ಬೀಗ-ಬೀಗತಿ ಸಂಬಂಧ: ಬಿಜೆಪಿ ಹೇಳಿದ ಕಾಂಗ್ರೆಸ್ಸಿನ ಅಘೋಷಿತ 'ಅಧ್ಯಕ್ಷೆ': ಯಾರು ಆ ಮಹಿಳೆ?
ಪ್ರಬಲ ಸಾಮಾಜಿಕ ಜಾಲತಾಣವನ್ನು ಒಬ್ಬರ ಮೇಲೋಬ್ಬರು ಕತ್ತಿ ಮಸೆಯಲು ಯಾವರೀತಿ ಬಳಸಿಕೊಳ್ಳಬಹುದು ಎನ್ನುವುದನ್ನು ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ಸಿನ ರಾಜ್ಯ ಸೋಶಿಯಿಲ್ ಮಿಡಿಯಾ ಘಟಕಗಳು ತೋರಿಸಿಕೊಡುತ್ತಿವೆ.
ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಕೆಸೆರೆರೆಚಾಟ ನಡೆಸಿದ್ದ ಈ ಎರಡು ಪಕ್ಷಗಳ ಟ್ವಿಟ್ಟರ್ ಸಮರದಲ್ಲಿ ಮಹಾನ್ ನಾಯಕ ಪದಗಳು ಬಹಳಷ್ಟು ಬಳಕೆಯಾಗಿತ್ತು. ಈಗ, ಬಿಜೆಪಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಕೆಪಿಸಿಸಿ ನಡೆಸಿದ್ದ ಶಿವಮೊಗ್ಗ ಚಲೋ ಬಗ್ಗೆ ಪ್ರಸ್ತಾವಿಸಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸ್ಥಳೀಯ ಕಬಡ್ಡಿ ಕೂಟದಲ್ಲಿ ನಡೆದ ಗಲಾಟೆಯ ವಿಚಾರದಲ್ಲಿ ಇಲ್ಲಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಮೇಲೆ ಕೇಸ್ ದಾಖಲಾಗಿ, ಅವರನ್ನು ಬಂಧನವಾಗಿತ್ತು.
ಇದರ ಜೊತೆಗೆ, ಸಂಗಮೇಶ್ವರ್ ಅವರು ಸದನದಲ್ಲಿ ಅಂಗಿ ತೆಗೆದು ಪ್ರತಿಭಟನೆ ನಡೆಸಿದ್ದಾಗಿ, ಸ್ಪೀಕರ್ ಕಾಗೇರಿಯವರು ಅವರನ್ನು ಒಂದು ವಾರ ಕಾಲ ಸಸ್ಪೆಂಡ್ ಮಾಡಿದ್ದರು. ಈ ಎರಡು ವಿಚಾರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಶಿವಮೊಗ್ಗದಲ್ಲಿ ಬೃಹತ್ ಜಾಥಾ ನಡೆಸಿ, ಜನಾಕ್ರೋಶ ಸಮಾವೇಶ ನಡೆಸಿತ್ತು. ಇದನ್ನು ಬಿಜೆಪಿ ಲೇವಡಿ ಮಾಡಿದ್ದು ಹೀಗೆ..
|
ಬೀಗ-ಬೀಗತಿ ಸಂಬಂಧಕ್ಕಾಗಿ ಶಿವಮೊಗ್ಗ ಚಲೋ: ಕಾಂಗ್ರೆಸ್ಸಿನ ಅಘೋಷಿತ ಅಧ್ಯಕ್ಷೆ!
"ಇತ್ತೀಚೆಗೆ @INCKarnataka ನಡೆಸಿದ ಶಿವಮೊಗ್ಗ ಚಲೋ ಜಾಥಾದ ಹಿಂದೆ ಕೆಪಿಸಿಸಿಯ ಅಘೋಷಿತ ಅಧ್ಯಕ್ಷೆ #ಮಹಾನಾಯಕಿಯ ಕೈವಾಡವಿದೆ. #ಮಹಾನಾಯಕನೊಬ್ಬರು ಅಘೋಷಿತ ಅಧ್ಯಕ್ಷೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಬೀಗ-ಬೀಗತಿ ಸಂಬಂಧಕ್ಕಾಗಿ ಶಿವಮೊಗ್ಗ ಚಲೋ ಮಾಡಿದ ಕಾಂಗ್ರೆಸ್, ಜನತೆಗೆ ತಪ್ಪು ಮಾಹಿತಿ ನೀಡಿ, ಸದನದ ಸಮಯ ವ್ಯರ್ಥ ಮಾಡಿತ್ತು" ಇದು ಬಿಜೆಪಿ ಮಾಡಿದ ಟ್ವೀಟ್.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಅವರು ಉಲ್ಲೇಖಿಸಿದ್ದ 'ಮಹಾನ್ ನಾಯಕ' ಯಾರು ಎನ್ನುವ ಪ್ರಶ್ನೆಗೆ ಉತ್ತರ ನೇರವಾಗಿ ಸಿಗದೇ ಇರುವ ಹೊತ್ತಿನಲ್ಲಿ, ಬಿಜೆಪಿ ಆರೋಪಿಸುತ್ತಿರುವ ಆ ಮಹಾನ್ ನಾಯಕಿ, ಕೆಪಿಸಿಸಿಯ ಅಘೋಷಿತ ಅಧ್ಯಕ್ಷೆ ಯಾರು ಎನ್ನುವ ಇನ್ನೊಂದು ಪ್ರಶ್ನೆ ಎದುರಾಗಿದೆ. ಬಿಜೆಪಿಯ ಈ ಟ್ವೀಟಿಗೆ, 'ಮಹಾ ನಾಯಕ/ ಮಹಾ ನಾಯಕಿಯ ಹೆಸರು ತಿಳಿಸಲು ಮುಜುಗರ ಎನಿಸಿದರೆ ಯಾವ ಊರಿಗೆ ಸಮೀಪದವರೆಂದು ತಿಳಿಸಿ' ಎನ್ನುವ ಪ್ರತಿಕ್ರಿಯೆ ಕೂಡಾ ಬಂದಿದೆ.
|
ಬಿಜೆಪಿಯ ಟ್ವೀಟಿಗೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿತ್ತು
ಬಿಜೆಪಿಯ ಟ್ವೀಟಿಗೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿತ್ತು, "ಶಿವಮೊಗ್ಗ & ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ & ಅಕ್ರಮ ಗಣಿಗಾರಿಕೆಯಲ್ಲಿ ನಿಮ್ಮ ಇಬ್ಬರು ಮಹಾನಾಯಕರದ್ದೇ ಕೈವಾಡವಲ್ಲವೇ
@BJP4Karnataka ಸ್ಫೋಟದ ತನಿಖೆ ಎಲ್ಲಿಗೆ ಬಂತು? ಅಕ್ರಮ, ಅನಾಚಾರ, ಗೂಂಡಾಗಿರಿ ನಡೆಸುವುದನ್ನೇ ಸಾಧನೆ ಎಂದುಕೊಂಡಿದ್ದೀರಿ. ಜನತೆಯ ದಿಕ್ಕು ತಪ್ಪಿಸುವುದನ್ನ ಬಿಟ್ಟು ನಿಮ್ಮ ಒಂದೇ ಒಂದು ಜನೋಪಯೋಗಿ ಯೋಜನೆ ತಿಳಿಸಿ" ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
Recommended Video

ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಈ ಜಾಥಾದಲ್ಲಿ ಭಾಗವಹಿಸಿದ್ದರು
ಶಿವಮೊಗ್ಗದಲ್ಲಿ ನಡೆದಿದ್ದ ಈ ಸಭೆಯಲ್ಲಿ ಕಾಂಗ್ರೆಸ್ಸಿನ ಎಲ್ಲಾ ಪ್ರಮುಖ ನಾಯಕರು ಭಾಗವಹಿಸಿದ್ದರು. ಮಾಜಿ ಸಚಿವರಾದ ಡಾ. ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ಎಸ್.ಆರ್.ಪಾಟೀಲ್, ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಯು.ಟಿ.ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧೃವನಾರಾಯಣ್, ಸಲೀಂ ಅಹಮದ್, ಪ್ರಮುಖರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಈ ಜಾಥಾದಲ್ಲಿ ಭಾಗವಹಿಸಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications