Get Updates
Get notified of breaking news, exclusive insights, and must-see stories!

ಈಗಿನ ಸ್ಥಿತೀಲಿ 80 ಸ್ಥಾನ ಗೆಲ್ಲಬಹುದು, ಅಮಿತ್ ಶಾ ಫುಲ್ 'ಕ್ಲಾಸ್'

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಬಿಜೆಪಿಗೆ ರಿಯಾಲಿಟಿ ಚೆಕ್ ಮುಂದಿಟ್ಟಿದ್ದಾರೆ. ಅಂದರೆ ಇಲ್ಲಿನ ವಾಸ್ತವ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ಬಳಿ ಮೂರು ಸಮೀಕ್ಷೆ ವರದಿಗಳನ್ನು ಇಟ್ಟುಕೊಂಡು, ಇವತ್ತೇ ಕರ್ನಾಟಕ ವಿಧಾನಸಭೆ ಚುನಾವಣೆ ನಡೆದರೆ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಬಿಜೆಪಿ ನಾಯಕರನ್ನು ಕೇಳಿದ್ದಾರೆ.

ಚಿತ್ರಗಳು : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಪ್ರವಾಸ

ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು, ನೂರಿಪ್ಪತ್ತೈದರಿಂದ ನೂರೈವತ್ತು ಸ್ಥಾನಗಳಲ್ಲಿ ಗೆಲ್ತೀವಿ ಅಂದಿದ್ದಾರೆ. ಆ ಮಾತಿಗೆ ತಿರುಗೇಟು ನೀಡಿದ ಶಾ, ಇವತ್ತೇ ಚುನಾವಣೆ ನಡೆದರೆ ವಾಸ್ತವವಾಗಿ ಬಿಜೆಪಿ ಎಂಬತ್ತು ಸ್ಥಾನಗಳಲ್ಲಿ ಗೆಲ್ಲಬಹುದು ಅಷ್ಟೇ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ಪಕ್ಷದ ನಾಯಕರ ಜತೆಗೆ ನಿರಂತರ ಸಭೆಗಳನ್ನು ನಡೆಸಿದ್ದಾರೆ. ಪ್ರತಿ ಸಭೆಯಲ್ಲೂ ಚುನಾವಣೆಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕಷ್ಟು ಕೆಲಸಗಳು ಬಾಕಿಯಿವೆ. ಇನ್ನೂ ಬಹಳ ದೂರದ ಹಾದಿಯನ್ನು ಸಾಗಬೇಕಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.

ಸಮಸ್ಯೆಗಳ ಕಡೆಗೆ ಬೊಟ್ಟು ಮಾಡಿದ ಅಮಿತ್ ಶಾ

ಸಮಸ್ಯೆಗಳ ಕಡೆಗೆ ಬೊಟ್ಟು ಮಾಡಿದ ಅಮಿತ್ ಶಾ

ಎಲ್ಲೆಲ್ಲಿ ಸಮಸ್ಯೆಗಳಿವೆ ಎಂಬುದನ್ನು ಬೊಟ್ಟು ಮಾಡಿದ್ದಾರೆ ಅಮಿತ್ ಶಾ. ತಮಗೆ ದೊರೆತಿರುವ ವರದಿ ಪ್ರಕಾರ ಯಾವ ಕ್ಷೇತ್ರದಲ್ಲಿ ಬಿಜೆಪಿ ದುರ್ಬಲವಾಗಿದೆ, ಎಲ್ಲೆ ಕೈ ತಪ್ಪಿ ಹೋಗುವಂತಿದೆ. ಈ ಅಂಶಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ ಎಂದು ಪಕ್ಷದವರಿಗೆ ಸೂಚನೆಗಳನ್ನು ನೀಡಿದ್ದಾರೆ.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ

ಈ ಹಿಂದೆ ಅಂದರೆ 2013ರಲ್ಲಿ ಪಕ್ಷದ ಆಂತರಿಕ ಜಗಳ ಹಾಗೂ ಆ ಅವಧಿಯನ್ನು ಮುಗಿಸಲು ಬಿಜೆಪಿ ಹೆಣಗಾಡಿದ್ದರ ಬಗ್ಗೆ ಕೂಡ ಪ್ರಸ್ತಾವ ಮಾಡಿದ್ದಾರೆ ಅಮಿತ್ ಶಾ. ಅಂಥ ಸನ್ನಿವೇಶಕ್ಕೆ ಅವಕಾಶ ಕೊಡಬೇಡಿ. ನಿಮ್ಮ ಪರಸ್ಪರ ಕಚ್ಚಾಟವನ್ನು ಪಕ್ಕಕ್ಕಿಡಿ. ಪಕ್ಷ ಮುಖ್ಯ. ಅದಕ್ಕಿಂತ ಯಾರೂ ಹೆಚ್ಚಲ್ಲ ಎಂದಿದ್ದಾರೆ.

ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನ

ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನ

ಪಕ್ಷದ ಹಲವರು ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ. ಆಗ ಅಮಿತ್ ಶಾ, ಏನೂ ಯೋಚಿಸಬೇಡಿ. ನಾವು ಅದನ್ನು ನೋಡಿಕೊಳ್ತೇವೆ. ಸದ್ಯಕ್ಕೆ ಎಲ್ಲ ಹಂತದಲ್ಲೂ ಪಕ್ಷವನ್ನು ಬಲಪಡಿಸುವ ಕಡೆಗೆ ಗಮನಕೊಡಿ. ಭ್ರಷ್ಟಾಚಾರದಂಥ ವಿಚಾರ ಬಂದಾಗ ಸರಕಾರದ ವಿರುದ್ಧ ಪ್ರಬಲ ಹೋರಾಟ ಸಂಘಟಿಸಬೇಕು ಎಂದು ಹೇಳಿದ್ದಾರೆ.

ರಾಜ್ಯ ಸರಕಾರದ ವೈಫಲ್ಯವನ್ನು ಜನರ ಮುಂದಿಡಲು ಏನು ಮಾಡಿದ್ದೀರಿ?

ರಾಜ್ಯ ಸರಕಾರದ ವೈಫಲ್ಯವನ್ನು ಜನರ ಮುಂದಿಡಲು ಏನು ಮಾಡಿದ್ದೀರಿ?

ರಾಜ್ಯ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವುದಕ್ಕೆ ಎಷ್ಟು ಸಭೆಗಳನ್ನು ಮಾಡಿದ್ದೀರಿ ಎಂದು ಕೂಡ ಇದೇ ವೇಳೆ ಪ್ರಶ್ನಿಸಲಾಗಿದೆ. ಈ ಬಗ್ಗೆ ಬಿಜೆಪಿ ನಾಯಕರೊಬ್ಬರು ಮಾತನಾಡಿದ್ದು, "ಹಲವು ವಿಚಾರದಲ್ಲಿ ಅಸಮಾಧಾನ ಇದೆ. ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ಸರಿಯಾದ ಹೋರಾಟ ಸಂಘಟಿಸಿಲ್ಲ ಎಂಬುದನ್ನು ಅಮಿತ್ ಶಾ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು" ಎಂಬ ಮಾಹಿತಿ ನೀಡಿದ್ದಾರೆ.

ಜನರ ಮನಸ್ಥಿತಿ ತಿಳಿಯಲು ಪ್ರಯತ್ನಿಸಿ

ಜನರ ಮನಸ್ಥಿತಿ ತಿಳಿಯಲು ಪ್ರಯತ್ನಿಸಿ

ರಾಜ್ಯ ಸರಕಾರದ ಹಲವು ವಿವಾದಗಳು ವರದಿಯಾದವು. ಆದರೆ ಅಂಥ ಎಲ್ಲ ಸಂದರ್ಭದಲ್ಲಿ ಬಿಜೆಪಿಯು ದೊಡ್ಡಮಟ್ಟದ ಧ್ವನಿ ಎತ್ತಿಲ್ಲ ಅಥವಾ ಬಾಯಿ ಮುಚ್ಚಿಕೊಂಡು ಕೂತಿದೆ. ಉದ್ದುದ್ದ ಭಾಷಣಗಳು ಬಿಗಿಯುವುದು, ಫೋಟೋಗಳಿಗೆ ಪೋಸ್ ಕೊಡುವುದನ್ನು ನಿಲ್ಲಿಸಿ. ಕಾಂಗ್ರೆಸ್ ನ ಕೊನೆ ಹಾಡಲು ಪ್ರಯತ್ನಿಸಿ. ಜನರ ಮನಸ್ಸನ್ನು ತಿಳಿದುಕೊಳ್ಳುವುದಕ್ಕೆ ಈಗಿನಿಂದಲೇ ಶುರು ಮಾಡಿ. ಚುನಾವಣೆಯ ಮನಸ್ಥಿತಿಯಲ್ಲೇ ಕೆಲಸ ಆರಂಭಿಸಿ. ಇಲ್ಲದಿದ್ದರೆ ನಾವಿಲ್ಲಿ ಗೆಲ್ಲಲ್ಲ ಎಂದಿದ್ದಾರೆ ಅಮಿತ್ ಶಾ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+