R.Ashok: ರಸ್ತೆ, ಚರಂಡಿ ಬೇಡ ಅಂದ ಮೇಲೆ ತುಮಕೂರುವರೆಗೆ ಮೆಟ್ರೋ ಯಾಕೆ ಬೇಕು?
"ಗ್ಯಾರಂಟಿಗಳನ್ನು ನಿಲ್ಲಿಸಿ, ರಸ್ತೆ ಅಥವಾ ಚರಂಡಿ ನಿರ್ಮಾಣ ಮಾಡುವುದರಿಂದ ಜನ ಉದ್ಧಾರ ಆಗ್ತಾರಾ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ನೀಡಿರುವ ಹೇಳಿಕೆ ವಿರೋಧಕ್ಕೆ ಕಾರಣವಾಗಿದೆ. ತುಮಕೂರಿನ ಕಾರ್ಯಕ್ರಮದಲ್ಲಿ ಪರಮೇಶ್ವರ್ ಈ ರೀತಿ ಮಾತನಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಸ್ತೆ ಚರಂಡಿ ಬೇಡ ಎಂದ ಮೇಲೆ ತುಮಕೂರರಿನವರೆಗೂ ಮೆಟ್ರೋ ಯಾಕೆ ಬೇಕು? ಎಂದು ಕೇಳಿದ್ದಾರೆ.
ಈ ಬಗ್ಗೆ ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರಾ? ಎಂದಿರುವ ಸಚಿವ ಪರಮೇಶ್ವರ್ ಅವರೇ ಅಲ್ಲಿಗೆ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಎಂದು ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ನಡೆಸುವುದು, ಅಭಿವೃದ್ಧಿ ಮಾಡುವುದು ಅಂದರೆ 3 ತಿಂಗಳಿಗೋ, 6 ತಿಂಗಳಿಗೋ ಒಮ್ಮೆ ಗೃಹಲಕ್ಷ್ಮಿ ಹಣ ಅಕೌಂಟಿಗೆ ಹಾಕೋದು, ಬಾಕಿ ಸಮಯದಲ್ಲಿ ರಾಜಕೀಯ ಮಾಡೋದು, ಕುರ್ಚಿಗಾಗಿ ಕಿತ್ತಾಡೋದು ಅಂದುಕೊಂಡಿದ್ದಾರೆ ಕಾಂಗ್ರೆಸ್ ನಾಯಕರು ಎಂದು ವ್ಯಂಗ್ಯವಾಡಿದ್ದಾರೆ.

ರಸ್ತೆ, ಚರಂಡಿ, ಮೂಲಸೌಕರ್ಯ ನಿರ್ಮಾಣದಿಂದ ಬಡವರು ಉದ್ಧಾರ ಆಗಿಲ್ಲ ಅನ್ನೋ ಮನಸ್ಥಿತಿ ಇರುವ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಜನತೆ ಇನ್ನೇನು ತಾನೇ ನಿರೀಕ್ಷಿಸಲು ಸಾಧ್ಯ? ರಸ್ತೆ, ಚರಂಡಿ ಬೇಡ ಅಂದ ಮೇಲೆ, ತುಮಕೂರಿನವರೆಗೂ ಮೆಟ್ರೋ ಯಾಕೆ ಬೇಕು ಪರಮೇಶ್ವರ್ ಅವರೇ? ಎಸ್ಸಿಎಸ್ಪಿ/ಟಿಎಸ್ಪಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ, ಮೆಟ್ರೋ ಕಾಮಗಾರಿಯ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ ಎಂದಿದ್ದಾರೆ. ಒಟ್ಟಿನಲ್ಲಿ ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ. ಇದಂತೂ ಗ್ಯಾರಂಟಿ ಎಂದು ತಿರುಗೇಟು ನೀಡಿದ್ದಾರೆ.
ತುಮಕೂರು ಮೆಟ್ರೋಗೆ ವಿರೋಧ
ಬೆಂಗಳೂರು-ತುಮಕೂರು ನಡುವೆ ಮೆಟ್ರೋ ಸಂಪರ್ಕಕ್ಕೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಈ ಯೋಜನೆಗೆ ಈಗಾಗಲೇ ಡಿಪಿಆರ್ಗೆ ಟೆಂಡರ್ ಕೂಡ ಕರೆದಿದೆ. ಸದ್ಯ ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆಯಿಂದ ಮಾದಾವರದವರೆಗೆ ರೈಲು ಸೇವೆ ಲಭ್ಯವಿದೆ. ಸದ್ಯ ಮಾದಾವರದಿಂದ ತುಮಕೂರಿಗೆ 59.6 ಕಿಲೋಮೀಟರ್ ಉದ್ದದ ಮೆಟ್ರೋ ಮಾರ್ಗ ನಿರ್ಮಿಸುವುದಾಗಿ ಕರ್ನಾಟಕ ಸರ್ಕಾರ ಕಳೆದ ಬಜೆಟ್ನಲ್ಲೇ ಘೋಷಣೆ ಮಾಡಿತ್ತು. ಅಲ್ಲದೆ ಇದನ್ನು ಮೊದಲ ಅಂತರ್ ನಗರ ಮೆಟ್ರೋ ಯೋಜನೆ ಎಂದು ಕರೆಯಲಾಗಿದೆ.
ತುಮಕೂರು-ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬಿಎಂಆರ್ಸಿಎಲ್ ಡಿಪಿಆರ್ ಸಿದ್ಧಪಡಿಸಿದೆ. ಆದರೆ ಇದಕ್ಕೆ ಬಿಜೆಪಿ ನಾಯಕರಿಂದ ತೀವ್ರ ವಿರೋಧವೂ ವ್ಯಕ್ತವಾಗಿದೆ. ತುಮಕೂರಿಗೆ ಮೆಟ್ರೋ ಬದಲಿಗೆ ಉಪನಗರ ರೈಲುಗಳ ಅಭಿವೃದ್ಧಿಗೆ ಒತ್ತು ನೀಡುವಂತೆ ಸಂಸದ ತೇಜಸ್ವಿ ಸೂರ್ಯ ಸಲಹೆ ನೀಡಿದ್ದಾರೆ. ಮೆಟ್ರೋ ಯೋಜನೆ ಅವೈಜ್ಞಾನಿಕ, ದುಬಾರಿ ಮತ್ತು ನಗರ ಯೋಜನೆ ದುಃಸ್ವಪ್ನ, ಇದರಿಂದ ಅನುಕೂಲವಾಗುವುದು ರಿಯಲ್ ಎಸ್ಟೇಟ್ಗೆ ಮಾತ್ರ ಎಂದು ಅವರು ಟೀಕಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications