅವುಗಳಿಗೆ ಅನುದಾನ ಹೊಂದಾಣಿಕೆ ಮಾಡುವುದೇ ಮುಖ್ಯಮಂತ್ರಿಗಳ ಪಾಲಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ನೀಡಿರುವ ಜನಪ್ರಿಯ ಯೋಜನೆಗಳಿಗೆ ಹೊರತಾಗಿ ಹೊಸ ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ಕರ್ನಾಟಕ ಬಜೆಟ್ 2018 : ಚುನಾವಣಾ ಬಜೆಟ್‌ ನತ್ತ ಎಲ್ಲರ ಚಿತ್ತಕರ್ನಾಟಕ ಬಜೆಟ್ 2018 : ಚುನಾವಣಾ ಬಜೆಟ್‌ ನತ್ತ ಎಲ್ಲರ ಚಿತ್ತ

ರಾಜ್ಯ ಸರ್ಕಾರಿ ನೌಕರರ 6ನೇ ವೇತನ ಆಯೋಗದ ಶಿಫಾರಸು ಗಳನ್ನು ಯಥಾವತ್ತಾಗಿ ಜಾರಿಗೊಳಿಸುವ ಜತೆಗೆ ಸರ್ಕಾರಿ ನೌಕರರ ವೇತನದಲ್ಲಿ ಶೇ.30 ರಷ್ಟು ಹೆಚ್ಚಳವನ್ನು ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆಗಳಿವೆ. ಅಲ್ಲದೆ, ವಸ್ತ್ರಭಾಗ್ಯ ಮತ್ತೆ ಜಾರಿಗೆ ತರುವ ಬಗ್ಗೆಯೂ ಚಿಂತನೆ ನಡೆದಿದೆ.

What will be in today Budget

ಈ ಬಾರಿ ಬಜೆಟ್ ಗಾತ್ರ 2.10 ಲಕ್ಷ ಕೋಟಿ ರೂ. ಮೀರುವ ಸಾಧ್ಯತೆ ಇದೆ. ಇದರೊಂದಿಗೆ ಸಾರ್ವತ್ರಿಕ ವಿಮಾ ಯೋಜನೆಗೂ ಅನುದಾನ ಒದಗಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಈ ಬಾರಿ 30,000 ಕೋಟಿ ರೂ. ಮೀಸಲಿಡುವ ಬಗ್ಗೆಯೂ ಸಿಎಂ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಇದರಿಂದ ಅದಕ್ಕೆ ತಕ್ಕಂತೆ ರಾಜ್ಯದ ಆದಾಯ ಹೆಚ್ಚಿಸಿಕೊಳ್ಳಲು ಸರ್ಕಾರ ಅಬಕಾರಿ, ಪೆಟೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನೇ ಹೆಚ್ಚಾಗಿ ನೆಚ್ಚಿಕೊಳ್ಳಬೇಕು. ಆದರೂ ಜನಪ್ರಿಯ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕಾದರೆ ಸಾಲದ ಪ್ರಮಾಣ ಹೆಚ್ಚಿಸುವುದು ಅನಿವಾರ್ಯ ಎನ್ನಲಾಗಿದೆ.

ಚುನಾವಣಾ ಪೂರ್ವ ಬಜೆಟ್ ನಲ್ಲಿ ಏನೆಲ್ಲ ಸಿಗಬಹುದು?ಚುನಾವಣಾ ಪೂರ್ವ ಬಜೆಟ್ ನಲ್ಲಿ ಏನೆಲ್ಲ ಸಿಗಬಹುದು?

ಪ್ರಸಕ್ತ ಹಣಕಾಸು ವರ್ಷದಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆದಾಯ ಸಂಗ್ರಹ ಕುರಿತಂತೆ ಸಾಕಷ್ಟು ಗೊಂದಲ ಕಾಣಿಸಿಕೊಂಡರೂ ಇದೀಗ ಸಮಸ್ಯೆ ಬಹುತೇಕ ಬಗೆಹರಿದಿರುವುದ ರಿಂದ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗಿದೆ.

ಹಣಕಾಸು ವರ್ಷದ ಕೊನೆಯ 2 ತಿಂಗಳಲ್ಲಿ ತೆರಿಗೆ ಸಂಗ್ರಹ ಮತ್ತಷ್ಟು ಸುಧಾರಣೆ ಕಾಣುವ ಸಾಧ್ಯತೆ ಇದೆ. ಜಿಎಸ್ ಟಿಯಿಂದ ರಾಜ್ಯದ ವರಮಾನಕ್ಕಾಗುವ ನಷ್ಟವನ್ನು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ (ವಾರ್ಷಿಕ ಶೇ.15ರಷ್ಟು ಪ್ರಮಾಣದಲ್ಲಿ ತೆರಿಗೆ ಏರಿಕೆ ಅಂದಾಜಿನಂತೆ) ನೀಡಿದರೆ ವರ್ಷಾಂತ್ಯಕ್ಕೆ ತೆರಿಗೆ ಸಂಗ್ರಹ ಗುರಿ 89,957 ಕೋಟಿ ರೂ.ಗಳನ್ನು ಮೀರಬಹುದು ಎಂದು ಅಂದಾಜು ಮಾಡಲಾಗಿದೆ.

ಮುಖ್ಯಮಂತಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಮಂಡಿಸುತ್ತಿರುವ 13ನೇ ಮುಂಗಡಪತ್ರ ಇದಾಗಿದೆ. ಆ ಮೂಲಕ ಅವರು ಮಾಜಿ ಮುಖ್ಯಮಂತಿ ರಾಮಕೃಷ್ಣ ಹೆಗಡೆ ಅವರ ದಾಖಲೆ ಸರಿಗಟ್ಟಲಿದ್ದಾರೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿ 6 ಬಾರಿ ಹಾಗೂ ವೀರೇಂದ ಪಾಟೀಲ್ ಮತ್ತು ಎಸ್.ನಿಜಲಿಂಗಪ್ಪ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ 7 ಬಾರಿ ಮುಂಗಡ ಪತ್ರ ಮಂಡಿಸಿದ್ದರು. ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್, ಧರ್ಮಸಿಂಗ್ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ 8 ಬಾರಿ ಮುಂಗಡಪತ್ರ ಮಂಡಿಸಿದ್ದ ಸಿದ್ದರಾಮಯ್ಯ ಅವರು, ಮುಖ್ಯಮಂತಿಯಾಗಿ 5ನೇ ಬಜೆಟ್ ಮಂಡಿಸಲಿದ್ದಾರೆ.

English summary
Chief minister Siddaramaiah presenting his last budget pf this Government in the election year. Lot of popular schemes are in pipeline for this budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X