ಮೈಸೂರು ಕರ್ನಾಟಕವಾಗಿ ಬದಲಾಗಿದ್ದು ಯಾಕೆ?
ಬೆಂಗಳೂರು, ನ. 1: ಕರುನಾಡ ತುಂಬೆಲ್ಲ 59ನೇ ರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಮೊದಲು ಮೈಸೂರು ಎಂದಿದ್ದ ರಾಜ್ಯ ಕರ್ನಾಟಕವಾಗಿ ಬದಲಾಗಿದ್ದು ಹೇಗೆ? ರಾಜ್ಯಕ್ಕೆ ಮರುನಾಮಕರಣ ಮಾಡಿದ್ದು ಯಾರು? ಇನ್ನು ಮುಂತಾದ ಅಂಶಗಳ ಮೇಲೊಂದು ನೋಟ ಇಲ್ಲಿದೆ.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ವೇಳೆ ದೇಶ 500 ಕ್ಕೂ ಹೆಚ್ಚು ಪ್ರಾಂತ್ಯಗಳಾಗಿ ಒಡೆದು ಹಂಚಿ ಹೋಗಿತ್ತು. ನಂತರ ದೇಶವನ್ನು ಒಂದೇ ಆಡಳಿದ ಅಡಿಯಲ್ಲಿ ತರುವ ಉದ್ದೇಶದಿಂದ ಒಂದೇ ಭಾಷೆ ಮಾತನಾಡುವ ಪ್ರದೇಶವನ್ನು ಒಟ್ಟುಗೂಡಿಸಿ ರಾಜ್ಯಗಳನ್ನಾಗಿ ವಿಂಗಡಿಸಲಾಯಿತು ಎಂದು ಇತಿಹಾಸ ಹೇಳುತ್ತದೆ.[ಹೆಸರು ಬದಲಾದ ರಾಜ್ಯದ 12 ಊರುಗಳ ಪಟ್ಟಿ]
ಕನ್ನಡ ಭಾಷೆ ಮಾತನಾಡುವ ಪ್ರದೇಶ 1956ರಲ್ಲಿ 'ಮೈಸೂರು' ರಾಜ್ಯವಾಯಿತು. ಏಕೀಕರಣಕ್ಕೆ ಅನೇಕ ಮಹನೀಯರು ಹೋರಾಟ ಮಾಡಿದರು. ರಾಜ್ಯ ಉದಯದ ನಂತರ ಸಂವಿಧಾನಾತ್ಮಕ ಸರ್ಕಾರ ಅಸ್ತಿತ್ವಕ್ಕೆ ಬಂದು ಆಡಳಿತ ಆರಂಭವಾಯಿತು.
ಆದರೆ ಮೈಸೂರು ಕರ್ನಾಟಕವಾದ್ದು 1973ರ ನವೆಂಬರ್ 1 ರಂದು. ಇದರ ಹಿಂದಿನ ಕತೆ ಸರಳ. ಇಡೀ ರಾಜ್ಯಕ್ಕೆ ಅದರಲ್ಲೂ ಉತ್ತರ ಕರ್ನಾಟಕದ ಜನರಿಗೆ ಈ ಮೈಸೂರು ಎಂಬ ಹೆಸರು ಸರಿ ಬರಲಿಲ್ಲ. ಇದು ಕೇವಲ ಒಂದು ಪ್ರದೇಶಕ್ಕೆ ಮಾತ್ರ ಸೀಮಿತ ಎಂಬಂತೆ ಕಾಣುತ್ತಿದೆ ಎಂಬ ದೂರುಗಳು ಬರತೊಡಗಿದವು.
ಈ ಎಲ್ಲ ಹಿನ್ನೆಲೆಯನ್ನು ಆಧರಿಸಿ ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸ್ ಅವಧಿಯಲ್ಲಿ ಮೈಸೂರು ಪ್ರಾಂತ್ಯವನ್ನು ಕರ್ನಾಟಕವಾಗಿ ಬದಲಾಯಿಸುವ ತೀರ್ಮಾನ ತೆಗೆದುಕೊಂಡರು. ಇದಕ್ಕೆ ಕೆಲ ರಾಜಕೀಯ ಕಾರಣಗಳು ಇದ್ದವು ಎಂಬ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ.[ರಾಜ್ಯೋತ್ಸವ ಸಂದರ್ಭದಲ್ಲಿ ನಾಡ ಗೀತೆ ಓದಿ, ಕೇಳಿ]
ಕರ್ನಾಟಕ ಎಂಬ ಹೆಸರು ಇಡಲು ಅನೇಕ ಸಾಹಿತಿಗಳು, ಭಾಷಾ ತಜ್ಞರೊಂದಿಗೆ ಸಮಾಲೋಚನೆ ಮಾಡಲಾಗಿತ್ತು. ಕುವೆಂಪು, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಮತ್ತು ಕೃಷ್ಣ ರಾವ್ ರಂಥ ಸಾಹಿತಿಗಳು 'ಕರ್ನಾಟಕ' ಎಂಬ ಹೆಸರು ಇಡಲು ಕಾರಣಿಭೂತರಾದರು.
ಈ ಹೆಸರು ಬದಲಾವಣೆ ಪ್ರಕ್ರಿಯೆ ಇಲ್ಲಿಗೆ ಮುಗಿಯಲ್ಲ, ಮಂಗಳೂರು ದಕ್ಷಿಣ ಕನ್ನಡವಾಗಿ, ಕಾರವಾರ ಉತ್ತರ ಕನ್ನಡವಾಗಿ ಬದಲಾಗಿದ್ದು ಇತಿಹಾಸ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೆಲವೊಂದು ನಗರಗಳ ಹೆಸರು(ಸ್ಪೆಲಿಂಗ್) ಬದಲಾಯಿಸಿ ಆದೇಶ ಹೊರಡಿಸಿದೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ












Click it and Unblock the Notifications