ರಾಜಮೌಳಿಗೆ ಪದ್ಮಶ್ರೀ, ಸಿದ್ದರಾಮಯ್ಯಗೆ ಬಹಿರಂಗ ಪತ್ರ
ಬಾಹುಬಲಿ ಚಲನಚಿತ್ರ ಖ್ಯಾತಿಯ ನಿರ್ದೇಶಕ ರಾಜಮೌಳಿ ಅವರಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಬಂದಿರುವುದು ಹಲವರ ಹುಬ್ಬೇರಿಸಿದೆ. ಸ್ವತಃ ರಾಜಮೌಳಿ ಅವರೇ ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದನ್ನು ಓದಿರಬಹುದು. ನನಗೆ ಅಚ್ಚರಿಯಾಗಿದ್ದೇನೆಂದರೆ ಎಲ್ಲಾ ಬಿಟ್ಟು 'ಬಾಹುಬಲಿ' ನಿರ್ದೇಶಕನ ಹಿಂದೆ ನಮ್ಮ ಘನ ಕರ್ನಾಟಕ ಸರ್ಕಾರ ಬಿದ್ದಿದ್ದೇಕೆ. ಶಿಫಾರಸು ಮಾಡಲು ಬೇರೆ ಪ್ರತಿಭೆಗಳು ಕರ್ನಾಟಕದಲ್ಲಿ ಕಾಣಿಸಲಿಲ್ಲವೇ?
"ನಾನು ಹುಟ್ಟಿದ್ದು ಕರ್ನಾಟಕದಲ್ಲಿ, ಓದಿದ್ದು ಆಂಧ್ರಪ್ರದೇಶದಲ್ಲಿ, ಕೆಲಸ ಮಾಡಿದ್ದು ತಮಿಳುನಾಡಿನಲ್ಲಿ, ವಾಸವಾಗಿರೋದು ತೆಲಂಗಾಣದಲ್ಲಿ. ನಾನು ಎಲ್ಲಾ ರಾಜ್ಯಗಳಿಗೆ ಸೇರಿದವ ಎಂದು ಹೇಳಲು ಸಂತಸವಾಗುತ್ತಿದೆ ಎಂದು ಖ್ಯಾತ ನಿರ್ದೇಶಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಸ್.ಎಸ್.ರಾಜಮೌಳಿ ಹೇಳಿಕೊಂಡಿದ್ದಾರೆ.[ಪದ್ಮ ಪ್ರಶಸ್ತಿಗಳ ಮೇಲೆ ತೂರಿಬಂದ ಟೀಕಾಸ್ತ್ರಗಳು]
ಆದರೆ, ಪ್ರಶಸ್ತಿ ಕೊಟ್ಟಿದ್ದರ ಬಗ್ಗೆ ನಮ್ಮ ತಕರಾರಿಲ್ಲ. ಕರ್ನಾಟಕದವರು ವಿಶಾಲಹೃದಯಿಗಳು. ಕರ್ನಾಟಕದಲ್ಲೂ ಅನೇಕ ಸಾಹಿತಿಗಳು, ಸಿನಿಮಾ ಕ್ಷೇತ್ರ ದಿಗ್ಗಜರ ಮನೆಮಾತು ಕನ್ನಡವಾಗಿರದೇ ಬೇರೆ ಭಾಷೆಯಾಗಿದೆ.
ಆದರೆ, ಪ್ರಶಸ್ತಿ ಪಡೆಯಲು ಅಥವಾ ನೀಡಲು ಇರುವ ಮಾನದಂಡ ಅವರ ಸಾಧನೆ ಎಂಬುದಾದರೆ, ರಾಜಮೌಳಿ ಅವರೇನು ಕನ್ನಡ ಚಿತ್ರರಂಗಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಎನ್ನುವುದಾದರೆ ರಾಜ್ಯ ಸರ್ಕಾರ ಅಥವಾ ಸಂಸ್ಕೃತಿ ಇಲಾಖೆಗಳಿಂದ ಶಿಫಾರಸು ಕಳಿಸುವುದರಲ್ಲಿ ಅರ್ಥವೇ ಇರುವುದಿಲ್ಲ.

ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ ರಾಜಮೌಳಿ
"ನಾನು ಹುಟ್ಟಿದ್ದು ಕರ್ನಾಟಕದಲ್ಲಿ, ಓದಿದ್ದು ಆಂಧ್ರಪ್ರದೇಶದಲ್ಲಿ, ಕೆಲಸ ಮಾಡಿದ್ದು ತಮಿಳುನಾಡಿನಲ್ಲಿ, ವಾಸವಾಗಿರೋದು ತೆಲಂಗಾಣದಲ್ಲಿ. ನಾನು ಎಲ್ಲಾ ರಾಜ್ಯಗಳಿಗೆ ಸೇರಿದವ ಎಂದು ಹೇಳಲು ಸಂತಸವಾಗುತ್ತಿದೆ ಎಂದು ಖ್ಯಾತ ನಿರ್ದೇಶಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಸ್.ಎಸ್.ರಾಜಮೌಳಿ ಅವರು ಟ್ವಿಟ್ಟರ್ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಪ್ರತಿಭೆಗಳಿಲ್ಲವೇ
ವಿಷ್ಣುವರ್ಧನ್, ಅನಂತ್ ನಾಗ್ ಸೇರಿದಂತೆ ಅನೇಕ ನಟರಿದ್ದಾರೆ. ಎಂಟೆಂಟು ರಾಷ್ಟ್ರಪ್ರಶಸ್ತಿ ಕಳೆದ ಪಿ ಶೇಷಾದ್ರಿ, ಗಿರೀಶ್ ಕಾಸರವಳ್ಳಿಯಂಥ ನಿರ್ದೇಶಕರಿದ್ದಾರೆ. ಇವರ ಹೆಸರುಗಳನ್ನು ಶಿಫಾರಸ್ಸು ಮಾಡಿ ಹಠ ಹಿಡಿದು ಪ್ರಶಸ್ತಿ ಸಿಗುವಂತೆ ಮಾಡುವ ಛಾತಿ ನಮ್ಮ ಘನ ಸರ್ಕಾರದ ಅಧಿಕಾರಿಗಳಿಗೆ ಇಲ್ಲದ್ದಂತಾಗಿರುವುದು ದುರಂತವೇ ಸರಿ.

ಹೆಸರು ಶಿಫಾರಸು ಮಾಡಲು ಕಾರಣ ಏನು
ಇಷ್ಟಾದರೂ ರಾಜಮೌಳಿ ಹೆಸರು ಶಿಫಾರಸು ಮಾಡಲು ಕಾರಣ ಏನು ಎಂಬುದು ತಿಳಿಯುತ್ತಲೇ ಇಲ್ಲ. ಅಕಸ್ಮಾತ್ ಇದೇ ಶಿಫಾರಸು ಏನಾದರೂ ಜೆಡಿಎಸ್ ಕುಮಾರಣ್ಣ ಮಾಡಿದ್ರೆ ಒಪ್ಪಬಹುದಾಗಿತ್ತು. ಅವರ ಮಗ ನಿಖಿಲ್ ಗೌಡ ಅವರ ಜಾಗ್ವಾರ್ ಚಿತ್ರಕ್ಕೆ ರಾಜಮೌಳಿ ಕುಟುಂಬದ ಕೊಡುಗೆ ಇದೆ. ಆದರೆ, ಸಿದ್ದರಾಮಯ್ಯ ಸರ್ಕಾರಕ್ಕೆ, ಕರ್ನಾಟಕಕ್ಕೆ ರಾಜಮೌಳಿ ಕೊಡುಗೆ ಏನು ಬಲ್ಲವರು ತಿಳಿಸಿ.

ಪದ್ಮ ಪ್ರಶಸ್ತಿ ವಿಜೇತರಲ್ಲಿ ಕನ್ನಡಿಗರು
ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್, ಆರ್ಟ್ ಆಫ್ ಲಿವಿಂಗ್ ಖ್ಯಾತಿಯ ರವಿಶಂಕರ್ ಗುರೂಜಿ ಅವರಿಗೆ ಪ್ರಸಕ್ತ ಸಾಲಿನ ಪದ್ಮ ವಿಭೂಷಣ ನೀಡಲಾಗಿದ್ದರೆ 83 ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ನಡುವೆ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ ಬದಲಿಗೆ ಪದ್ಮಭೂಷಣವಾದರೂ ಸಿಗಬೇಕಿತ್ತು ಎಂಬ ಕೂಗೆದ್ದಿದೆ. ಪದ್ಮಶ್ರೀ ಸಿಗಬಾರದಿತ್ತು ಎಂಬ ಇನ್ನೊಂದು ಗುಂಪು ಹೇಳುತ್ತಿದ್ದು ಚರ್ಚೆಗೆ ಸಾಮಾಜಿಕ ಜಾಲ ತಾಣಗಳು ವೇದಿಕೆ ಒದಗಿಸಿವೆ. [ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ]
|
ಸರಣಿ ಟ್ವೀಟ್ ಗಳ ಮೂಲಕ ಸ್ಪಷ್ಟನೆ ನೀಡಿದ ರಾಜಮೌಳಿ
ಸರಣಿ ಟ್ವೀಟ್ ಗಳ ಮೂಲಕ ಸ್ಪಷ್ಟನೆ ನೀಡಿದ ರಾಜಮೌಳಿ ನಾನು ಪ್ರಶಸ್ತಿ ಬಯಸಿರಲಿಲ್ಲ ಎಂದಿದ್ದಾರೆ. ರಜನಿ ಅವರಿಗೆ ಪ್ರಶಸ್ತಿ ಸಿಕ್ಕಿದ್ದು ಸಂತಸ ತಂದಿದೆ ಎಂದಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications