ತಿ. ನರಸೀಪುರ ವಿಧಾನಸಭಾ ಕ್ಷೇತ್ರದತ್ತ ಕುತೂಹಲ ಏಕೆ?
ಮೈಸೂರು, ಏಪ್ರಿಲ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಲೋಕೋಪಯೋಗಿ ಸಚಿವ ಹೆಚ್.ಎಸ್.ಮಹದೇವಪ್ಪರವರ ಬಹುದಿನದ ಕನಸು ನನಸಾಗುತ್ತಾ ಎಂಬ ಕುತೂಹಲ ಎಲ್ಲರನ್ನು ಕಾಡತೊಡಗಿದೆ.
ಇಷ್ಟಕ್ಕೂ ಅವರ ಕನಸೇನೆಂದರೆ ತಮ್ಮ ಸುಪುತ್ರ ಸುನೀಲ್ ಬೋಸ್ ಅವರನ್ನು ತಾನು ಸ್ಪರ್ಧಿಸಿ ಸಚಿವರಾದ ತಿ. ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿ ಮುಂದಿನ ಶಾಸಕರನ್ನಾಗಿ ಮಾಡುವುದು.
ಸುನೀಲ್ ಬೋಸ್ ಅವರು ಕೂಡ ತಾನೇ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆಯಾದರೂ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕವೇ ಈ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದು ಗೊತ್ತಾಗಲಿದೆ. ರಾಜಕೀಯ ಮೂಲಗಳ ಪ್ರಕಾರ ಮಹದೇವಪ್ಪ ಅವರಿಗೆ ಕ್ಷೇತ್ರ ಬದಲಾಯಿಸದೆ, ಹಿಂದೆ ಸ್ಪರ್ಧಿಸಿದ ಕ್ಷೇತ್ರದಿಂದಲೇ ಸ್ಪರ್ಧಿಸಲು ಸೂಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹೊರತುಪಡಿಸಿ ಉಳಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಕೂಡ ಘೋಷಣೆ ಮಾಡಿಲ್ಲ. ಜೆಡಿಎಸ್ ಅಭ್ಯರ್ಥಿ ಸೋಮನಾಥಪುರ ಜಿಪಂ ಸದಸ್ಯ ಎಂ.ಅಶ್ವಿನ್ ಕುಮಾರ್ ಎಂದು ಫೆಬ್ರವರಿ 17ರಂದು ವಿಕಾಸಪರ್ವ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿರವರು ಘೋಷಣೆ ಮಾಡಿದ್ದರು.
ಇನ್ನು ತಿ.ನರಸೀಪುರ ಪಟ್ಟಣದ ವಿದ್ಯೋದಯ ಅವರಣದಲ್ಲಿ ಮಾರ್ಚ್ 5 ರಂದು ನಡೆದ ಶಂಕರ್ ಅಭಿಮಾನಿಗಳ ಬಳಗ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರವರು ಎಸ್.ಶಂಕರ್ ಗೆಲ್ಲಿಸಿ ಎಂಬುವುದರ ಮುಖಾಂತರ ಅವರೇ ಬಿಜೆಪಿ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಘೋಷಣೆ ಮಾಡಿದ್ದರು.
ಆದರೆ ಪಕ್ಷಗಳು ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕವಷ್ಟೆ ಅಭ್ಯರ್ಥಿಗಳು ಯಾರು ಎಂಬುದು ಗೊತ್ತಾಗಲಿದ್ದು, ಆ ನಂತರ ಕ್ಷೇತ್ರದಲ್ಲಿ ಚುನಾವಣಾ ರಂಗು ಹೆಚ್ಚಲಿದೆ. ಅಭ್ಯರ್ಥಿಗಳ ನಡುವೆ, ಪಕ್ಷಗಳ ನಡುವೆ ಜಿದ್ದಾಜಿದ್ದಿ ಆರಂಭವಾಗಲಿದೆ.
ಹಾಗೆನೋಡಿದರೆ ತಿ.ನರಸೀಪುರ ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕೀಯಕ್ಕೆ ಎನ್. ರಾಚಯ್ಯ, ಎಂ.ಎಸ್.ಗುರುಪಾದಸ್ವಾಮಿ, ಎಂ.ರಾಜಶೇಖರಮೂರ್ತಿ, ಪಿ.ವೆಂಕಟರಮಣ, ಡಾ.ಹೆಚ್.ಸಿ.ಮಹದೇವಪ್ಪ ಅವರಂತಹ ಪ್ರಮುಖ ನಾಯಕರನ್ನು ನೀಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಇದು ಮೀಸಲು ವಿಧಾನ ಸಭಾ ಕ್ಷೇತ್ರವಾಗಿದ್ದು, ಇಲ್ಲಿ 1,96,399 ಮತದಾರರಿದ್ದು ಪುರುಷರು 97,923 ಮತ್ತು ಮಹಿಳೆಯರು 98,476 ಮತದಾರರಿದ್ದಾರೆ. ಈ ಮತದಾರರು ಯಾರನ್ನು ಕೈಹಿಡಿಯುತ್ತಾರೆ ಎಂಬುದು ಮಾತ್ರ ನಿಗೂಢವಾಗಿದೆ.
ಆದರೆ ಮತದಾರರು ತಮ್ಮ ಕೈಹಿಡಿಯುತ್ತಾರೆ ಎಂಬ ನಿರೀಕ್ಷೆಯಲ್ಲಿ ಆಕಾಂಕ್ಷಿಗಳಾದ ಎಂ.ಸುನೀಲ್ಬೋಸ್, ಜೆಡಿಎಸ್ನ ಎಂ.ಅಶ್ವಿನ್ಕುಮಾರ್, ಬಿಜೆಪಿಯಿಂದ ಎಸ್.ಶಂಕರ್, ಸಮಾಜವಾದಿ ಪಕ್ಷದಿಂದ ಚಿದರವಳ್ಳಿ ಮಹದೇವಸ್ವಾಮಿ ಇದ್ದಾರೆ. ಪಕ್ಷದ ನಾಯಕರು ಅಭ್ಯರ್ಥಿಯನ್ನಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಮತ್ತು ಮತದಾರರು ಅವರಲ್ಲಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದೆಲ್ಲವೂ ದಿನಕಳೆದಂತೆಯೇ ಒಂದೊಂದಾಗಿ ಗೊತ್ತಾಗಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications