ಬಸವತತ್ವ ತಿಳಿದವರು ಬಿಜೆಪಿ ಬೆಂಬಲಿಸಲ್ಲ: ಮನು ಧರ್ಮ ವಿರೋಧಿಸಿಯೇ ಬಸವಧರ್ಮ ಹುಟ್ಟಿದೆ ಎಂದ ಸಿದ್ದರಾಮಯ್ಯ
ಬಸವ ತತ್ವವನ್ನು ಅರ್ಥ ಮಾಡಿಕೊಂಡಿರುವ ಯಾವೊಬ್ಬ ವ್ಯಕ್ತಿ ಕೂಡ ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಸವಣ್ಣ, ಬಸವ ತತ್ವದ ಬಗೆಗಿನ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ಬಸವಣ್ಣನವರನ್ನು ತಮ್ಮ ಆಧ್ಯಾತ್ಮಿಕ ಗುರು, ಸೈದ್ಧಾಂತಿಕ ಸಂಗಾತಿ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ತಮ್ಮ ಬಸವಣ್ಣನ ಮೇಲಿನ ಅಭಿಮಾನವನ್ನು ಸರಣಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. "ಬಸವಣ್ಣ ನನ್ನ ಪಾಲಿನ ಆಧ್ಯಾತ್ಮಿಕ ಗುರು ಮಾತ್ರವಲ್ಲದೆ ಸೈದ್ಧಾಂತಿಕ ಸಂಗಾತಿಯೂ ಹೌದು. ನಾನು ಸೈದ್ಧಾಂತಿಕ ಸ್ಪಷ್ಟತೆಯನ್ನು ಬಸವತತ್ವದಿಂದಲೇ ಪಡೆದುಕೊಂಡಿದ್ದೇನೆ ಎನ್ನುವುದನ್ನು ವಿನಮ್ರವಾಗಿ ಹೇಳಬಯಸುತ್ತೇನೆ" ಎಂದಿದ್ದಾರೆ.

2013ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಂದರ್ಭದಲ್ಲಿ ಮುಹೂರ್ತ ನೋಡಿರಲಿಲ್ಲ, ಉದ್ದೇಶಪೂರ್ವಕವಾಗಿಯೇ ಬಸವಜಯಂತಿಯನ್ನು ಆರಿಸಿಕೊಂಡಿದ್ದೆ. ನಮ್ಮ ಸರ್ಕಾರ ಘೋಷಿಸಿದ ಮೊದಲ ಕಾರ್ಯಕ್ರಮ ಅನ್ನಭಾಗ್ಯ ಯೋಜನೆಗೆ ಕೂಡ ಬಸವಣ್ಣನವರ ಅನ್ನದಾಸೋಹ ಪ್ರೇರಣೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ ಬಗ್ಗೆ ಕೂಡ ಮಾತನಾಡಿದ್ದು, ಎಲ್ಲಾ ಸರ್ಕಾರಿ ನೌಕರರು ಬಸವ ತತ್ವದ ನೆನಪು ಮಾಡಿಕೊಳ್ಳಲಿ ಎನ್ನುವ ಕಾರಣಕ್ಕೆ ನಿಯಮ ರೂಪಿಸಿದ್ದು, ಇದು ನನ್ನ ಮತ್ತು ನಮ್ಮ ಪಕ್ಷದ ಬದ್ಧತೆ ಎಂದರು.
ಬಸವತತ್ವ ಅರ್ಥ ಮಾಡಿಕೊಂಡವರು ಬಿಜೆಪಿ ಬೆಂಬಲಿಸಲ್ಲ
ಬಸವ ತತ್ವವನ್ನು ಸರಿಯಾಗಿ ಅರ್ಥಮಾಡಿಕೊಂಡ ಯಾರೇ ಆದರೂ ಸಹ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಸಿದ್ದಾಂತ ಮತ್ತು ಬಸವಣ್ಣನವರ ಸಿದ್ಧಾಂತ ಸಂಪೂರ್ಣವಾಗಿ ವಿಭಿನ್ನವಾದುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಪ್ರತಿನಿಧಿಸುತ್ತಿರುವ ಮನುಧರ್ಮವನ್ನು ವಿರೋಧಿಸಿಯೇ ಬಸವಧರ್ಮ ಹುಟ್ಟಿಕೊಂಡಿರುವುದು. ಬಿಜೆಪಿ ಬಹಿರಂಗವಾಗಿ ಏನೇ ಹೇಳಿಕೆಗಳನ್ನು ನೀಡಿದರೂ, ಆ ಪಕ್ಷ ಮತ್ತು ಸಂಘ ಪರಿವಾರದ ಗುಪ್ತ ಅಜೆಂಡಾ ಬಸವಧರ್ಮಕ್ಕೆ ವಿರುದ್ಧದವಾದುದು ಎಂದು ಮೇಲ್ನೋಟಕ್ಕೆ ಎಲ್ಲರಿಗೂ ತಿಳಿಯುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಜರಂಗದಳ ಸೇರಿ ಹಲವು ಸಂಘಟನೆಗಳ ನಿಷೇಧ; ವಿವಾದ
ಕಾಂಗ್ರೆಸ್ ಬಿಡುಗಡೆಮಾಡಿರುವ ಪ್ರಣಾಳಿಕೆಯಲ್ಲಿ ಸಮಾಜದಲ್ಲಿ ಶಾಂತಿಯನ್ನು ಕದಡುವ ಯಾವುದೇ ಸಂಘಟನೆಯನ್ನು ನಿಷೇಧಿಸಲಾಗುವುದು ಎಂದು ಭರವಸೆ ನೀಡಿದೆ. ಪಿಎಫ್ಐ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಬಿಜೆಪಿ ನಾಯಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications