ವ್ಯಕ್ತಿಚಿತ್ರ: 'ಸ್ಪೀಕರ್' ಸ್ಥಾನಕ್ಕೇರಿದ ಕೊಂಬಾರಣ್ಣ ಗಣಪತಿ ಬೋಪಯ್ಯ
ಬೆಂಗಳೂರು, ಮೇ 18: ಕರ್ನಾಟಕ ವಿಧಾನಸಭೆ ಮತ್ತೊಮ್ಮೆ ವಿಶ್ವಾಸಮತ ಯಾಚನೆ ಪ್ರಹಸನಕ್ಕೆ ಸಜ್ಜಾಗಿದೆ. ಬಿಜೆಪಿಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ವಿಶ್ವಾಸಮತ ಯಾಚನೆ ಹೊಸ ವಿಷಯವಲ್ಲ. ಮೂರು ದಿನಗಳ ಅಂತರದಲ್ಲಿ ಎರಡು ಬಾರಿ ವಿಶ್ವಾಸಮತ ಯಾಚನೆ ನಡೆದಿತ್ತು.
ನಾಳೆ (ಮೇ 12) ಮತ್ತೊಮ್ಮೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆಗೆ ಸಜ್ಜಾಗುತ್ತಿದ್ದಾರೆ. 2010ರಲ್ಲಿ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅಂದು ಕೆಜಿ ಬೋಪಯ್ಯ ಸ್ಪೀಕರ್ ಆಗಿದ್ದರು. ಇಂದು ಹಂಗಾಮಿ ಸ್ಪೀಕರ್ ಆಗಿದ್ದಾರೆ. ಬೋಪಯ್ಯ ಅವರ ಸಂಕ್ಷಿಪ್ತ ಹಿನ್ನಲೆ ಇಲ್ಲಿದೆ.

ಕೊಂಬಾರಣ್ಣ ಗಣಪತಿ ಬೋಪಯ್ಯ ಅವರು ಕೊಡಗು ಒಕ್ಕಲಿಗ(ಗೌಡ) ಕುಟುಂಬದಲ್ಲಿ 1955ರ ಅಕ್ಟೋಬರ್ 17ರಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪ ಕಾಲೂರು ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದವರು.
ಕೊಂಬಾರಣ್ಣ ಗಣಪತಿ ಮತ್ತು ಚಿನ್ನಮ್ಮ ದಂಪತಿಯ ಎರಡನೆಯ ಪುತ್ರ. 1974ರಲ್ಲಿ ಸೋಮವಾರ ಪೇಟೆಯಲ್ಲಿ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದರು. ಮುಂದೆ, ಬೆಂಗಳೂರು ಬಿಎಂಎಸ್ ಕಾಲೇಜಿನಲ್ಲಿ ಕಾನೂನು ವ್ಯಾಸಂಗ. ಕಾನೂನು ಪದವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಬೋಪಯ್ಯ ಅವರು 1980ರಲ್ಲಿ ಮಡಿಕೇರಿಗೆ ವಾಪಸಾಗಿ, ಕಾನೂನು ವೃತ್ತಿಗೆ ಅಂಕಿತರಾದರು.
ಅವರ ಪತ್ನಿ ಕುಂತಿ ಅವರು ಸೋಮವಾರಪೇಟೆಯ ಕುಡಿಗೆ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿದ್ದರು. ದಂಪತಿಯ ಹಿರಿಯ ಪುತ್ರಿ ಪ್ರಜ್ಞಾ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡಿದ್ದಾರೆ. ಎರಡನೆಯ ಪುತ್ರಿ ಯಶ್ಚಿಕಾ ಕಾಲೇಜಿನಲ್ಲಿ ಓದುತ್ತಿದ್ದಾರೆ.
ಚಿಕ್ಕಂದಿನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಸಂಘ ಪರಿವಾರದ ಒಡನಾಟ ಸಂಪಾದಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಕ್ರಿಯ ಸದಸ್ಯರಾಗಿದ್ದರು. ತುರ್ತುಪರಿಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಬಂಧನಕ್ಕೀಡಾದರು.
1990ರ ದಶಕದ ಆರಂಭದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಬಳಿಕ ಅಧ್ಯಕ್ಷರಾಗಿ ನೇಮಕಗೊಂಡರು. 2004ರಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ವಿಧಾನಸಭೆಗೆ ಆರಿಸಿಬಂದರು. 2008ರಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಆಗ ಹಂಗಾಮಿ ಸ್ಪೀಕರ್ ಆಗಿ ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಂದೆ ಮುಂದೆ ಡೆಪ್ಯುಟಿ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಗೊಂಡರು.
2009ರ ಡಿಸೆಂಬರ್ 30ರಂದು ಜಗದೀಶ್ ಶೆಟ್ಟರ್ ಸ್ಪೀಕರ್ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಕಾಂಗ್ರೆಸಿನ ಟಿಬಿ ಜಯಚಂದ್ರ ಅವರನ್ನು ಸೋಲಿಸಿ, ಪೂರ್ಣ ಪ್ರಮಾಣದಲ್ಲಿ ಸ್ಪೀಕರ್ ಆಗಿ ಬೋಪಯ್ಯ ನೇಮಕಗೊಂಡರು. 2011ರ ಅಕ್ಟೋಬರಿನಲ್ಲಿ 11 ಶಾಸಕರನ್ನು ಕಾನೂನುಬಾಹಿರವಾಗಿ ಅನರ್ಹಗೊಳಿಸಿ, ಬಿಜೆಪಿ ಸರ್ಕಾರವನ್ನು ಅರ್ಥಾತ್ ಯಡಿಯೂರಪ್ಪ ಸರಕಾರವನ್ನು ಉಳಿಸಿಕೊಂಡರು. ಮುಂದೆ ಸುಪ್ರೀಂಕೊರ್ಟಿನಿಂದ ಛೀಮಾರಿ ಹಾಕಿಸಿಕೊಂಡರು. ಯಡಿಯೂರಪ್ಪ ಅವರ ಕೆಂಗೆಣ್ಣಿಗೆ ಗುರಿಯಾಗಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications