ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾರಿಗೆ ಒಲಿಯಲಿದೆ ಜೆಡಿಎಸ್‌ನ 1 ಹೆಚ್ಚುವರಿ ಸಚಿವ ಸ್ಥಾನ

|
Google Oneindia Kannada News

Recommended Video

ಸಚಿವ ಸ್ಥಾನದ ಬಗ್ಗೆ ರಹಸ್ಯ ಉಳಿಸಿಕೊಂಡ ಜೆಡಿಎಸ್ | Oneindia Kannada

ಬೆಂಗಳೂರು, ಜೂನ್ 10: ಯಾರಿಗೆ ಜೆಡಿಎಸ್‌ನ 1 ಹೆಚ್ಚುವರಿ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಸದ್ಯದ ಕುತೂಹಲವಾಗಿದೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬ ಕುತೂಹಲಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

ಇದೀಗ ಜೆಡಿಎಸ್‌ನ ಒಂದು ಹೆಚ್ಚುವರಿ ಸ್ಥಾನ ಯಾರಿಗೆ ಲಭ್ಯವಾಗಲಿದೆ ಎನ್ನುವುದೇ ಕುತೂಹಲಕಾರಿ ಅಂಶವಾಗಿದೆ.

ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ : ಎಚ್.ನಾಗೇಶ್ ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ : ಎಚ್.ನಾಗೇಶ್

ಬುಧವಾರ ಬೆಳಗ್ಗೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಒಂದು ಸ್ಥಾನ ಪಕ್ಷದಲ್ಲಿರುವವರಿಗೆ ನೀಡಲಾಗುತ್ತದೆಯೋ ಅಥವಾ ಮತ್ತೆ ಖಾಲಿ ಉಳಿಸಿಕೊಳ್ಳಲಾಗುತ್ತದೆಯೋ ಎಂಬುದು ಮಾತ್ರ ನಿಗೂಢವಾಗಿದೆ. ಈ ಕುರಿತು ಸೋಮವಾರ ಸ್ಪಷ್ಟನೆ ದೊರೆಯಲಿದೆ.

ಎರಡೂ ಸ್ಥಾನ ತಮಗೇ ಬೇಕು ಎಂದು ಕಾಂಗ್ರೆಸ್‌ ಬೇಡಿಕೆ

ಎರಡೂ ಸ್ಥಾನ ತಮಗೇ ಬೇಕು ಎಂದು ಕಾಂಗ್ರೆಸ್‌ ಬೇಡಿಕೆ

ಎರಡೂ ಸ್ಥಾನಗಳು ತಮಗೇ ಬೇಕು ಎಂದು ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ದರು. ಇದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರೂ ಸಹಮತ ನೀಡಿದ್ದರು. ಆದರೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರು ಮಾತ್ರ ಒಂದು ಸ್ಥಾನ ನೀಡುವುದಾಗಿ ಪಟ್ಟುಹಿಡಿದಿದ್ದರು.

ಸಂಪುಟ ವಿಸ್ತರಣೆ : ದೇವೇಗೌಡ ಭೇಟಿಯಾದ ಕುಮಾರಸ್ವಾಮಿ ಸಂಪುಟ ವಿಸ್ತರಣೆ : ದೇವೇಗೌಡ ಭೇಟಿಯಾದ ಕುಮಾರಸ್ವಾಮಿ

ಜೆಡಿಎಸ್ ಪಾಲಿನ ಒಂದು ಸಚಿವ ಸ್ಥಾನ ಯಾರಿಗೆ?

ಜೆಡಿಎಸ್ ಪಾಲಿನ ಒಂದು ಸಚಿವ ಸ್ಥಾನ ಯಾರಿಗೆ?

ಜೆಡಿಎಸ್ ಪಾಲಿನ ಒಂದು ಸಚಿವ ಸ್ಥಾನವನ್ನು ಪಕ್ಷೇತರ ಶಾಸಕ ಎನ್.ನಾಗೇಶ್ ಅವರಿಗೆ ನೀಡಿದ ನಂತರ ಉಳಿಯುವ ಮತ್ತೊಂದು ಸ್ಥಾನವನ್ನು ಪಕ್ಷದ ಶಾಸಕರಿಗೆ ನೀಡುವ ಬಗ್ಗೆ ಚರ್ಚೆ ನಡೆದಿದೆ.

ವಿಧಾನ ಪರಿಷತ್ ಸದಸ್ಯರಿಗೆ ಸಿಗುತ್ತಾ ಮಂತ್ರಿ ಹುದ್ದೆ

ವಿಧಾನ ಪರಿಷತ್ ಸದಸ್ಯರಿಗೆ ಸಿಗುತ್ತಾ ಮಂತ್ರಿ ಹುದ್ದೆ

ಜೆಡಿಎಸ್ ವತಿಯಿಂದ ವಿಧಾನಪರಿಷತ್ ಸದಸ್ಯರಿಗೆ ಒಂದು ಸಚಿವ ಸ್ಥಾನವನ್ನೂ ನೀಡಿಲ್ಲ, ಹೀಗಾಗಿ ಪರಿಷತ್ ಸದಸ್ಯರಿಗೆ ಕೊಡುವುದು ಸೂಕ್ತ ಎಂಬ ಒಲವು ಪಕ್ಷದಲ್ಲಿ ವ್ಯಕ್ತವಾಗಿದೆ. ಆ ಪೈಕಿ ಬಸವರಾಜ ಹೊರಟ್ಟಿ, ಬಿಎಂ ಫಾರೂಕ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿರುವ ಎಚ್ ವಿಶ್ವನಾಥ್ ಹೆಸರೂ ಪ್ರಸ್ತಾಪವಾಗಿದೆ.

ದೇವೇಗೌರು, ಕುಮಾರಸ್ವಾಮಿ ಅಭಿಪ್ರಾಯವೇನು?

ದೇವೇಗೌರು, ಕುಮಾರಸ್ವಾಮಿ ಅಭಿಪ್ರಾಯವೇನು?

ಹೊರಟ್ಟಿ ಅವರಿಗಿಂತ ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಇಂಗಿತ ವ್ಯಕ್ತಪಡಿಸಿದ್ದಾರೆ. ಎನ್ನಲಾಗುತ್ತಿದೆಯಾದರೂ ಇದುವರೆಗೆ ಫಾರೂಕ್ ಅವರಿಗೂ ಯಾವುದೇ ಮಾಹಿತಿ ರವಾನೆಯಾಗಿಲ್ಲ. ಅಲ್ಪಸಂಖ್ಯಾತರಿಗೆ ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಜೆಡಿಎಸ್ ನಿಂದ ಒಂದು ಸ್ಥಾನವನ್ನೂ ನೀಡಿಲ್ಲ. ಕಾಂಗ್ರೆಸ್‌ನಿಂದ ಮೂವರು ಮುಸ್ಲಿಂ ಸಮುದಾಯದ ಸಚಿವರಿದ್ದಾರೆ. ಯುಟಿ, ಖಾದರ್, ಜಮೀರ್ ಅಹಮದ್, ರಹೀಂ ಖಾನ್ ಇದೀಗ ಜೆಡಿಎಸ್‌ನಿಂದಲೂ ಒಂದು ಸ್ಥಾನವನ್ನು ನೀಡುವ ಮೂಲಕ ಆ ವರ್ಗದವರ ವಿಶ್ವಾಸ ಉಳಿಸಿಕೊಳ್ಳಲು ಮುಂದಾಗಿದ್ದಾರೆಯೇ ಎನ್ನುವ ಅನುಮಾನ ಕಾಡುತ್ತಿದೆ.

English summary
JDS will give one of its ministry to independent and there is a suspence about another one.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X