ಡಬಲ್ ಇಂಜಿನ್ ಸರ್ಕಾರ ಸಮಸ್ಯೆ ಏನಂದರೆ ಜನರಿಗೆ ಕಷ್ಟ ಬರುವಾಗ ಇಂಜಿನ್ ಆಫ್ ಆಗುತ್ತೆ:ಯು ಟಿ ಖಾದರ್ ಲೇವಡಿ
ಬೆಂಗಳೂರು,ಫೆಬ್ರವರಿ15: ಡಬಲ್ ಇಂಜಿನ್ ಸರ್ಕಾರ ಅಂತಾರೆ. ಡಬಲ್ ಇಂಜಿನ್ ಸರ್ಕಾರ ಸಮಸ್ಯೆ ಏನಂದರೆ, ಜನರಿಗೆ ಕಷ್ಟ ಬರುವಾಗ ಇಂಜಿನ್ ಆಫ್ ಆಗುತ್ತೆ ಯಾರದೂ ಇಂಜಿನ್ ವರ್ಕ್ ಆಗಲ್ಲ ಎಂದು ಶಾಸಕ ಯು ಟಿ ಖಾದರ್ ಲೇವಡಿ ಮಾಡಿದರು.
ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರ ಸರ್ವ ಜನಾಂಗಕ್ಕೆ ಒಂದು ಕಾರ್ಯಕ್ರಮ ಸಮರ್ಪಕವಾಗಿ ಕೊಟ್ಟಿಲ್ಲ. ನಮ್ಮ ಸರ್ಕಾರ ಹಲವಾರು ಯೋಜನೆ ನೀಡಿತ್ತು, 75 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿತ್ತು. ಈ ದೇಶದ ಎಲ್ಲಾ ರೈತರಿಗೆ ಸಾಲ ಮನ್ನಾ ಮಾಡಿತ್ತು. ಜನ ನರಳಾಡಿ ನರಳಾಡಿ ಸತ್ತವತು ಸತ್ತ, ಬದುಕಿದವ ಬದುಕಿದ ಎಂದು ಕಿಡಿಕಾರಿದರು.
ಡಬಲ್ ಇಂಜಿನ್ ಸರ್ಕಾರದ ಸೈಲೆಂನ್ಸರ್ ನಲ್ಲಿ ಬರುವ ಹೊಗೆ ಇದೆಯಲ, ಅದು ವಿಷಕಾರಿ ಹೊಗೆ. ಆ ಹೊಗೆ ಸಮಾಜ ನಾಶ ಮಾಡುವ ಹೊಗೆ ಅದು. ಅದರ ಇಂಜಿನ್ ಕಟ್ಟಿದ್ದೇ ಇದನ್ನು ಜನರು ಚುನಾವಣೆಯಲ್ಲಿ ಕಿತ್ತು ಬಿಸಾಕುತ್ತಾರೆ. ಸೈಲೆನ್ಸರ್ ಶಬ್ದ ಮಾಡುತ್ತೆ ಹೊರೆತು ಬಳಸಲಾಗದ ಪರಿಸ್ಥಿತಿ ಆಗಿದೆ ಎಂದು ಹೇಳಿದರು.

ಕಾಂಗ್ರೆಸ್ ಏಳು ಕೆ.ಜಿ ಅಕ್ಕಿ ಕೊಡುತ್ತಿತ್ತು, ಅದು ಇಂದು ಐದು ಕೆ.ಜಿಗೆ ತಂದು ನಿಲ್ಲಿಸಿದ್ದಾರೆ. ಸರಿಯಾದ ಟೈಮ್ ನಲ್ಲಿ ಸ್ಟೋರಿಗೆ ಅಕ್ಕಿ ಕೂಡ ಬರಲ್ಲ, ಅಕ್ಕಿ ಕ್ವಾಲಿಟಿ ಕೂಡ ನೋಡಲ್ಲ. ಬಿಪಿಎಲ್ ಕಾರ್ಡ್ ಇನ್ನೂ ಕೂಡ ಕೊಡುತ್ತಿಲ್ಲ. ನಮ್ಮ ಸರ್ಕಾರದಲ್ಲಿ 25 ಲಕ್ಷ ಅಧಿಕ ಮಂದಿಗೆ ಬಿಪಿಎಲ್ ಕಾರ್ಡ್ ಕೊಟ್ಟಿತ್ತು. ಐದು ನಿಮಿಷಗಳಲ್ಲಿ ಸಿದ್ದತೆ ಮಾಡಿಕೊಡುತ್ತಿದ್ವಿ, ಆದರೆ ಸರ್ಕಾರಕ್ಕೆ ಯಾಕೆ ಆಗ್ತಿಲ್ಲ. ಆಸ್ಪತ್ರೆಗೆ ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡಿದರು. ಬಡವರು ಹಾರ್ಟ್ ಆಪರೇಷನ್ ಮಾಡೋಕೆ ಎರಡು ಲಕ್ಷ ಬೇಕು. ಕಾರ್ಡ್ ಇಲ್ಲದವರು ಎಲ್ಲಿಗೆ ಹೋಗಬೇಕು.? ಆಸ್ಪತ್ರೆಯ ಬಿಲ್ ಕಟ್ಟೋದು ಎಲ್ಲಿಂದ.? ಎಂದು ಪ್ರಶ್ನಿಸಿದರು.

ಕರಾವಳಿಯಲ್ಲಿ ಬಾಲ್ಡ್ ರೈಸ್ ತಿನ್ನೋದು. ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಅಂಗಾರ ಅವರು ಕುಚಲಕ್ಕಿ ಕೊಡಿ ಅಂತ ಸಿಎಂಗೆ ಮನವಿ ಕೊಡುತ್ತಾರೆ. ಇದುವರೆಗೂ ಕುಚಲಕ್ಕಿ ಬಂದಿಲ್ಲ. ಕುಚಲಕ್ಕಿ ಕೊಡದವರು ಏನೋ ಮಾಡಿದ್ದಾರೆ ಅಂತ ಬಿಂಬಿಸುವುದು ಎಷ್ಟು ಮಟ್ಟಿಗೆ ಸರಿ.? ಮಾರ್ಕ್ಸ್ ಕಾರ್ಡ್ ಅಂತ ಜನ ಸೊನ್ನೆ ಕೊಟ್ಟೇ ಕೊಡುತ್ತಾರೆ ಎಂದು ಹೇಳಿದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications