ಸಿಎಂಗಳ ಜೊತೆ ಸಂವಾದದ ಬೆನ್ನಲ್ಲೇ ಪಿಎಂ ಮೋದಿ ಟ್ವೀಟ್: ಮತ್ತೆ ಲಾಕ್ ಡೌನ್ ಗುಮ್ಮ!
ನವದೆಹಲಿ, ಸೆ 24: ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಟ್ವೀಟ್, ಕೆಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆಯಾಗಲಿದೆಯೇ ಎನ್ನುವ ಅನುಮಾನ ಮೂಡುವಂತಿದೆ.
ಬುಧವಾರ (ಸೆ 23) ಕೋವಿಡ್ 19 ಗೆ ಸಂಬಂಧಿಸಿದಂತೆ ಪ್ರಧಾನಿ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ್ದರು.
ಕೊರೊನಾ ಸೋಂಕಿತರ ಸಂಖ್ಯೆ ಏಳು ರಾಜ್ಯಗಳಲ್ಲಿ ನಿಯಂತ್ರಣ ಬರದೇ ಇರುವುದಕ್ಕೆ ಕಳವಳ ವ್ಯಕ್ತ ಪಡಿಸಿರುವ ಮೋದಿ, ಮುಖ್ಯಮಂತ್ರಿಗಳಿಗೆ ಹಲವು ಸಲಹೆ/ಸೂಚನೆಯನ್ನು ಸಭೆಯಲ್ಲಿ ನೀಡಿದ್ದರು.
ಕೊರೊನಾ ವಿರುದ್ದದ ಹೋರಾಟಕ್ಕೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಶೇ.50ರಷ್ಟು ಬಳಸಿಕೊಳ್ಳಬಹುದು ಎಂದು ಹೇಳಿರುವ ಮೋದಿ, "ಒಂದೆರಡು ದಿನದ ಲಾಕ್ ಡೌನ್ ಪರಿಣಾಮಕಾರಿಯಾಗಬಹುದೇ" ಎಂದು ಟ್ವೀಟ್ ಮಾಡಿರುವುದು, ಮತ್ತೆ ಲಾಕ್ ಡೌನ್ ಗುಮ್ಮ ಕಾಡುವಂತೆ ಮಾಡಿದೆ. ಮೋದಿ ಮಾಡಿರುವ ಟ್ವೀಟ್ ಏನು? ಮುಂದೆ ಓದಿ...

ವರ್ಚುಯಲ್ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ರಾಜ್ಯ ಖಾತೆ ಸಚಿವರಾದ ಅಶ್ವಿನಿಕುಮಾರ್ ಹಾಗೂ ಕೇಂದ್ರ ಆರೋಗ್ಯ ಮಂತ್ರಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದ ವರ್ಚುಯಲ್ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಕರ್ನಾಟಕದ ಸ್ಥಿತಿಗತಿಗಳನ್ನು ವಿವರಿಸಿದ್ದರು.
|
ಸಿಎಂಗಳ ಜೊತೆ ಸಂವಾದದ ಬೆನ್ನಲ್ಲೇ ಪಿಎಂ ಮೋದಿ ಟ್ವೀಟ್
"ಸ್ಥಳೀಯವಾಗಿ ಒಂದೆರಡು ದಿನದ ಲಾಕ್ ಡೌನ್ ಜಾರಿಗೊಳಿಸಿದರೆ ಕೊರೊನಾ ತಡೆಯಲು ಇದರಿಂದ ಏನಾದರೂ ಪ್ರಯೋಜನವಾಗಲಿದೆಯೇ? ಲಾಕ್ ಡೌನ್ ಜಾರಿಗೊಳಿಸಿದರೆ ಆರ್ಥಿಕ ಚಟುವಟಿಕೆಗಳಿಗೆ ಏನಾದರೂ ಸಮಸ್ಯೆ ಆಗಲಿದೆಯೇ? ಇವೆರಡು ವಿಷಯಗಳ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಚಿಂತನೆ ಮಾಡಬೇಕೆಂದು ಮನವಿ ಮಾಡುತ್ತೇನೆ"ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಕಾರ್ಯಾಲಯ ವಿಡಿಯೋ ಕಾನ್ಫರೆನ್ಸ್
ವಿಡಿಯೋ ಸಂವಾದದಲ್ಲಿ ಮುಂದಿನ ವಾರ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಜೊತೆಗೆ ಮುಖ್ಯಮಂತ್ರಿ ಕಾರ್ಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ ಎನ್ನುವ ಸೂಚನೆಯನ್ನು ಪ್ರಧಾನಿ, ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.
Recommended Video

ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್
ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಿ, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿವೆ. ಈ ಬಗ್ಗೆ ಗಮನ ಹರಿಸಿ, ಲಾಕ್ ಡೌನ್ ಮಾಡುವುದರಿಂದ, ಕೊರೊನಾ ನಿಯಂತ್ರಣಕ್ಕೆ ತರಬಹುದೇ ಎನ್ನುವುದರ ಬಗ್ಗೆ ಗಮನಹರಿಸಿ"ಎಂದು ಮೋದಿ, ರಾಜ್ಯಕ್ಕೆ ಸೂಚನೆಯನ್ನು ನೀಡಿದ್ದಾರೆ.
-
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications