ತಿ. ನರಸೀಪುರ ವಿಧಾನಸಭಾ ಕ್ಷೇತ್ರದತ್ತ ಕುತೂಹಲ ಏಕೆ?
ಮೈಸೂರು, ಏಪ್ರಿಲ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಲೋಕೋಪಯೋಗಿ ಸಚಿವ ಹೆಚ್.ಎಸ್.ಮಹದೇವಪ್ಪರವರ ಬಹುದಿನದ ಕನಸು ನನಸಾಗುತ್ತಾ ಎಂಬ ಕುತೂಹಲ ಎಲ್ಲರನ್ನು ಕಾಡತೊಡಗಿದೆ.
ಇಷ್ಟಕ್ಕೂ ಅವರ ಕನಸೇನೆಂದರೆ ತಮ್ಮ ಸುಪುತ್ರ ಸುನೀಲ್ ಬೋಸ್ ಅವರನ್ನು ತಾನು ಸ್ಪರ್ಧಿಸಿ ಸಚಿವರಾದ ತಿ. ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿ ಮುಂದಿನ ಶಾಸಕರನ್ನಾಗಿ ಮಾಡುವುದು.
ಸುನೀಲ್ ಬೋಸ್ ಅವರು ಕೂಡ ತಾನೇ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆಯಾದರೂ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕವೇ ಈ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದು ಗೊತ್ತಾಗಲಿದೆ. ರಾಜಕೀಯ ಮೂಲಗಳ ಪ್ರಕಾರ ಮಹದೇವಪ್ಪ ಅವರಿಗೆ ಕ್ಷೇತ್ರ ಬದಲಾಯಿಸದೆ, ಹಿಂದೆ ಸ್ಪರ್ಧಿಸಿದ ಕ್ಷೇತ್ರದಿಂದಲೇ ಸ್ಪರ್ಧಿಸಲು ಸೂಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹೊರತುಪಡಿಸಿ ಉಳಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಕೂಡ ಘೋಷಣೆ ಮಾಡಿಲ್ಲ. ಜೆಡಿಎಸ್ ಅಭ್ಯರ್ಥಿ ಸೋಮನಾಥಪುರ ಜಿಪಂ ಸದಸ್ಯ ಎಂ.ಅಶ್ವಿನ್ ಕುಮಾರ್ ಎಂದು ಫೆಬ್ರವರಿ 17ರಂದು ವಿಕಾಸಪರ್ವ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿರವರು ಘೋಷಣೆ ಮಾಡಿದ್ದರು.
ಇನ್ನು ತಿ.ನರಸೀಪುರ ಪಟ್ಟಣದ ವಿದ್ಯೋದಯ ಅವರಣದಲ್ಲಿ ಮಾರ್ಚ್ 5 ರಂದು ನಡೆದ ಶಂಕರ್ ಅಭಿಮಾನಿಗಳ ಬಳಗ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರವರು ಎಸ್.ಶಂಕರ್ ಗೆಲ್ಲಿಸಿ ಎಂಬುವುದರ ಮುಖಾಂತರ ಅವರೇ ಬಿಜೆಪಿ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಘೋಷಣೆ ಮಾಡಿದ್ದರು.
ಆದರೆ ಪಕ್ಷಗಳು ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕವಷ್ಟೆ ಅಭ್ಯರ್ಥಿಗಳು ಯಾರು ಎಂಬುದು ಗೊತ್ತಾಗಲಿದ್ದು, ಆ ನಂತರ ಕ್ಷೇತ್ರದಲ್ಲಿ ಚುನಾವಣಾ ರಂಗು ಹೆಚ್ಚಲಿದೆ. ಅಭ್ಯರ್ಥಿಗಳ ನಡುವೆ, ಪಕ್ಷಗಳ ನಡುವೆ ಜಿದ್ದಾಜಿದ್ದಿ ಆರಂಭವಾಗಲಿದೆ.
ಹಾಗೆನೋಡಿದರೆ ತಿ.ನರಸೀಪುರ ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕೀಯಕ್ಕೆ ಎನ್. ರಾಚಯ್ಯ, ಎಂ.ಎಸ್.ಗುರುಪಾದಸ್ವಾಮಿ, ಎಂ.ರಾಜಶೇಖರಮೂರ್ತಿ, ಪಿ.ವೆಂಕಟರಮಣ, ಡಾ.ಹೆಚ್.ಸಿ.ಮಹದೇವಪ್ಪ ಅವರಂತಹ ಪ್ರಮುಖ ನಾಯಕರನ್ನು ನೀಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಇದು ಮೀಸಲು ವಿಧಾನ ಸಭಾ ಕ್ಷೇತ್ರವಾಗಿದ್ದು, ಇಲ್ಲಿ 1,96,399 ಮತದಾರರಿದ್ದು ಪುರುಷರು 97,923 ಮತ್ತು ಮಹಿಳೆಯರು 98,476 ಮತದಾರರಿದ್ದಾರೆ. ಈ ಮತದಾರರು ಯಾರನ್ನು ಕೈಹಿಡಿಯುತ್ತಾರೆ ಎಂಬುದು ಮಾತ್ರ ನಿಗೂಢವಾಗಿದೆ.
ಆದರೆ ಮತದಾರರು ತಮ್ಮ ಕೈಹಿಡಿಯುತ್ತಾರೆ ಎಂಬ ನಿರೀಕ್ಷೆಯಲ್ಲಿ ಆಕಾಂಕ್ಷಿಗಳಾದ ಎಂ.ಸುನೀಲ್ಬೋಸ್, ಜೆಡಿಎಸ್ನ ಎಂ.ಅಶ್ವಿನ್ಕುಮಾರ್, ಬಿಜೆಪಿಯಿಂದ ಎಸ್.ಶಂಕರ್, ಸಮಾಜವಾದಿ ಪಕ್ಷದಿಂದ ಚಿದರವಳ್ಳಿ ಮಹದೇವಸ್ವಾಮಿ ಇದ್ದಾರೆ. ಪಕ್ಷದ ನಾಯಕರು ಅಭ್ಯರ್ಥಿಯನ್ನಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಮತ್ತು ಮತದಾರರು ಅವರಲ್ಲಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದೆಲ್ಲವೂ ದಿನಕಳೆದಂತೆಯೇ ಒಂದೊಂದಾಗಿ ಗೊತ್ತಾಗಲಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications