ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?: ಬಿ.ವೈ ವಿಜಯೇಂದ್ರ ಹೇಳಿದ್ಯಾರಿಗೆ?
ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರ ವಿರದ್ದವಾಗಿ ಮಾತನಾಡುತ್ತಿರುವವರ ಕುರಿತು ಬಿ.ವೈ ವಿಜಯೇಂದ್ರ ಗುಡುಗಿದ್ದಾರೆ.
ಹಾವೇರಿ,ಮಾರ್ಚ್16: ರಾಜ್ಯ ಬಿಜೆಪಿಯಲ್ಲಿ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಕಿಚನ್ ನಲ್ಲಿ ಟಿಕೆಟ್ ನೀಡುವ ನಿರ್ಧಾರ ಆಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದು, ಇದಕ್ಕೆ ಬಿ ವೈ ವಿಜಯೇಂದ್ರ ರಾಜಕಾರಣಲ್ಲಿ ಶತ್ರುಗಳು ಹೆಚ್ಚದಾಗ ಬೆಳೆಯಲು ಸಾಧ್ಯ ಎಂದು ತಿರುಗೇಟು ನೀಡಿದ್ದರು.
ಇದೀಗ ರಾಜ್ಯದಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ? ಎಂದು ಪರೋಕ್ಷವಾಗಿ ಸಿ.ಟಿ ರವಿ ಅವರಿಗೆ ಬಿ.ವೈ ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡುತಿದ್ದಾರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ.

ಈಗ ಯಾರು ಬಿಜೆಪಿ ನೋಡುತ್ತಿದ್ದಾರೋ ಅವರು ಭವ್ಯ ಭವನವನ್ನಷ್ಟೇ ನೋಡುತ್ತಿದ್ದಾರೆ. ಆ ಭವನದ ಅಡಿಪಾಯ ಯಾರಿಗೂ ಕಾಣುವುದಿಲ್ಲ. ಬಿಜೆಪಿ ರಾಜ್ಯದಲ್ಲಿ ಇಷ್ಟುಸುಭದ್ರವಾಗಿ ನಿಂತಿದೆ ಎಂದರೆ ಅದಕ್ಕೆ ಅಡಿಪಾಯ ಹಾಕಿದವರು ಯಡಿಯೂರಪ್ಪ. ಯಡಿಯೂರಪ್ಪನವರು ರಾಜ್ಯದಲ್ಲಿ 30-40 ವರ್ಷಗಳ ಕಾಲ ನಿರಂತರ ಹೋರಾಟ ಮಾಡಿಕೊಂಡು ನಾಡಿನಲ್ಲಿರುವ ರೈತರು, ಬಡವರು, ದೀನದಲಿತರ ಬಗ್ಗೆ ಕಾಳಜಿ ಇಟ್ಟುಕೊಂಡು ಸೈಕಲ್ ಜಾಥಾ, ಪಾದಯಾತ್ರೆ ಮಾಡಿದರು.
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಯಡಿಯೂರಪ್ಪ ಮಾಡಿದಷ್ಟುಹೋರಾಟವನ್ನು ಮತ್ತೊಬ್ಬ ಯಾವ ರಾಜಕಾರಣಿಯೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಅವರ ಬಗ್ಗೆ ಟೀಕೆ ಮಾಡುವವರು ಹುಷಾರಾಗಿರಿ. ನೇರವಾಗಿ ಹೇಳುತ್ತಿದ್ದೇನೆ. ಹಿಂದೆ ಮುಂದೆ ನೋಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಅನೇಕ ನಾಯಕರೊಂದಿಗೆ ಹೋರಾಟ ಮಾಡಿ, ಸಂಘಟನೆ ಮಾಡಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ, ಯಡಿಯೂರಪ್ಪ ಬಗ್ಗೆ ಟೀಕೆ ಮಾಡುವವರನ್ನು ನೋಡುತ್ತಿದ್ದೇವೆ. ಆದರೂ ಯಡಿಯೂರಪ್ಪ ಸುಮ್ಮನಿದ್ದಾರೆ ಎಂದರೆ ವೀಕ್ನೆಸ್ ಅಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಮೌನವಾಗಿದ್ದಾರೆ ಎಂದರೆ ಉದ್ದೇಶವಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ದಿನ ಕೂಡ ನಾನು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುತ್ತೇನೆ ಎಂದು ಅವರು ಹೇಳಿದ್ದರು.
ಯಡಿಯೂರಪ್ಪ ಅವರಿಗೆ ನಾಳೆ ಸಿಎಂ ಆಗಬೇಕೆಂಬ ಕನಸಿಲ್ಲ. ಮಕ್ಕಳನ್ನು ಎಂಎಲ್ಎ ಮಾಡಿ ಮಂತ್ರಿಯಾಗಿಸುವ ಗುರಿಯೂ ಇಲ್ಲ. ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ ಎಂದು ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications