ಪಾವಗಡದ ಕಾಂಗ್ರೆಸ್ ಅಭ್ಯರ್ಥಿಗಾಗಿ ಸಿದ್ದರಾಮಯ್ಯಗೆ ಬಂತೊಂದು ಪತ್ರ!
Recommended Video

ಪಾವಗಡ, ಮಾರ್ಚ್ 05: ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲದ ಪ್ರಶ್ನೆಯೇ. 2013 ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸೋತಿದ್ದ ಕಾಂಗ್ರೆಸ್ ನ ಎಚ್.ವಿ.ವೆಂಕಟೇಶ್ ಅವರಿಗೆ ಟಿಕೇಟ್ ನೀಡಬಾರದೆಂದು ಕಾಂಗ್ರೆಸ್ ನಲ್ಲಿಯೇ ವಿರೋಧ ವ್ಯಕ್ತವಾಗಿದೆ.
ಅದಕ್ಕೆ ಪುಷ್ಠಿ ನೀಡುವಂತೆ ಪ್ರಸ್ತುತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಕೆ.ಜಿ.ನಾಗಲಕ್ಷ್ಮಿ ಬಾಯಿ ಅವರಿಗೆ ಈ ಕ್ಷೇತ್ರದ ಟಿಕೇಟ್ ನೀಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಅಮಯ್ಯ ಅವರಿಗೆ ಪತ್ರವೊಂದನ್ನು ಬರೆಯಲಾಗಿದೆ. ಈ ಪತ್ರ ಬರೆದವರು ಪಾವಗಡದ ಮಾಜಿ ಶಾಸಕ ನಾಗಪ್ಪ ಅವರ ಪತ್ನಿ ನಾಗರತ್ನಮ್ಮ.
ಅಷ್ಟಕ್ಕೂ ನಾಗರತ್ನಮ್ಮ ಅವರು ಬರೆದ ಪತ್ರದಲ್ಲೇನಿದೆ? ಓದಿ...

ವೆಂಕಟೇಶ್ ಅವರಿಗೆ ಟಿಕೇಟ್ ನೀಡಬೇಡಿ
ಮಾಜಿ ಶಾಸಕರಾದ ವೆಂಕಟರಮಣಪ್ಪ ಅವರ ಸಹೋದರಿಯಾಗಿರುವ ನಾಗರತ್ನಮ್ಮ ಅವರು, ತಮ್ಮ ಸಹೋದರ ಮತ್ತು ಅವರ ಕುಟುಂಬಸ್ಥರು ಪಾವಗಡ ತಾಲೂಕನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ದೂರಿದ್ದಾರೆ. ಇಲ್ಲಿನ ಅಮಾಯಕ ಜನರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಕಳೆದ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ಚುನಾವಣೆಗೆ ನಿಂತು ಸೋತ ವೆಂಕಟೇಶ್, ವೆಂಕಟರಮಣಪ್ಪ ಅವರ ಪುತ್ರ. ಇವರ ಇನ್ನೊಬ್ಬ ಪುತ್ರ ಜೆಡಿಎಸ್ ನಲ್ಲಿದ್ದಾರೆ. ಇವರು ಅತ್ಯಾಚಾರಿಗಳಾಗಿದ್ದು, ಜನರಿಗೆ ಜೀವ ಬೆದರಿಕೆ ಒಡ್ಡುತ್ತ ಶಾಂತಿ ಕಡಡಿದ್ದಾರೆ. ಇಂಥವರಿಗೆ ಟಿಕೇಟ್ ನೀಡಿದರೆ ಕ್ಷೇತ್ರ ಸರ್ವ ನಾಶವಾಗುತ್ತದೆ ಎಂದು ಪತ್ರದಲ್ಲಿ ದೂರಲಾಗಿದೆ.

ಟಿಕೇಟ್ ಮೇಲೆ ಮತ್ಯಾರಿಗೆ ಕಣ್ಣು?
ಬಲರಾಂ ಎಂಬ ಎಗ್ಸಿಕ್ಯೂಟಿವ್ ಇಂಜಿನಿಯರ್ ಸಹ ಕಾಂಗ್ರೆಸ್ ಟಿಕೇಟ್ ಗೆ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆಂದೇ ಅವರು ಪಾವಗಡದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಅತೀ ದೊಡ್ಡ ಸೋಲಾರ್ ಪಾರ್ಕ್ ಯೋಜನೆಗೆ ಇವರನ್ನೇ ಎಂ ಡಿಯನ್ನಾಗಿ ಮಾಡಲಾಗಿದೆ. ಅವರು ರೈತರ ಭೂಮಿಗಳನ್ನು ಕಡಿಮೆ ದರಕ್ಕೆ ಕಬಳಿಸಿಕೊಂಡಿದ್ದು ಅವರನ್ನು ಜನಪ್ರತಿನಿಧಿಯನ್ನಾಗಿ ಆರಿಸಿಬೇಡಿ ಎಂದು ಬರೆದಿದ್ದಾರೆ.

ನಾಗಲಕ್ಷ್ಮಿ ಬಾಯಿಯವರಿಗೆ ಟಿಕೇಟ್ ನೀಡಿ
ಪಾವಗಡ ಕ್ಷೇತ್ರದ ಮಹಿಳೆಯರ ಗೋಳನ್ನು ಆಲಿಸುತ್ತಿರುವ, ಈ ಕ್ಷೇತ್ರದಲ್ಲಿ ಹಲವು ಜನಪರ ಕೆಲಸಗಳನ್ನು ಮಾಡಿರುವ ನಾಗಲಕ್ಷ್ಮಿ ಬಾಯಿ ಯವರಿಗೆ ಈ ಕ್ಷೇತ್ರದ ಟಿಕೇಟ್ ನೀಡಬೇಕೆಂದು ಪತ್ರದಲ್ಲಿ ಬರೆದಿದ್ದಾರೆ.

ಯಾರು ನಾಗಲಕ್ಷ್ಮಿ ಬಾಯಿ?
ಕೆ.ಜಿ.ನಾಗಲಕ್ಷ್ಮಿ ಬಾಯಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಈಗಿನ ಅಧ್ಯಕ್ಷರು. ಪಾವಗಡ ತಾಲೂಕಿನಲ್ಲಿ ಈಗಾಗಲೇ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿ ಅಭಿಮಾನಿಗಳನ್ನು ಪಡೆದಿದ್ದಾರೆ. ಇವರಿಗೆ ಟಿಕೇಟ್ ನೀಡಿದಲ್ಲಿ ಅವರನ್ನು ಖಂಡಿತ ಗೆಲ್ಲಿಸುವುದಾಗಿ ನಾಗರತ್ನಮ್ಮ ಪತ್ರದಲ್ಲಿ ಅಭಯ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications