ರಾಜೀನಾಮೆ ನೀಡಲು ಮುಂದಾಗಿದ್ದ ಶ್ರೀರಾಮುಲು ಸದ್ಯಕ್ಕೆ ಶಾಂತ: ಇದಕ್ಕೆ ಒಂದೇ ಒಂದು ಕಾರಣ
ಆರೋಗ್ಯ ಇಲಾಖೆಯನ್ನು ತನ್ನಿಂದ ಕಿತ್ತುಕೊಂಡು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಸಿಟ್ಟಾಗಿದ್ದ, ಶ್ರೀರಾಮುಲು ಸದ್ಯದ ಮಟ್ಟಿಗೆ ತಣ್ಣಗಾಗಿದ್ದಾರೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನು ನೀಡಲಾಗಿದೆ.
ಸಿಎಂ ಕ್ರಮದ ವಿರುದ್ದ, ಒಂದು ಹಂತದಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದ ಶ್ರೀರಾಮುಲು ಸದ್ಯದ ಮಟ್ಟಿಗೆ ಶಾಂತವಾಗಿರಲು, ವರಿಷ್ಠರಿಂದ ಬಂದ ಸಂದೇಶವೇ ಕಾರಣ ಎನ್ನುವ ಮಾತು ಬಿಜೆಪಿ ಪಡಶಾಲೆಯಲ್ಲಿ ಓಡಾಡುತ್ತಿದೆ.
ಸಮಾಜ ಕಲ್ಯಾಣ ಇಲಾಖೆಯೂ ದೊಡ್ಡ ಖಾತೆಯಾಗಿದ್ದರೂ, ಕೊರೊನಾ ಹಾವಳಿ ತೀವ್ರವಾಗಿ ಹೆಚ್ಚುತ್ತಿರುವ ಈ ವೇಳೆ, ಆರೋಗ್ಯ ಖಾತೆಯನ್ನು ತನ್ನಿಂದ ಕಿತ್ತುಕೊಂಡಿದ್ದಕ್ಕೆ ಶ್ರೀರಾಮುಲುಗೆ ಸಿಟ್ಟುಬರಲು ಕಾರಣ ಇಲ್ಲದಿಲ್ಲ. ಎಲ್ಲಿ, ರಾಜ್ಯದ ಜನತೆ ತನ್ನನ್ನು ಅಸಮರ್ಥ ಎಂದು ಕೊಳ್ಳುತ್ತಾರೋ ಎನ್ನುವ ಭಯ ಇದ್ದಿರಬಹುದು.
ಕೊರೊನಾ ವೈದ್ಯಕೀಯ ಉಪಕರಣ ಖರೀದಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿರುವ ಗೋಲ್ಮಾಲ್ ವಿಚಾರದಲ್ಲಿ ವಿರೋಧ ಪಕ್ಷಗಳು, ಕಳೆದ ಅಧಿವೇಶನದಲ್ಲಿ, ಆಡಳಿತ ಪಕ್ಷದ ವಿರುದ್ದ ಮುಗಿಬಿದ್ದಿದ್ದವು. ಆದರೆ, ಅದನ್ನು ಅಷ್ಟೇ ಸಮರ್ಥವಾಗಿ ಸಚಿವ ಡಾ.ಸುಧಾಕರ್ ನಿಭಾಯಿಸಿದ್ದರು. ಇದು ಕೂಡಾ, ಸಿಎಂ ಬಿಎಸ್ವೈ, ಆರೋಗ್ಯ ಖಾತೆಯನ್ನು ಸುಧಾಕರ್ ಗೆ ನೀಡಲು ಕಾರಣವಾದ ಅಂಶ. ವರಿಷ್ಠರಿಂದ ಬಂದ ಸಂದೇಶ, ಮುಂದೆ ಓದಿ..

ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದ ಆರಂಭದ ದಿನ
ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದ ಆರಂಭದ ದಿನದಲ್ಲಿ, ಕಳೆದ ಅಸೆಂಬ್ಲಿ ಚುನಾವಣೆಯ ವೇಳೆ ನೀಡಿದ್ದ ಉಪಮುಖ್ಯಮಂತ್ರಿ ಕನಸು ಈಡೇರದ ನಂತರ, ಶ್ರೀರಾಮುಲು, ಸಮಾಜ ಕಲ್ಯಾಣ ಖಾತೆಯನ್ನೇ ಬಯಸಿದ್ದರು. ಆದರೆ, ಅದನ್ನು ಗೋವಿಂದ ಕಾರಜೋಳ ಅವರಿಗೆ ಸಿಎಂ ಹಂಚಿದ್ದರು. ಒಲ್ಲದ ಮನಸ್ಸಿನಿಂದಲೇ ಶ್ರೀರಾಮುಲು ಆರೋಗ್ಯ ಖಾತೆಯನ್ನು ಒಪ್ಪಿಕೊಂಡಿದ್ದರು.

ಆರೋಗ್ಯ ಇಲಾಖೆಯ ಕಾರ್ಯವೈಖರಿ ನೇರವಾಗಿ ಸಾರ್ವಜನಿಕರ ಮೇಲೆ ಪರಿಣಾಮ
ಆದರೆ, ಕೊರೊನಾ ಹಾವಳಿಯ ನಂತರ, ಆರೋಗ್ಯ ಇಲಾಖೆಯ ಕಾರ್ಯವೈಖರಿ ನೇರವಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರಲಾರಂಭಿಸಿತು. ಇಲಾಖೆಯ ಕೆಲಸವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಶ್ರೀರಾಮುಲು ಆರಂಭದಲ್ಲಿ ಉತ್ತಮವಾಗಿಯೇ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಸಂವಹನದ ಕೊರತೆಯಿಂದಾಗಿ, ಇಲಾಖೆಯ ಕೆಲಸಗಳು ಹಳಿತಪ್ಪಲು ಆರಂಭವಾಯಿತು. ಆ ಕಾರಣಕ್ಕಾಗಿ, ಇಲಾಖೆಯನ್ನು ಸಿಎಂ, ಡಾ.ಸುಧಾಕರ್ ಸುಪರ್ದಿಗೆ ವಹಿಸಿದರು. ಇದರಿಂದ ಸಿಟ್ಟಾದ ಶ್ರೀರಾಮುಲು, ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಪರ್ಕಿಸಿದರು.

ಶ್ರೀರಾಮುಲು ಅವರ ಸಂತೋಷ್ ಜೊತೆಗಿನ ಮಾತುಕತೆ
ಒಂದು ಹಂತದಲ್ಲಿ ರಾಜೀನಾಮೆಗೆ ಮುಂದಾಗಿದ್ದ ಶ್ರೀರಾಮುಲು ಅವರು ಸಂತೋಷ್ ಜೊತೆಗಿನ ಮಾತುಕತೆ ನಂತರ, ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದರು ಎಂದು ಹೇಳಲಾಗುತ್ತಿದೆ. ಅವರ ಜೊತೆಗಿನ ಮಾತುಕತೆಯ ವೇಳೆ, ಒಂದು ತಿಂಗಳ ಮಟ್ಟಿಗೆ, ತಾಳ್ಮೆ, ಸಂಯಮದಿಂದ ಇರುವಂತೆ ಸಂತೋಷ್ ಅವರು ಶ್ರೀರಾಮುಲುಗೆ ಸೂಚಿಸಿದ್ದರು ಎಂದು ಹೇಳಲಾಗುತ್ತಿದೆ.

ಸಿಎಂ ಬಿಎಸ್ವೈ ಅವರ ಮಾತಿಗೆ ಚಕಾರವಿಲ್ಲ
ಮುಂದಿನ ದಿನಗಳಲ್ಲಿ ಮಹತ್ವದ ಬದಲಾವಣೆ ಕರ್ನಾಟಕ ಬಿಜೆಪಿಯಲ್ಲಿ ನಡೆಯಲಿದೆ. ಉಪಚುನಾವಣೆ ಮತ್ತು ಬಿಹಾರದ ಚುನಾವಣೆ ಇರುವುದರಿಂದ, ಪಕ್ಷದ ಇಮೇಜಿಗೆ ಧಕ್ಕೆ ಬರಬಾರದು. ಕೊಟ್ಟ ಖಾತೆಯನ್ನು ನಿಭಾಯಿಸಿಕೊಂಡು, ಮುಂದಿನ ತಿಂಗಳಲ್ಲಿ ಎಲ್ಲಾ ಸರಿಪಡಿಸೋಣ ಎನ್ನುವ ಭರವಸೆ ಸಂತೋಷ್ ಅವರಿಂದ ಸಿಕ್ಕಿದ್ದರಿಂದ, ಶ್ರೀರಾಮುಲು, ಸಿಎಂ ಬಿಎಸ್ವೈ ಅವರ ಮಾತಿಗೆ ಚಕಾರವೆತ್ತದೇ, ಹೊಸ ಖಾತೆಯನ್ನು ಒಪ್ಪಿಕೊಂಡರು ಎನ್ನುವ ಸುದ್ದಿ ಹರಿದಾಡುತ್ತಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications