ತುಮಕೂರು ಬಿಜೆಪಿ ಭಿನ್ನಮತಕ್ಕೆ ಸಂಧಾನ ಸೂತ್ರ ಸಿದ್ಧ!
ತುಮಕೂರು, ಜನವರಿ 16 : ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ತುಮಕೂರಿನಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ.ಜ್ಯೋತಿ ಗಣೇಶ್ ನಡುವೆ ಅಸಮಾಧಾನವಿದೆ. ಚುನಾವಣೆ ಮೇಲೆ ಇದು ಪರಿಣಾಮ ಬೀರದಂತೆ ಸಂಧಾನ ಸೂತ್ರವನ್ನು ಪಕ್ಷ ಸಿದ್ಧಪಡಿಸಿದೆ.
ಪರಿವರ್ತನಾ ಯಾತ್ರೆ ಮುಗಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಸೊಗಡು ಶಿವಣ್ಣ ಅವರು, 'ತುಮಕೂರು ಜಿಲ್ಲೆಯ ಬಿಜೆಪಿ ಅಪ್ಪ-ಮಕ್ಕಳಿಂದ ಬೆಳೆದಿಲ್ಲ. ನಾವು ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ. ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಎಂದು ಕೆಲಸ ಮಾಡು ಎಂದರೆ ನಾವು ಮಾಡುವುದಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ತುಮಕೂರು ನಗರ ಕ್ಷೇತ್ರದಿಂದ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ.ಜ್ಯೋತಿ ಗಣೇಶ್ ಇಬ್ಬರೂ ಟಿಕೆಟ್ ಆಕಾಂಕ್ಷಿಗಳು. ಆದರೆ, ಇವರ ನಡುವಿನ ಅಸಮಧಾನದಿಂದ ಪಕ್ಷಕ್ಕೆ ಸೋಲಾಗಬಾರದು ಎಂದು ಪಕ್ಷದ ನಾಯಕರು ಸಂಧಾನಸೂತ್ರವೊಂದನ್ನು ಸಿದ್ಧಪಡಿಸಿದ್ದಾರೆ.
2013ರ ಚುನಾವಣೆಯಲ್ಲಿ ಕೆಜೆಪಿ, ಬಿಜೆಪಿ ಗೊಂದಲದಿಂದಾಗಿ ಕ್ಷೇತ್ರದಲ್ಲಿ ಮತ ವಿಭಜನೆಯಾಗಿತ್ತು. ಕಾಂಗ್ರೆಸ್ನ ಡಾ.ರಫೀಕ್ ಅಹಮದ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ತುಮಕೂರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ತವರು ಜಿಲ್ಲೆ. ಅಲ್ಲಿ ಗೆಲ್ಲಲು ಅವರು ತಂತ್ರವನ್ನು ರೂಪಿಸಲಿದ್ದಾರೆ ಎಂಬುದನ್ನು ಬಿಜೆಪಿ ನಾಯಕರು ನೆನಪಿನಲ್ಲಿ ಇಟ್ಟುಕೊಳ್ಳಬೇಕು.

2013ರಲ್ಲಿ ಇಬ್ಬರು ಸೋತಿದ್ದರು
ಕಳೆದ ಚುನಾವಣೆಯಲ್ಲಿ ಸೊಗಡು ಶಿವಣ್ಣ ಬಿಜೆಪಿಯಿಂದ, ಜಿ.ಬಿ.ಜ್ಯೋತಿ ಗಣೇಶ್ ಕೆಜೆಪಿಯಿಂದ ತುಮಕೂರು ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಬ್ಬರೂ ಸೋಲು ಕಂಡಿದ್ದರು. ಈಗ ಜ್ಯೋತಿ ಗಣೇಶ್ ಬಿಜೆಪಿಗೆ ವಾಪಸ್ ಆಗಿದ್ದಾರೆ. ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಮಾಡಿದ ತಕ್ಷಣದಿಂದ ಅಸಮಾಧಾನ ಭುಗಿಲೆದ್ದಿದೆ.

ಸೊಗಡು ಶಿವಣ್ಣ ಆರೋಪ
'ತುಮಕೂರಿನಲ್ಲಿ ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದೆ. ಅವರಿಬ್ಬರು ಬಿಜೆಪಿ ಸೇರಿಕೊಂಡು ಎಲ್ಲರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ' ಎಂದು ಸೊಗಡು ಶಿವಣ್ಣ ಜಿ.ಎಸ್.ಬಸವರಾಜು ಮತ್ತು ಅವರ ಪುತ್ರ ಜಿ.ಬಿ.ಜ್ಯೋತಿ ಗಣೇಶ್ ವಿರುದ್ಧ ಆರೋಪ ಮಾಡಿದ್ದರು.

ಪಕ್ಷದ ಸಂಧಾನ ಸೂತ್ರ
ಪಕ್ಷದ ಮೂಲಗಳ ಮಾಹಿತಿಯಂತೆ ಈ ಬಾರಿ ಜಿ.ಬಿ.ಜ್ಯೋತಿ ಗಣೇಶ್, ಸೊಗಡು ಶಿವಣ್ಣ ಇಬ್ಬರಿಗೂ ಟಿಕೆಟ್ ನೀಡುವುದಿಲ್ಲ. ಶಿವಣ್ಣ ಅವರಿಗೆ ಪರಿಷತ್ ಸ್ಥಾನ ನೀಡುವ ಕುರಿತು ಚಿಂತನೆ ನಡೆದಿದೆ. ಜಿ.ಎಸ್.ಬಸವರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಜಿ.ಬಿ.ಜ್ಯೋತಿ ಗಣೇಶ್ ಅವರಿಗೂ ಟಿಕೆಟ್ ನೀಡದೆ ಪಕ್ಷದಲ್ಲಿ ಬೇರೆ ಹುದ್ದೆ ನೀಡುವ ಸಾಧ್ಯತೆ ಇದೆ.

ಸೂತ್ರಕ್ಕೆ ಒಪ್ಪಿಗೆ ಇದೆಯೇ?
ಜಿ.ಬಿ.ಜ್ಯೋತಿ ಗಣೇಶ್, ಸೊಗಡು ಶಿವಣ್ಣ ಇಬ್ಬರಿಗೂ ಟಿಕೆಟ್ ನೀಡುವುದಿಲ್ಲ ಎಂಬ ಸೂತ್ರವನ್ನು ಎಲ್ಲಾ ನಾಯಕರು ಒಪ್ಪಲಿದ್ದಾರೆಯೇ ಕಾದು ನೋಡಬೇಕು?. ಇಬ್ಬರಿಗೂ ಟಿಕೆಟ್ ನೀಡದಿದ್ದರೆ ಯಾರು ಅಭ್ಯರ್ಥಿ? ಎಂಬುದು ಕುತೂಹಲದ ಪ್ರಶ್ನೆ.

2013ರ ಫಲಿತಾಂಶ
ತುಮಕೂರು ನಗರ ಕ್ಷೇತ್ರ ಸದ್ಯ ಕಾಂಗ್ರೆಸ ವಶದಲ್ಲಿದೆ. ಡಾ.ರಫೀಕ್ ಅಹಮದ್ ಅವರು ಕ್ಷೇತ್ರದ ಶಾಸಕರು. 2013 ರ ಚುನಾವಣೆಯಲ್ಲಿ 43,681 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಕೆಜೆಪಿಯಿಂದ ಸ್ಪರ್ಧಿಸಿದ್ದ ಜಿ.ಬಿ.ಜ್ಯೋತಿ ಗಣೇಶ್ 40,073 ಮತ ಪಡೆದಿದ್ದರು. ಸೊಗಡು ಶಿವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದರು ಮತ್ತು 13,159 ಮತ ಪಡೆದಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart












Click it and Unblock the Notifications