ಯಾರಾಗಲಿದ್ದಾರೆ ಕರ್ನಾಟಕದ ರಾಜ್ಯಪಾಲರು? ಅಚ್ಚರಿಯ ಹೆಸರುಗಳು
ಬೆಂಗಳೂರು, ಜೂನ್ 03: ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಂಪುಟ ರಚನೆ ಕಾರ್ಯವೂ ಆಗಿದ್ದು, ಆಡಳಿತ ಯಂತ್ರ ಪ್ರಾರಂಭಗೊಂಡಿದೆ.
ಕೇಂದ್ರದಲ್ಲಿ ಹೊಸದಾಗಿ ಸರ್ಕಾರ ರಚನೆ ಆದಾಗ ರಾಜ್ಯಗಳ ರಾಜ್ಯಪಾಲರುಗಳನ್ನು ಬದಲಾಯಿಸುವ ಪದ್ಧತಿ ಸಾಮಾನ್ಯವಾಗಿ ನಡೆಯುತ್ತಾ ಬಂದಿದೆ. ಇದು ನಿಯಮವಲ್ಲದಿದ್ದರೂ ಹೀಗೊಂದು ಪದ್ಧತಿ ಹಿಂದಿನಿಂದಲೂ ಇದೆ. ಆದರೆ ಈ ಬಾರಿ ಕಳೆದ ಬಾರಿಯ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ರಾಜ್ಯಪಾಲರ ಬದಲಾವಣೆ ಸಾಧ್ಯತೆ ಕಡಿಮೆ.
ಕರ್ನಾಟಕದ ರಾಜ್ಯಪಾಲರಾಗಿ ವಲುಭಾಯಿ ವಾಲಾ ಅವರು ಅಧಿಕಾರ ಸ್ವೀಕರಿಸಿ ಐದು ವರ್ಷವಾಗುತ್ತಾ ಬಂದಿದ್ದು, ಸೆಪ್ಟೆಂಬರ್ ತಿಂಗಳಿಗೆ ವಲುಭಾಯಿ ವಾಲಾ ಅವರ ಐದು ವರ್ಷ ಪೂರ್ಣಗೊಳ್ಳುತ್ತಿದ್ದು ಅದಕ್ಕೆ ಮುಂಚೆಯೇ ಮತ್ತೊಬ್ಬ ರಾಜ್ಯಪಾಲರನ್ನು ನೇಮಕ ಮಾಡಬೇಕಿದೆ.

ರಾಷ್ಟ್ರಪತಿಗಳಿಂದ ನೇಮಕವಾಗುವ ರಾಜ್ಯಪಾಲರು
ರಾಜ್ಯಪಾಲರ ನೇಮಕವನ್ನು ರಾಷ್ಟ್ರಪತಿಗಳು ಮಾಡುತ್ತಾರೆಯಾದರೂ ಅದನ್ನು ಸೂಚಿಸುವುದು ಕೇಂದ್ರದಲ್ಲಿ ಆಡಳಿತದಲ್ಲಿರುವ ಸರ್ಕಾರವೇ. ಹಾಗಾಗಿ ಈ ಬಾರಿ ರಾಜ್ಯದ ರಾಜಪಾಲರಾಗಿ ಯಾರನ್ನು ನೇಮಿಸುತ್ತಾರೆ ಎಂಬ ಕುತೂಹಲ ಇದೆ. ಕೆಲವು ಹೆಸರುಗಳು ತೇಲಿ ಬರುತ್ತಿದ್ದು, ಇವರಲ್ಲೇ ಒಬ್ಬರು ರಾಜ್ಯದ ರಾಜಪಾಲರಾಗುವ ಸಾಧ್ಯತೆ ಇದೆ.

ರಾಜ್ಯಕ್ಕೆ ಬರಲಿದ್ದಾರಾ ಸುಷ್ಮಾ ಸ್ವರಾಜ್?
ಕಳೆದ ಅವಧಿಯಲ್ಲಿ ವಿದೇಶಾಂಗ ಮಂತ್ರಿಯಾಗಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸುಷ್ಮಾ ಸ್ವರಾಜ್ ಅವರನ್ನು ಕರ್ನಾಟಕದ ರಾಜ್ಯಪಾಲೆಯಾಗಿ ನೇಮಿಸುವ ಸಾಧ್ಯತೆ ಇದೆ. ಸುಷ್ಮಾ ಸ್ವರಾಜ್ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಿಲ್ಲ, ಅಲ್ಲದೆ ಈ ಬಾರಿ ಅವರು ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.

ಸುಷ್ಮಾ ಸ್ವರಾಜ್ ಆಗಬಹುದೇ ರಾಜ್ಯಪಾಲೆ?
ಕರ್ನಾಟಕದಲ್ಲಿ ಒಮ್ಮೆ ಲೋಕಸಭೆ ಚುನಾವಣೆ ಎದುರಿಸಿ ಸೋಲನುಭವಿಸಿರುವ ಸುಷ್ಮಾ ಸ್ವರಾಜ್ ಅವರಿಗೆ, ರಾಜ್ಯದ ಬಗ್ಗೆ ಮಾಹಿತಿ ಇದೆ, ಇದು ಅವರ ಆಯ್ಕೆಗಿರುವ ಧನಾತ್ಮಕ ಅಂಶಗಳು. ಆದರೆ ಅವರು ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರೊಂದಿಗೆ ಹತ್ತಿರದಿಂದ ಗುರುತಿಸಿಕೊಂಡಿದ್ದರು ಇದರಿಂದಾಗಿ ಅವರಿಗೆ ಹಿನ್ನಡೆ ಆಗುವ ಸಾಧ್ಯತೆಯೂ ಇದೆ.

ಸುಮಿತ್ರಾ ಮಹಾಜನ್ ಆಗಬಹುದೇ ರಾಜ್ಯಪಾಲೆ?
16ನೇ ಲೋಕಸಭೆಯಲ್ಲಿ ಸ್ಪೀಕರ್ ಆಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಇರುವ ಸುಮಿತ್ರಾ ಮಹಾಜನ್ ಅವರನ್ನು ರಾಜ್ಯಕ್ಕೆ ರಾಜ್ಯಪಾಲೆಯಾಗಿ ನೇಮಿಸುವ ಸಾಧ್ಯತೆಯೂ ಇದೆ. ಸುಮಿತ್ರಾ ಅವರು ಅಜಾತ ಶತ್ರು ಎಂದು ಹೆಸರು ಮಾಡಿದವರು. ಪಕ್ಷಭೇದ ಬಿಟ್ಟು ಕರ್ತವ್ಯವನ್ನು ಇವರು ನಿರ್ವಹಿಸಬಲ್ಲರು.

ಉಮಾಭಾರತಿ ಆಗುವರೇ ರಾಜ್ಯಪಾಲೆ?
ಸಾದ್ವಿ ಉಮಾ ಭಾರತಿ ಅವರನ್ನು ಕರ್ನಾಟಕದ ರಾಜ್ಯಪಾಲೆಯನ್ನಾಗಿ ಮಾಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಅವರೂ ಸಹ ಈ ಬಾರಿ ಚುನಾವಣೆ ಸ್ಪರ್ಧಿಸಿಲ್ಲ, ಸರ್ಕಾರದಲ್ಲಿ ಯಾವುದೇ ಸಚಿವ ಸ್ಥಾನವನ್ನೂ ಅವರಿಗೆ ನೀಡುವ ಸಾಧ್ಯತೆ ಕಡಿಮೆ ಇದೆ. ಆದರೆ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಬದಲಿಗೆ ಪಕ್ಷದ ಹುದ್ದೆಗೆ ನೇಮಿಸುವ ಸಾಧ್ಯತೆ ಇದೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications