3 ವರ್ಷಕ್ಕೂ ಮೊದಲೆ ಕ್ಷೇತ್ರ ಘೋಷಣೆ; ಸಮಯ ಬಂದರೆ ಈ ಕ್ಷೇತ್ರದಿಂದ ನನ್ನ ಮುಂದಿನ ಸ್ಪರ್ಧೆ ಎಂದ ನಿಖಿಲ್ ಕುಮಾರಸ್ವಾಮಿ
ರಾಮನಗರ, ಜೂನ್ 26: ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ ಮಾಡುವುದಾಗಿ ತಿಳಿಸಿದರು. ಕುಮಾರಸ್ವಾಮಿ ಅವರಿಗೆ ದೆಹಲಿಯಲ್ಲಿ ಕೆಲಸವಿಲ್ಲ ರಾಜ್ಯಕ್ಕೆ ಬರ್ತಾರೆಂಬ ಡಿ.ಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು; ಹೌದಪ್ಪ.. ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಿಸಿದ್ದು ಡಿ.ಕೆ ಸುರೇಶ್ ಅವರ ಇಲ್ಲ ಶಿವಕುಮಾರ್ ಕೊಡಿಸಿದ್ರಾ.? ಎಂದು ಡಿ.ಕೆ ಬ್ರದರ್ಸ್ ಗೆ ಟಾಂಗ್ ನೀಡಿದರು.

ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕುಮಾರಣ್ಣ ನೆರವಿಗೆ ಬಂದಿದ್ದಾರೆ. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಣ್ಣನ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ ಎಂದರು. ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವುದರಿಂದ ಅಭಿವೃದ್ಧಿ ಆಗಲ್ಲ. ಕೆಂಗಲ್ ಹನುಮಂತಯ್ಯ ಅವರ ಕಟ್ಟಿದ ರಾಮನಗರ ಹೆಸರನ್ನು ಕಾಂಗ್ರೆಸ್ ಅಳಿಸಿದೆ. ಆದರೆ ರಾಮನಗರ ಜನರ ಹೃದಯದಲ್ಲಿ ರಾಮನಗರ ಶಾಶ್ವತವಾಗಿ ಉಳಿದಿದೆ ಮಿಸ್ಟರ್ ಡಿ.ಕೆ ಶಿವಕುಮಾರ್ ಎಂದು ಟಾಂಗ್ ನೀಡಿದರು.
ಒಂದು ರಸ್ತೆಗೆ, ಸರ್ಕಾರಿ ಶಾಲೆ ದುರಸ್ತಿಗೆ ಹಣವಿಲ್ಲ ಈ ಸರ್ಕಾರದಲ್ಲಿ. ಆದರೆ ಮಧ್ಯವರ್ತಿಗಳ ಮೂಲಕ ಹೋದ್ರೆ ಎಲ್ಲವೂ ಸಿಗುತ್ತೆ. ಆ ಸ್ಥಿತಿ ಇದೇ ಕಾಂಗ್ರೆಸ್ ಪಕ್ಷದಲ್ಲಿ. ವಸತಿ ಇಲಾಖೆಯಲ್ಲಿ ಮನೆ ಪಡೆಯಬೇಕಾದ್ರೆ ಗುತ್ತಿಗೆದಾರರ ಮೂಲಕ ಹೋಗುವ ಪರಿಸ್ಥಿತಿ ನಿರ್ಮಾವಾಗಿದೆ ಎಂದು ಆರೋಪಿಸಿದರು.
ಕಾವೇರಿಗೆ ಆರತಿ ಸರ್ಕಾರ ಹಣ ಖರ್ಚು ಮಾಡ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿಗೆ ಆರತಿ ಮಾಡುತ್ತಿರುವುದು ಸ್ವಾಗತ ಮಾಡುತ್ತೇನೆ, ಅದು ನಮ್ಮ ಸಂಸ್ಕೃತಿ. ಆದರೆ ಅದಕ್ಕೆ ಕೋಟಿ, ಕೋಟಿ ಹಣ ಖರ್ಚು ಮಾಡುವುದರಿಂದ ಜನ ಸಾಮಾನ್ಯರಿಗೆ ಕಷ್ಟ. ಈ ಹಣವನ್ನ ಕಾಂಗ್ರೆಸ್ ಕೊಡುತ್ತಾ.? ಜನರ ಹಣದಿಂದ ಖರ್ಚು ಮಾಡ್ತಾರೆ ಎಂದು ಕಿಡಿಕಾರಿದರು. ಪಕ್ಷ ನಿಮ್ಮನ್ನು ಗುರುತಿಸಲಿದೆ. ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ರಾಜ್ಯ ಪ್ರವಾಸ ಹಮ್ಮಿಕೊಂಡಿರುವುದೇ ಜನರೊಂದಿಗೆ ಜನತಾದಳ ಎಂಬ ಅಭಿಯಾನದ ಭಾಗವಾಗಿ ಪ್ರತಿಯೊಬ್ಬ ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷವನ್ನು ಬಲಿಷ್ಠಗೊಳಿಸುವ ಗುರಿಯನ್ನು ಹೊತ್ತಿ ಹೇಳಿದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ










Click it and Unblock the Notifications