ಕಾಂತರಾಜು ವರದಿ ಕಳ್ಳತನ ಆಗಿದ್ದರೆ ಯಾರು ಕಳ್ಳರು? ಸಿದ್ದರಾಮಯ್ಯನವರೇ? ಡಿ.ಕೆ.ಶಿವಕುಮಾರರೇ?
ಬೆಂಗಳೂರು, ನವೆಂಬರ್ 24: ಕಾಂತರಾಜು ವರದಿ ಕಳ್ಳತನ ಆಗಿದ್ದರೆ ಕಳ್ಳರನ್ನು ಯಾರು ಹಿಡಿಯಬೇಕು? ಮೊದಲು ವರದಿ ಕೊಡಲು ಬಂದಾಗ ಬೇಡ ಎಂದಿದ್ದಾಗಿ ಸಿದ್ದರಾಮಯ್ಯ ಹೇಳಿದ್ದರು. ಈಗ ಮೂಲಪ್ರತಿ ಕಳವಾದ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದ್ದಾರೆ. ಕಳ್ಳರು ಯಾರು? ಸಿದ್ದರಾಮಯ್ಯನವರೇ? ಡಿ.ಕೆ.ಶಿವಕುಮಾರರೇ? ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೊದಲು ಅವರನ್ನು ಹಿಡಿಯಲಿ ಎಂದು ಆಗ್ರಹಿಸಿದರು. ಮೊದಲು ವರದಿ ಕೊಡಲು ಬಂದಾಗ ಬೇಡ ಎಂದಿದ್ದಾಗಿ ಸಿದ್ದರಾಮಯ್ಯ ಹೇಳಿದ್ದರು. ಈಗ ಮೂಲಪ್ರತಿ ಕಳವಾದ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದ್ದಾರೆ. ಮೊದಲು ಕಳ್ಳನನ್ನು ಹುಡುಕಿ ಕೊಡಿ ಎಂದು ಆಗ್ರಹಿಸಿದರು.

ಕಾಂತರಾಜು ಆಯೋಗದ ವರದಿ ನೀಡುವಾಗ ಎಲ್ಲರ ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿಲ್ಲ. ಅದು ಜಾತಿಗಣತಿ ಅಲ್ಲ. ಜಾತಿಗಣತಿ ಮಾಡಲು ಸೆನ್ಸಸ್ ಡಿಪಾರ್ಟ್ಮೆಂಟ್ ಹೊರತುಪಡಿಸಿ ಬೇರೆ ಯಾರಿಗೂ ಅಧಿಕಾರ ಇಲ್ಲ. ಅದು ಸಮೀಕ್ಷೆ ಮಾತ್ರ. ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆದಿದ್ದರೆ ಅದಕ್ಕೆ ಮೌಲ್ಯವಿದೆ. ಆದರೆ, ಎಲ್ಲರ ವಿರೋಧದ ಮಧ್ಯದಲ್ಲಿ ಇಂಥ ವರದಿ ಬೇಕಿಲ್ಲ. ಎಲ್ಲರೂ ಒಪ್ಪುವ, ಮೆಚ್ಚುವ ರೀತಿಯಲ್ಲಿ ವರದಿ ಬಂದರೆ ನಮ್ಮ ಅಭ್ಯಂತರವಿಲ್ಲ. ಬಿಜೆಪಿ ಅದರ ವಿರೋಧ ಇದೆ ಎಂದಲ್ಲ ಎಂದು ತಿಳಿಸಿದರು.
ಇದು ಜಾತಿ ಗಣತಿಯಲ್ಲ. ಇದು ಜಾತಿ ಜಾತಿಗಳ ನಡುವಿನ ಕಿತಾಪತಿ ಎಂದು ಆಕ್ಷೇಪ ಸೂಚಿಸಿದರು. ಇದನ್ನು ಸದ್ಯಕ್ಕೆ ಕೈಬಿಡಿ. ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಸರಿದೂಗಿಸಿ ಎಂದು ಸಲಹೆ ನೀಡಿದರು. ಸರ್ವಪಕ್ಷಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಿ ಎಂದು ತಿಳಿಸಿದರು.

ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು. ಡಿಸೆಂಬರ್ 2, 3 ಅಥವಾ ಸದನ ನಡೆಯುವಾಗಲೇ 4 ರಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಚಿವ ಜಮೀರ್ ಅಹ್ಮದ್ ಅವರು ಮಂತ್ರಿಯಾಗಿ ಮುಂದುವರಿಯಲು ಯೋಗ್ಯರಲ್ಲ. ಆ ಕಾರಣದಿಂದ ಅವರು ಬೆಳಗಾವಿಯಲ್ಲಿ ನಡೆಯುವ ಸದನಕ್ಕೆ ಅವರು ಹಾಜರಾಗಬಾರದು ಎಂದು ಆಗ್ರಹಿಸಿದರು.
ಡಾ. ಅಂಬೇಡ್ಕರ್ರವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಪ್ಪುಚುಕ್ಕಿ ಇಡುವ ರೀತಿಯಲ್ಲಿ ಜಮೀರ್ ಅಹ್ಮದ್ ಅವರು ಮಾತನಾಡಿದ್ದಾರೆ. ಇದನ್ನು ಇಂದಿನ ಎಸ್ಸಿ ಮೋರ್ಚಾ ರಾಜ್ಯ ವಿಶೇಷ ಸಭೆಯು ಖಂಡಿಸಿದೆ ಎಂದು ತಿಳಿಸಿದರು. ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಸ್ಥಾನ. ಆ ಸ್ಥಾನಕ್ಕೆ ಪ್ರತಿಯೊಬ್ಬರೂ ಗೌರವ ಕೊಡಬೇಕಾಗುತ್ತದೆ; ಅದು ವ್ಯಕ್ತಿಗೆ ಕೊಡುವ ಗೌರವವಲ್ಲ. ಜಮೀರ್ ಅವರು ಈ ಸ್ಥಾನವನ್ನು ಧರ್ಮಕ್ಕೆ ಅಂಟಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಜಮೀರ್ ಅವರನ್ನು ಆ ಸ್ಥಾನದಿಂದ ವಜಾ ಮಾಡಲು ಆಗ್ರಹಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications