ಹಿಂದೂ ಧರ್ಮವನ್ನು ಸ್ಥಾಪಿಸಿದವರು ಯಾರು: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ
ಕೊರಟಗೆರೆ, ಸೆಪ್ಟೆಂಬರ್ 5: ಹಿಂದೂ ಧರ್ಮವನ್ನು ಸ್ಥಾಪಿಸಿದವರು ಯಾರು ಎಂಬ ಪ್ರಶ್ನೆ ಇನ್ನೂ ಇದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಮಂಗಳವಾರ ತಮ್ಮ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶ್ನಿಸಿದ್ದಾರೆ.
ಸನಾತನ ಧರ್ಮ ನಿರ್ಮೂಲನೆಯಾಗಬೇಕು ಎಂದು ತಮಿಳುನಾಡು ಕ್ರೀಡಾ ಮತ್ತು ಯುವಜನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಕರ್ನಾಟಕ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೀಡಿರುವ ಹೇಳಿಕೆಯಿಂದ ಸಹಜವಾಗಿ ಚಿಂತನೆಗೆ ಹಚ್ಚಿದೆ.

ವಿವಿಧ ಧರ್ಮಗಳು ಮತ್ತು ಅವುಗಳ ಹಿನ್ನೆಲೆಯ ಬಗ್ಗೆ ಮಾತನಾಡಿದ ಪರಮೇಶ್ವರ, ಹಿಂದೂ ಧರ್ಮ ಯಾವಾಗ ಪ್ರಾರಂಭವಾಯಿತು ಎಂದು ಯಾರಿಗೂ ತಿಳಿದಿಲ್ಲ. ಈ ಜಗತ್ತಿನಲ್ಲಿ ಹಲವಾರು ಧರ್ಮಗಳಿವೆ. ಹಿಂದೂ ಧರ್ಮ ಯಾವಾಗ ಹುಟ್ಟಿತು? ಅದು ಎಲ್ಲಿ ಹುಟ್ಟಿತು? ಎಂಬುದು ಇನ್ನೂ ಉತ್ತರ ಸಿಗದ ಪ್ರಶ್ನೆ.
ಬೌದ್ಧ ಧರ್ಮ ಹುಟ್ಟಿದ್ದು ಈ ದೇಶದಲ್ಲಿ, ಜೈನ ಧರ್ಮವೂ ಹುಟ್ಟಿದ್ದು ಇಲ್ಲೇ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಗಳು ಹೊರಗಿನಿಂದ ಬಂದವು. ವಿಶ್ಲೇಷಣೆ ಮತ್ತು ತೀರ್ಮಾನ ಮನುಕುಲಕ್ಕೆ ಕ್ಷೇಮವಾಗಿದೆ ಎಂದು ಪರಮೇಶ್ವರ ಹೇಳಿದರು.
ಪರಮೇಶ್ವರ್ ಅವರ ಹೇಳಿಕೆಗೆ ಕರ್ನಾಟಕದ ಹಲವು ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ ಅವರು ಹಿಂದೂ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ರಾಜ್ಯದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದು, ಅವುಗಳ ಮೇಲೆ ಕೇಂದ್ರೀಕರಿಸುವ ಬದಲು ಪರಮೇಶ್ವರ ಅವರು ಅಸಹ್ಯಕರ ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮಕ್ಕೆ ಯಾವುದೇ ಆಧಾರವಿಲ್ಲ ಎಂದು ಹೇಳುವುದು ನಿಜವಾಗಿಯೂ ಅನಗತ್ಯ. ನಾವು ಅವರಿಂದ ಅಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಇದು ಕಾಂಗ್ರೆಸ್ನ ಮನಸ್ಥಿತಿಯನ್ನು ತೋರಿಸುತ್ತದೆ ಮತ್ತು ನಿರ್ದಿಷ್ಟ ಸಮುದಾಯವನ್ನು ಓಲೈಸಲು ಇಂತಹ ಹೇಳಿಕೆಗಳನ್ನು ನೀಡಲಾಗಿದೆ ಎಂದು ಕೋಟ ಹೇಳಿದರು.
ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪರಮೇಶ್ವರ್ ಅವರು ಹಿಂದೂ ಸಮುದಾಯವನ್ನು ಲೇವಡಿ ಮಾಡಿದ್ದಾರೆ ಎಂದಿದ್ದಾರೆ.
ಪರಮೇಶ್ವರ ಅವರು ಮಾತನಾಡುತ್ತಾ ಹಿಂದೂ ಧರ್ಮದ ಅಸ್ತಿತ್ವವನ್ನು ಪ್ರಶ್ನಿಸಿದ್ದಾರೆ. ಅವರ ಹೇಳಿಕೆ ಹಿಂದೂ ಧರ್ಮವನ್ನು ಅಪಹಾಸ್ಯ ಮಾಡುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಹಿಂದೂ ಧರ್ಮವು ಒಂದು ಸಾಗರವಿದ್ದಂತೆ ಮತ್ತು ಅದನ್ನು ಬೇರೆ ಯಾವುದೇ ಧರ್ಮದೊಂದಿಗೆ ಹೋಲಿಸಲಾಗುವುದಿಲ್ಲ. ಹಿಂದೂ ಧರ್ಮವು ಎಲ್ಲಾ ಸಮುದಾಯಗಳು ಗೌರವಿಸುವ ಧರ್ಮವಾಗಿದೆ. ಹಲವಾರು ಯುಗಗಳಿಂದ ಹಿಂದೂ ಧರ್ಮವನ್ನು ಅನುಸರಿಸಲಾಗುತ್ತಿದೆ ಎಂದು ರವಿಕುಮಾರ್ ಹೇಳಿದ್ದಾರೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications