ವೀಲಿಂಗ್ ಮಾಡಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳು
ರಾಮನಗರ, ಜುಲೈ 02 : ವೀಲಿಂಗ್ ಮಾಡಲು ಹೋದ ಇಬ್ಬರು ವಿದ್ಯಾರ್ಥಿಗಳು ಬಸ್ಸಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಮೃತಪಟ್ಟವರು ಬೆಂಗಳೂರಿನ ಬೃಂದಾವನ ಕಾಲೇಜಿನ ವಿದ್ಯಾರ್ಥಿಗಳು.
ಶನಿವಾರ ಬೆಳಗ್ಗೆ ರಾಮನಗರದ ಅರ್ಚಕರಹಳ್ಳಿ ಸಮೀಪದ ಕುಂಬಾಪುರದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಕೇರಳ ಮೂಲದ ಅಭಿನವ್ (22), ಒರಿಸ್ಸಾ ಮೂಲದ ನವಜೋತ್ (23) ಎಂದು ಗುರುತಿಸಲಾಗಿದೆ. [ಯುವತಿ ಜೀವ ತೆಗೆದ ಟಿಪ್ಪರ್ ಲಾರಿ]

ವಿದ್ಯಾರ್ಥಿಗಳು ಪಲ್ಸರ್ ಮತ್ತು ಹಿರೋ ಹೊಂಡಾ ಬೈಕ್ನಲ್ಲಿ ವೀಲಿಂಗ್ ಮಾಡುತ್ತಿದ್ದರು. ಈ ವೇಳೆ ಪಲ್ಸರ್ ಬೈಕ್ನಲ್ಲಿದ್ದವರು ನಿಯಂತ್ರಣ ಕಳೆದುಕೊಂಡು ಎದುರಿಗಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಆಗ ಎರಡೂ ಬೈಕ್ನಲ್ಲಿದ್ದವರು ರಸ್ತೆ ಮೇಲೆ ಬಿದ್ದಿದ್ದಾರೆ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]
ಆಗ ಹಿಂಬದಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಭಿನವ್ ಮತ್ತು ನವಜೋತ್ ಮೇಲೆ ಹತ್ತಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮನಗರ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದಾರೆ.













Click it and Unblock the Notifications