ನಾನೇಕೆ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಬೇಕು: ರಣದೀಪ್ ಸುರ್ಜೇವಾಲಾ
ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ ಸಚಿವರು ಮತ್ತು ಬಿಬಿಎಂಪಿ ಅಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನ ಐಷಾರಾಮಿ ಹೋಟೆಲ್ನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಕುರಿತು ವಿವಾದದ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ಸುರ್ಜೆವಾಲಾ ತಾವು ಹೋಟೆಲ್ನಲ್ಲಿ ತಂಗಿದ್ದು, ಅಲ್ಲಿಗೆ ಕೆಲವು ಮಂತ್ರಿಗಳು ಚಹಾ ಕುಡಿಯಲು ಬಂದರು. ಅದೇ ಸಮಯದಲ್ಲಿ ಅವರೊಂದಿಗೆ ಹೋಟೆಲ್ನಲ್ಲಿದ್ದ ಬಿಬಿಎಂಪಿ ಅಧಿಕಾರಿಗಳೂ ನಮ್ಮ ಜೊತೆ ಸೇರಿಕೊಂಡರು ಎಂದರು.

ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಸಭೆಯ ಅಧ್ಯಕ್ಷತೆ ವಹಿಸುವ ಅಧಿಕಾರ ನನಗಿಲ್ಲ. ನಾನೇಕೆ ಇಂತಹ ಸಭೆ ನಡೆಸಬೇಕು. ವಿಧಾನಸಭಾ ಚುನಾವಣೆಯ ಸೋಲಿನ ಹತಾಶೆಯಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.
ಆದರೆ ರಾಜ್ಯ ಸರ್ಕಾರದ ವ್ಯವಹಾರಗಳನ್ನು ನಿಯಂತ್ರಿಸುವ ನಿಯಮಗಳನ್ನು ಉಲ್ಲಂಘಿಸಿದ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕರ್ನಾಟಕ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಶಾಸಕರುಗಳ ಸಭೆಯ ನೇತೃತ್ವ ವಹಿಸಿದ್ದಎಐಸಿಸಿ ಪ್ರಧಾನಿ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರ ಸಭೆಯಲ್ಲಿ ಸರ್ಕಾರದ ಅಧಿಕಾರಿಗಳಿಗೆ ಭಾವಹಿಸಲು ಅವಕಾಶ ನೀಡಲಾಗಿದೆ. ಇದೀಗ ವಿವಾದಕ್ಕೀಡಾಗಿ ಜೆಡಿಎಸ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು.
ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕರ ಜೊತೆಗೆ ಮಂಗಳವಾರ ಸಭೆ ನಡೆದಿದೆ ಎನ್ನಲಾಗಿತ್ತು. ಇದರಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಸೇರಿದಂತೆ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಕುರಿತ ಫೋಟೋವನ್ನು ಟ್ವೀಟ್ ಮಾಡುವ ಬಿಜೆಪಿ ಸಹ ಟೀಕೆ ಮಾಡಿತ್ತು. ಇತ್ತ ಜೆಡಿಎಸ್ ಸಹ ಕಾಂಗ್ರೆಸ್ ನಡೆ ಖಂಡಿಸಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಸರ್ಕಾರದ ಸಭೆ ನಡೆಸಲು ಇವರ್ಯಾರು? ಎಂದು ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದರು.

ಕರ್ನಾಟಕ ರಾಜ್ಯ ಸರ್ಕಾರದ ಅಧಿಕಾರಿಗಳ ಸಭೆಯಲ್ಲಿ ದೆಹಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಉಪಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬಳಿಕ ಜಟಾಪಟಿ ಮುಂದುವರಿದಿತ್ತು. ಸಭೆ ನಡೆದಿಲ್ಲ, ಅಧಿಕೃತ ಸಭೆಯಲ್ಲ ಎಂದಿದ್ದೀರಿ, ಮತ್ತೇಕೆ ಸಭೆಗೆ ಕಡತಗಳನ್ನು ಹೊತ್ತೊಯ್ಯುವ ಜರೂರು ಏನಿತ್ತು? ಎಂದು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿತ್ತು.
ಈ ಕುರಿತು ಸರಣಿ ಟ್ವೀಟ್ ಮಾಡಿದ್ದ ಬಿಜೆಪಿಯು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿಸಭೆ ಅಧಿಕೃತವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಆದರೆ ಅಂಥ ಸಭೆಗೆ ಕಡತಗಳನ್ನು ಹೊತ್ತೊಯ್ಯುವ ಜರೂರತ್ತು ಏನಿತ್ತು?. ಅನಧಿಕೃತವಾಗಿ ಹಾಗೆ ಕಡತಗಳನ್ನು ತೆಗೆದೊಯ್ಯಲಾಗಿದೆ ಎಂದರೆ ಎಟಿಎಂ ಸರ್ಕಾರ (#ATMSarkara) ದ ಭ್ರಷ್ಟಾಚಾರಕ್ಕೆ ಇನ್ನೇನೂ ಸಾಕ್ಷಿ ಬೇಡ ಅಂತಲೇ ಅರ್ಥ ಎಂದು ಬಿಜೆಪಿ ಆರೋಪಿಸಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್











Click it and Unblock the Notifications