ಬಿಜೆಪಿಯ ಅಧಿಕಾರದಾಹದ ಬಗ್ಗೆ ಪ್ರಶ್ನಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು, ಜುಲೈ 22 : ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲಿನ ಚರ್ಚೆ ಸೋಮವಾರವೂ ಮುಂದುವರೆದಿದೆ. ಚರ್ಚೆಯ ನಡುವೆಯೇ ಕಾಂಗ್ರೆಸ್ ಸದಸ್ಯರು ಆಪರೇಷನ್ ಕಮಲದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಆಪರೇಷನ್ ಕಮಲದ ವಿಚಾರವನ್ನು ಪ್ರಸ್ತಾಪಿಸಿದರು. ಬಿಜೆಪಿ ನಾಯಕರು ಶಾಸಕರ ರಾಜೀನಾಮೆ ಹಿಂದೆ ಇದ್ದಾರೆ ಎಂಬ ಮಾಧ್ಯಮಗಳ ವರದಿಗಳನ್ನು ಪ್ರಸ್ತಾಪಿಸಿದರು.
ವಿಶ್ವಾಸಮತದ ಚರ್ಚೆ : ಸ್ಪೀಕರ್, ಸಿಎಂ ವಿರುದ್ಧ ಹೈಕೋರ್ಟ್ಗೆ ಅರ್ಜಿ
ಸಚಿವ ಡಿ. ಕೆ. ಶಿವಕುಮಾರ್ ಮಾತನಾಡಿ, "ತಮಗೆ ಕುರ್ಚಿ ಬೇಕು ಎಂಬುದನ್ನು ಬಿಜೆಪಿ ನಾಯಕರು ಏಕೆ ಒಪ್ಪಿಕೊಳ್ಳುತ್ತಿಲ್ಲ. ಆಪರೇಷನ್ ಕಮಲದ ಹಿಂದೆ ನಾವಿದ್ದೇವೆ ಎಂಬುದನ್ನು ಅವರು ಏಕೆ ಒಪ್ಪಿಕೊಳ್ಳುತ್ತಿಲ್ಲ?" ಎಂದು ಪ್ರಶ್ನೆ ಮಾಡಿದರು.
ಅತೃಪ್ತರಿಗೆ ಅನರ್ಹತೆ ಭೀತಿ, ವಿಪ್ ಬಗ್ಗೆ ಸ್ಪೀಕರ್ ಮಹತ್ವದ ರೂಲಿಂಗ್
"ರೆಬಲ್ ಶಾಸಕರ ಜೊತೆ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಾರೆ" ಎಂಬುದನ್ನು ಅವರು ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ನಾಯಕರನ್ನು ಒತ್ತಾಯಿಸಿದರು.
ಯಾರನ್ನು ನಂಬಬೇಕು ಎಂಬುದೇ ತಿಳಿಯುತ್ತಿಲ್ಲ : ಸಿದ್ದರಾಮಯ್ಯ
ಸಚಿವ ಕೃಷ್ಣ ಬೈರೇಗೌಡ ಸಹ ಆಪರೇಷನ್ ಕಮಲದ ಬಗ್ಗೆ ವಿಷಯವನ್ನು ಪ್ರಸ್ತಾಪಿಸಿದರು. "ಅತೃಪ್ತರನ್ನು ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋದವರು ಯಾರು?. ಕರ್ನಾಟಕ ಮಾತ್ರವಲ್ಲ ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿಯೂ ಆಪರೇಷನ್ ಕಮಲ ಆಗಿದೆ" ಎಂದು ಸದನಲ್ಲಿ ಹೇಳಿದರು.