ಚಿಕನ್ ಪ್ರಿಯರಿಗೆ ಶಾಕ್: ಏಕಾಏಕಿ ದರ ಏರಿಕೆ ಯಾಕೆ ಗೊತ್ತಾ..?
ಬೆಂಗಳೂರು, ಮಾರ್ಚ್ 03: ಈ ಬಾರಿ ನಿರೀಕ್ಷೆಗೂ ಮೀರಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ತಾಪಮಾನ ಏರಿಕೆಯ ಪರಿಣಾಮ ಜೋರಾಗಿದೆ. ರಾಜ್ಯದಲ್ಲಿ ನೀರಿನ ಕೊರೆತೆ ಹೆಚ್ಚಾಗುತ್ತಿದ್ದು, ಬಿರು ಬಿಸಿಲಿಗೆ ಜನ ತತ್ತರಿಸಿದ್ದಾರೆ. ಒಂದೆಡೆ ಜಾನುವಾರು, ಪಕ್ಷಿಗಳಿಗೂ ಕುಡಿಯುವ ನೀರಿನ ಕೊರೆತೆ ಉಂಟಾಗುತ್ತಿದ್ದು, ಮತ್ತೊಂದೆಡೆ ಬಿಸಿಲಿನ ತಾಪಕ್ಕೆ ಪ್ರಾಣಿ-ಪಕ್ಷಿಗಳು ಸಾವನ್ನಪ್ಪುತ್ತಿದೆ.
ತಾಪಮಾನ ಏರಿಕೆಯ ಪರಿಣಾಮ ಕುಕ್ಕಟೋದ್ಯಮಕ್ಕೂ ತಟ್ಟಿದ್ದು, ಫೌಲ್ಟ್ರಿ ಫಾರಂನಲ್ಲಿ ಕೋಳಿಗಳು ಸಾವನ್ನಪ್ಪುತ್ತಿದೆ. ಬಿಸಿಲ ತಾಪಕ್ಕೆ ಕೋಳಿ ಬೆಳವಣಿಗೆ ಕುಂಠಿತ, ಮರಣ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಏಕಾಏಕಿ ಏರಿಕೆಯಾಗಿದೆ. ಕೋಳಿ ಮಾಂಸದ ದರ ಒಂದೇ ವಾರದಲ್ಲಿ ಕೆಜಿಗೆ ಈವತ್ತರಿಂದ ಎಪ್ಪತು ರೂಪಾಯಿ ಏರಿಕೆಯಾಗಿದೆ.

ಫೌಲ್ಟ್ರಿ ಫಾರಂನಲ್ಲಿರುಬ ಕೋಳಿಗಳು ಬೇಸಿಗೆಯಲ್ಲಿ ಆಹಾರಕ್ಕಿಂತ ಹೆಚ್ಚಾಗಿ ನೀರು ಸೇವಿಸುತ್ತವೆ ಇದರಿಂದ ತೂಕ ಗಣನೀಯವಾಗಿ ಕಮೆಯಾಗುತ್ತದೆ. ಸಾಮಾನ್ಯ ದಿನಗಳಲ್ಲಿ 40 ದಿನಕ್ಕೆ ಎರಡೂವರೆ ಕೆಜಿ ತೂಕ ಬರುವ ಕೋಳಿ, ಬೇಸಿಗೆಯಲ್ಲಿ ಒಂದೂವರೆಯಿಂದ ಒಂದು ಮುಕ್ಕಾಲು ಕೆಜಿ ಮಾತ್ರ ತೂಗುತ್ತದೆ.
ಜೊತೆಗೆ ಕೋಳಿಗಳಿಗೆ ಬಿಸಿಲಿನ ಝಳ ಹಾಗೂ ಸೆಕೆ ತಾಳಲಾರದೆ ಸಾವನ್ನಪ್ಪುತ್ತದೆ. ಬೇಸಿಗೆಯಲ್ಲಿ ಐಬಿಎಚ್ ಸೋಂಕು ತಗುಲುವುದರಿಂದ, ರೋಗ ನಿರೋಧಕ ಶಕ್ತಿ ಕುಂದುತ್ತದೆ. ಹೀಗಾಗಿ ಬೇಡಿಕೆ ಇರುವಷ್ಟು ಕೋಳಿ ಮಾಂಸ ಉತ್ಪಾದನೆ ಇಲ್ಲ. ಆದರೆ ಕೋಳಿ ಮಾಂಸದ ಬೇಡಿಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಕಳೆದ ಒಂದು ತಿಂಗಳಲ್ಲಿ ಅನೇಕ ಬಾರಿ ಕೋಳಿ ದರ ಏರಿಕೆಯಾಗಿದ್ದು, ಒಂದು ವಾರದ ಹಿಂದೆ 180 ರೂಪಾಯಿ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ 250 ರೂಪಾಯಿಗೆ ತಲುಪಿದೆ. ಇನ್ನು ಜಿಲ್ಲೆಗಳಿಗೆ ಅನುಗುಣವಾಗಿ ಬೆಲೆಯಲ್ಲಿ ಏರಿಳಿತ ಬದಲಾವಣೆಗಳಿದೆ.
ಪ್ರಸ್ತುತ ಕೋಳಿ ಮರಿ ದರ 50 ರೂಪಾಯಿ ನಿಗದಿಯಾಗಿದ್ದು, ಉತ್ಪಾದನಾ ವೆಚ್ಚ ನೂರರ ಗಡಿ ದಾಟಿದೆ. ಒಂದು ಕೆಜಿ ತೂಕದ ಕೋಳಿ ಬೆಳೆಸಲು 130ರಿಂದ 140 ರೂಪಾಯಿ ಖರ್ಚಾಗುತ್ತಿದ್ದು, ಸದ್ಯ ಕೋಳಿ ಮಾಂಸದ ದರ ಇನ್ನೂರೈವತ್ತರ ಗಡಿ ದಾಟಿ ಸಾಗುತ್ತಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications