ಟಿಪ್ಪು ಜಯಂತಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ತ್ರಿವಳಿ ತಲಾಖ್ ಬಗ್ಗೆ ಜಾಣಮೌನ: ಈಶ್ವರಪ್ಪ
ಬೆಂಗಳೂರು, ಜುಲೈ 31: ಟಿಪ್ಪು ಜಯಂತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ತ್ರಿವಳಿ ತಲಾಖ್ ಬಗ್ಗೆ ಮೌನವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು, ಹಿರಿಯ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಛೇಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರಪ್ಪ ಬರೆದುಕೊಂಡಿದ್ದು ಹೀಗೆ, " ಶಾದಿಭಾಗ್ಯ'ವನ್ನು ಶಾಶ್ವತವಾಗಿ ಉಳಿಸುವ ಟ್ರಿಪಲ್ ತಲಾಕ್ ಬಿಲ್ ರಾಜ್ಯಸಭೆಯಲ್ಲಿ ಪಾಸ್ ಆಗಿ 12 ಗಂಟೆಗಳು ಕಳೆದರೂ, ಮಾಜಿ ಮುಖ್ಯಮಂತ್ರಿಗಳ ಜಾಣ ಕಿವುಡು ಕೆಲಸ ಮಾಡಿದೆ".
"ಮತಾಂಧನ ಜಯಂತಿ ರದ್ದು ಮಾಡಿದಾಗ ಉಕ್ಕಿ ಬಂದ ರೋಷಾವೇಷಗಳು, ಮುಸ್ಲಿಂ ಮಹಿಳೆಯರ ಗೌರವ ಉಳಿಸುವ ಟ್ರಿಪಲ್ ತಲಾಕ್ ಬಿಲ್ ಪಾಸ್ ಆದ ಕೂಡಲೇ ತಣ್ಣಗಾಗಿದೆ" ಇದು ಸಿದ್ದರಾಮಯ್ಯನವರನ್ನು ಲೇವಡಿ ಮಾಡುತ್ತಾ ಈಶ್ವರಪ್ಪ ಮಾಡಿರುವ ಟ್ವೀಟ್.

ಟಿಪ್ಪು ಜಯಂತಿ ಆಚರಿಸುವುದನ್ನು ಸರಕಾರ ಹಿಂದಕ್ಕೆ ಪಡೆದುಕೊಂಡ ನಂತರ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, "ಟಿಪ್ಪು ಸುಲ್ತಾನ್ ಒಂದು ಧರ್ಮಕ್ಕೆ ಸೇರಿದವರಲ್ಲ. ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಸೇರಿರುವ ಆಸ್ತಿ. ಈ ಕಾರಣಕ್ಕಾಗಿಯೇ ಟಿಪ್ಪು ಜಯಂತಿ ಆಚರಣೆಯ ನಿರ್ಧಾರ ಕೈಗೊಂಡಿದ್ದೆ".
"ಜಾತಿ-ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯಲು ಹೊರಟಿರುವ ಬಿಜೆಪಿಯ ನಡೆ ಅನಿರೀಕ್ಷಿತವೇನಲ್ಲ" ಎಂದು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ ಇದ್ದ ಸಂಘ ಪರಿವಾರದವರಿಗೆ, ದೇಶಭಕ್ತಿಯ ಬಗ್ಗೆ ಹೇಗೆ ಗೊತ್ತಾಗಬೇಕೆಂದು ಲೇವಡಿ ಮಾಡಿದ್ದರು.
"ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿ 24 ಗಂಟೆಯೊಳಗೆ ದ್ವೇಷ ರಾಜಕಾರಣ ಮಾಡಿದ ವಚನ ಭ್ರಷ್ಟ @BSYBJP. ಕೇವಲ ಕೋಮುವಾದ ದೃಷ್ಟಿಕೋನದಿಂದಲೇ ಇತಿಹಾಸವನ್ನು ನೋಡುವ ಬಿಜೆಪಿ/ಆರೆಸ್ಸೆಸ್ ಇತಿಹಾಸವನ್ನು, ಟಿಪ್ಪುವಿನ ಕೊಡುಗೆಯನ್ನು ಓದಿ ತಿಳಿದುಕೊಳ್ಳಬೇಕಿದೆ" ಎಂದು ಕೆಪಿಸಿಸಿ ಟ್ವೀಟ್ ಮಾಡಿತ್ತು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications