Get Updates
Get notified of breaking news, exclusive insights, and must-see stories!

ವಿಜಯೇಂದ್ರ ಪದಗ್ರಹಣಕ್ಕೆ ರಮೇಶ್‌ ಜಾರಕಿಹೊಳಿ ಸೇರಿದಂತೆ ಬಾಂಬೆ ಬಾಯ್ಸ್‌ ಗೈರು! ಮುನಿಸೇನು?

ಬೆಂಗಳೂರು, ನವೆಂಬರ್‌ 15: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಕಾರ್ಯಕರ್ತರ ಜಯಕಾರ, ಹಿರಿಯರಿಂದ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಆದರೆ, ವಲಸಿಗ ಬಿಜೆಪಿಗರಾದ ರಮೇಶ್‌ ಜಾರಕಿಹೊಳಿ ಅಂಡ್‌ ಟೀಮ್‌ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ramesh-jarkiholi-and-other-leaders-absent

ಹೌದು, ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಆಯ್ಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಹಲವು ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಸಿದ್ದಾರೆ. ಇನ್ನೂ ಮಾಜಿ ಸಚಿವರಾದ ಸಿ ಟಿ ರವಿ, ವಿ ಸೋಮಣ್ಣ ಅಸಮಾಧಾನಗೊಂಡಿದ್ರೆ, ಇತ್ತ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಮೌನಕ್ಕೆ ಜಾರಿದ್ದಾರೆ. ಅಲ್ಲದೇ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿಗರ ನಡುವೆ ಸಾಕಷ್ಟು ಮನಸ್ತಾಪಕ್ಕೆ ಕಾರಣವಾಗಿದೆ.

ಈಗಾಗಲೇ ಮೂಲ ಬಿಜೆಪಿ ಸೇರ್ಪಡೆಯಾದ 17 ಜನ ವಲಸಿಗ ನಾಯಕರಲ್ಲಿ ಹೆಚ್‌ ವಿಶ್ವನಾಥ್‌ ಈಗಾಗಲೇ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಎಸ್‌ ಟಿ ಸೋಮಶೇಖರ್‌, ಕೆ ಗೋಪಾಲಯ್ಯ, ಹಾಗೂ ಶಿವರಾಮ್‌ ಹೆಬ್ಬಾರ್‌ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಕೇಳಿ ಬಂದಿತ್ತು.

ಅಲ್ಲದೇ ಕೆಲವು ವಲಸಿಗ ಬಿಜೆಪಿಗರಿಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಕೊಟ್ಟ ಮಾತನ್ನ ಈಡೇರಿಸಿಲ್ಲ ಎಂಬ ಅಸಮಾಧಾನವನ್ನ ವ್ಯಕ್ತಪಡಿಸಿದರು. ಇದೀಗ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಹುದ್ದೆಯನ್ನ ಅಲಂಕರಿಸಿರುವ ವಿಚಾರವಾಗಿ ಮೂಲ ವಲಸಿಗರು ಮೌನಕ್ಕೆ ಜಾರಿದ್ದಾರೆ.

ramesh-jarkiholi-and-other-leaders-absent

ಇನ್ನೂ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಪದಗ್ರಹಣಕ್ಕೆ ಹಲವಾರು ಬಿಜೆಪಿ ಘಟನುಘಟಿ ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಬಿಎಸ್‌ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಮೇಶ್‌ ಜಾರಕಿಹೊಳಿ ಸೇರಿದಂತೆ ಬಹುತೇಕ ಎಲ್ಲಾ ವಲಸಿಗ ಬಿಜೆಪಿಗರು ಗೈರಾಗಿದ್ದರೆ.

ನೂತನ ಅಧ್ಯಕ್ಷರಾದ ಬಿವೈ ವಿಜಯೇಂದ್ರರ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ಬಿಜೆಪಿ ನಾಯಕರಾದ ಆರ್‌. ಅಶೋಕ್‌, ಅಶ್ವಥ್‌ ನಾರಾಯಣ, ಸಿಟಿ ರವಿ, ವಿ. ಸೋಮಣ್ಣ, ಅರವಿಂದ ಬೆಲ್ಲದ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಲಿಂಬಾಳಿ, ಎಸ್‌ಟಿ ಸೋಮಶೇಖರ್‌, ಡಾ.ಕೆ. ಸುಧಾಕರ್‌ ಮುಂತಾದ ಹಿರಿಯ ನಾಯಕರು ಗೈರಾಗಿದ್ದರು.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ಅಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ್, ಹಿರಿಯ ನಾಯಕ ರಾಮಚಂದ್ರ ಗೌಡ, ಮುರುಗೇಶ್‌ ನಿರಾಣಿ, ಎನ್‌ ಮಹೇಶ್‌, ರಾಮಚಂದ್ರಗೌಡ, ಶ್ರೀರಾಮುಲುಮಾಜಿ ಸಚಿವರು, ಮಾಜಿ ಹಾಲಿ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರು, ಪಕ್ಷದ ರಾಜ್ಯ-ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+