ಬಾಬೂರಾವ್ ಚಿಂಚನಸೂರು ಬಿಜೆಪಿಗೆ, ಖರ್ಗೆ ಸೋಲಿಸಲು ತಂತ್ರ!
Recommended Video

ಬೆಂಗಳೂರು, ಆಗಸ್ಟ್ 30 : ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಬಿಜೆಪಿ ಸೇರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಇದರು ಮಹತ್ವದ ಬೆಳವಣಿಗೆಯಾಗಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಾಬೂರಾವ್ ಚಿಂಚನಸೂರು ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಿರಿಯ ನಾಯಕನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ಏಕೆ? ಎಂಬುದು ಹಲವರ ಪ್ರಶ್ನೆ.
ಕೋಲಿ ಸಮಾಜಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ನಾಯಕರು. ಮಾಲೀಕಯ್ಯ ಗುತ್ತೇದಾರ್ ಮತ್ತು ಬಾಬೂರಾವ್ ಚಿಂಚನಸೂರು ಅವರು ಕಾಂಗ್ರೆಸ್ ಪಕ್ಷ ತೊರೆದಿರುವುದು ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವುದಂತೂ ಖಚಿತ.
2008, 2013ರ ಚುನಾವಣೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದಿದ್ದ ಬಾಬೂರಾವ್ ಚಿಂಚನಸೂರು ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು ಆಗಿದ್ದರು. ಆದರೆ, 2018ರ ಚುನಾವಣೆಯಲ್ಲಿನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಬಾಬೂರಾವ್ ಚಿಂಚನಸೂರು ಅವರು ಆರೋಪ ಮಾಡುತ್ತಿದ್ದಾರೆ.

ಬಿಜೆಪಿಗೆ ಚಿಂಚನಸೂರು ಸೇರಿದ್ದೇಕೆ?
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಬಾಬೂರಾವ್ ಚಿಂಚನಸೂರು ಅವರು, 'ನನ್ನ ಆಸೆ ಎರಡೇ ಒಂದು ಗುರುಮಿಠಕಲ್ ಜನರ ಸೇವೆ ಮಾಡುವುದು, ಮತ್ತೊಂದು ನಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು' ಅದಕ್ಕಾಗಿ ಬಿಜೆಪಿ ಸೇರಿದ್ದೇನೆ ಎಂದು
ಕೋಲಿ ಸಮುದಾಯಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ಬಿಜೆಪಿಗೆ ಹೇಗೆ ಸಹಾಯಕವಾಗಲಿದೆ? ಎಂಬ ಚರ್ಚೆ ಆರಂಭವಾಗಿದೆ. ಬಾಬೂರಾವ್ ಚಿಂಚನಸೂರು ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ತಂತ್ರ ರೂಪಿಸಿದೆ.

ಬಾಬೂರಾವ್ ಚಿಂಚನಸೂರು
ಕೋಲಿ ಸಮಾಜಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಎಂದು ಹೆಸರುಗಳಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.
ಗುರುಮಿಠಕಲ್, ಚಿತ್ತಾಪುರ ಭಾಗದಲ್ಲಿ ಕೋಲಿ ಸಮುದಾಯದ ಮತಗಳು ಸಾಕಷ್ಟಿವೆ. ಅವುಗಳನ್ನು ಸೆಳೆದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಬೇಕು ಎಂಬುದು ಬಿಜೆಪಿಯ ತಂತ್ರವಾಗಿದೆ.

ರಾಷ್ಟ್ರಮಟ್ಟದಲ್ಲಿ ಮುಜುಗರ
ಮಲ್ಲಿಕಾರ್ಜುನ ಖರ್ಗೆ ಅವರು 9 ಬಾರಿ ವಿಧಾನಸಭೆಗೆ ಮತ್ತು 2 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರು ಅವರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ತಂದಂತೆ ಆಗುತ್ತದೆ. ಅಲ್ಲದೇ ಕಾಂಗ್ರೆಸ್ನಲ್ಲಿ ರಾಷ್ಟ್ರಮಟ್ಟದ ನಾಯಕನನ್ನು ಸೋಲಿಸಿದಂತೆ ಆಗುತ್ತದೆ. ಆದ್ದರಿಂದ, ಬಾಬೂರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಖರ್ಗೆ ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.

ಇಬ್ಬರು ಪ್ರಭಾವಿ ನಾಯಕರು ಬಿಜೆಪಿಗೆ
ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್, ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕ ಬಾಬೂರಾವ್ ಚಿಂಚನಸೂರು ಅವರು ಬಿಜೆಪಿ ಸೇರಿದ್ದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ.
ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ಅದರ ಪ್ರಭಾವ ಬೇರೆ ಜಿಲ್ಲೆಗಳ ಮೇಲೂ ಪರಿಣಾಮ ಬೀರಬಹುದು. ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಯಾರು? ಎಂಬುದರ ಮೇಲೆ ಸೋಲು-ಗೆಲುವು ನಿರ್ಧಾರವಾಗಲಿದೆ.

ಕಳೆದ ಬಾರಿ ಸೋತಿದ್ದರು
2014ರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬಿಜೆಪಿ ಅಭ್ಯರ್ಥಿಯಾಗಿ ರೇವು ನಾಯಕ್ ಬೆಳಮಗಿ ಸ್ಪರ್ಧಿಸಿದ್ದರು. 432,460 ಮತಗಳನ್ನು ಪಡೆದು ಸೋಲು ಕಂಡಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ರೇವು ನಾಯಕ್ ಬೆಳಮಗಿ ಜೆಡಿಎಸ್ ಸೇರಿದ್ದರು. ಆದ್ದರಿಂದ, ಈ ಬಾರಿ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications