ಎಲ್ಲವನ್ನೂ ಬಿಟ್ಟು, ಗ್ರಾಮ ಪಂಚಾಯಿತಿ ಚುನಾವಣೆಗಳ ಮೇಲಷ್ಟೇ ಏಕೆ ನಿರ್ಬಂಧ?
ಬೆಂಗಳೂರು, ಮೇ 31: ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್ ಕೆ ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Recommended Video
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಚುನಾವಣಾ ಆಯೋಗದ ಮೇಲೆ ಒತ್ತಡ ತಂದು, ಕೊರೊನಾ ನೆಪ ಹೇಳಿ ಮುಂದಿನ ತಿಂಗಳು ನಡೆಯಬೇಕಿದ್ದ ಚುನಾವಣೆಗಳನ್ನು ಮುಂದಕ್ಕೆ ಹಾಕಿದೆ. ರಾಜ್ಯದಲ್ಲಿ ಲಾಕ್ಡೌನ್ ಬಹುತೇಕ ಅಂತ್ಯಗೊಂಡ ಸೂಚನೆ ಕಾಣಿಸುತ್ತಿದೆ. ಪರಿಸ್ಥಿತಿ ಹೀಗಿರುವಾಗ ಎಲ್ಲವನ್ನೂ ಬಿಟ್ಟು ಗ್ರಾಮ ಪಂಚಾಯಿತಿ ಚುನಾವಣೆಗಳ ಮೇಲಷ್ಟೇ ಏಕೆ ನಿರ್ಬಂಧ ಎಂದು ಪ್ರಶ್ನಿಸಿದ್ದಾರೆ.
ಚುನಾವಣೆಗಳನ್ನು ಮುಂದಕ್ಕೆ ಹಾಕಿ ಬಿಜೆಪಿ, ತನ್ನ ಬೆಂಬಲಿಗರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಅನುಕೂಲ ಮಾಡಿ ಕೊಡಲು ಹೊರಟಿದೆ. ಆಡಳಿತ ಸಮಿತಿ ರಚಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಚುನಾವಣಾ ಆಯೋಗ ತನ್ನ ನಿರ್ಧಾರ ಹಿಂಪಡೆಯದಿದ್ದರೇ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ
ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕೊರೊನಾವೈರಸ್ ಹಾವಳಿಯಿಂದ ಮುಂದಕ್ಕೆ ಹಾಕಿ ಚುನಾವಣಾ ಆಯೋಗ ಆದೇಶಿಸಿದೆ. ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಹೀಗಾಗಿ ಈ ಹಂತದಲ್ಲಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಚುನಾವಣಾ ಆಯೋಗ ಬಂದಿದೆ. ಈ ಹಿಂದೆ ಚುನಾವಣೆ ನಡೆಸಬೇಕೂ ಬೇಡವೋ ಎಂಬ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆಯೋಗ ವರದಿ ಕೇಳಿತ್ತು.

6 ಸಾವಿರ ಗ್ರಾಮ ಪಂಚಾಯಿತಿ
ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಲು ಕಷ್ಟ ಎಂಬ ವರದಿಯನ್ನು ನೀಡಿದ್ದರು. ಈ ವರದಿ ಅನ್ವಯ ಆಯೋಗ ಚುನಾವಣೆಗಳನ್ನು ಮುಂದೂಡಿದೆ. ಆದರೆ, ದಿನಾಂಕ ಇನ್ನೂ ತಿಳಿಸಿಲ್ಲ. ರಾಜ್ಯದ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳ ಅಧಿಕಾರವಧಿ ಬಹುತೇಕ ಈ ತಿಂಗಳೇ ಅಂತ್ಯವಾಗುತ್ತೆ. ಸುಗಮ ಆಡಳಿತಕ್ಕಾಗಿ ಈಗ ಸರ್ಕಾರವೇ ಆಡಳಿತ ಸಮಿತಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ರಚಿಸಬೇಕಿದೆ. ಚುನಾವಣೆ ಆಯೋಗದ ನಿರ್ದಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಬೆಂಬಲಿಗರಿಗೆ ಮಣೆ ಹಾಕಲು
ರಾಜ್ಯ ಚುನಾವಣಾ ಆಯೋಗದ ಮೇಲೆ ಆಡಳಿತಾರೂಢ ಬಿಜೆಪಿ ಸರ್ಕಾರ ಒತ್ತಡ ತಂದು ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದಕ್ಕೆ ಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಮ್ಮ ಬೆಂಬಲಿಗರಿಗೆ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ನಡೆಸಲು ಅನುವು ಮಾಡಿ ಕೊಡುವ ಉದ್ದೇಶ ಇದರ ಹಿಂದೆ ಇದೆ ಎಂದು ಆರೋಪಿಸಲಾಗಿದೆ.

ಬಿಜೆಪಿ ತಾಳಕ್ಕೆ ಆಯೋಗ ಡ್ಯಾನ್ಸ್
ಕೊರೊನಾವೈರಸ್ ಸೋಂಕು ಹರಡುತ್ತದೆ ಎಂದು ನೆಪ ಹೇಳಿ ಚುನಾವಣಾ ಆಯೋಗ ಚುನಾವಣೆಗಳನ್ನು ಮುಂದೂಡಿಲ್ಲ. ಬದಲಿಗೆ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಚುನಾವಣಾ ಆಯೋಗ ಕುಣಿಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ











Click it and Unblock the Notifications