ವಿಧಾನಸೌಧದಲ್ಲಿ ಕುಂಕುಮ ಬಳಕೆ ಏಕೆ ಬೇಡ: ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 18: ನಾಡಹಬ್ಬ ದಸರಾದ ಸಂಭ್ರಮದ ವೇಳೆ ನಡೆಯುವ ಆಯುಧ ಪೂಜೆಯ ಸಮಯದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಒಡೆಯುವ ಕುಂಬಳಕಾಯಿ ಮತ್ತು ಬಿಡಿಸುವ ರಂಗೋಲಿಗಳಲ್ಲಿ ಯಾವುದೇ ರಾಸಾಯನಿಕ ಮಿಶ್ರಿತ ಅರಿಶಿನ, ಕುಂಕುಮ, ಬಣ್ಣ, ಸುಣ್ಣವನ್ನು ಬಳಸದಂತೆ ಸರ್ಕಾರ ಆದೇಶ ನೀಡಿದೆ.
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು,… pic.twitter.com/nsv95rMME3
— CM of Karnataka (@CMofKarnataka) October 18, 2023
ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ದ್ವೇಷಿ ಸುತ್ತೋಲೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಮಂದಿ ಅಸಮಾಧಾನ ಹೊರಹಾಕಿದ್ದರು. ಆದರೆ ಈ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ.
ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಾದರಿಯಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರವು ಕೂಡ ಹಿಂದೂಗಳ ಸಂಪ್ರದಾಯವನ್ನೇ ಅದರಲ್ಲೂ ಆಯುಧಪೂಜೆಯನ್ನೇ ಉದ್ದೇಶಿಸಿ ಹೊರಡಿಸಲಾಗಿದ್ದ ಸುತ್ತೋಲೆ ಬಗ್ಗೆ ಕೆಲವರು ಕೊಂಕು ನುಡಿದಿದ್ದರು. ಆದರೆ ವಾಸ್ತವವಾಗಿ ಕರ್ನಾಟಕದ ವಿಧಾನಸೌಧ ಹಳೆಯ ಕಟ್ಟಡವಾದ್ದರಿಂದ ಹಬ್ಬದ ವೇಳೆ ಬಣ್ಣ, ಕುಂಕುಮ ಅರಿಶಿನಗಳಿಂದ ನೆಲ ಇಲ್ಲವೇ ಇತರೆಡೆ ಅಳಿಸಲಾಗದ ಕಲೆಯಾಗುತ್ತದೆ ಎಂಬ ಕಾಳಜಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಆದರೆ ಈ ಬಗ್ಗೆ ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕೂಡ ಟ್ವೀಟ್ ಮಾಡಿದ್ದು, 'ಎರಡು ರಾಜ್ಯ, ಎರಡು ರಾಜ್ಯ ಸರ್ಕಾರಗಳು. ಆದರೆ ಒಂದೇ ಗುರಿ ಅದು ಆಯುಧ ಪೂಜೆ. ಇಂಡಿ ಮೈತ್ರಿ ಪಕ್ಷಗಳ ನಡುವೆ ನೂರು ಭಿನ್ನಾಭಿಪ್ರಾಯಗಳಿರಬಹುದು, ಆದರೆ ಅವರು ಈ ನೆಲದ ಸ್ಥಳೀಯ ಸಂಸ್ಕೃತಿಯ ಮೇಲಿನ ದ್ವೇಷ ಮತ್ತು ತಿರಸ್ಕಾರದ ವಿಚಾರದಲ್ಲಿ ಮಾತ್ರ ಖಂಡಿತವಾಗಿ ಒಂದಾಗುತ್ತಾರೆ.
ಆಯುಧ ಪೂಜೆಯ ಸಮಯದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಹೂವುಗಳು, ಕುಂಕುಮ, ಅರಿಶಿನ ಮತ್ತು ಇತರ ಪೂಜೆ ಅಗತ್ಯ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಿ ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂ ಇಂದು ಸರ್ಕಾರಿ ಸುತ್ತೋಲೆಯನ್ನು ಹೊರಡಿಸಿದೆ. ವರ್ಷಗಳಿಂದ, ದಕ್ಷಿಣ ಭಾರತದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಉದ್ಯೋಗಿಗಳು ಆಯುಧ ಪೂಜೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ಮಹತ್ವದ ಸಾಂಸ್ಕೃತಿಕ ಆಚರಣೆಗೆ ಇದೀಗ ಇಂಡಿ ಒಕ್ಕೂಟ ತನ್ನ ಟಾರ್ಗೆಟ್ಅನ್ನಾಗಿ ಮಾಡಿಕೊಂಡಿದೆ' ಎಂದು ಅವರು ಟ್ವೀಟ್ ಮಾಡಿದ್ದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications