ಯುದುವೀರ್ ರಾಜಕಾರಣಕ್ಕೆ ಬರುತ್ತೇನೆ ಅಂದಿದ್ದು ಯಾಕೆ?
ಮೈಸೂರು, ಸೆಪ್ಟೆಂಬರ್.04: ಮೈಸೂರಿನ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕಾರಣಕ್ಕೆ ಬರುತ್ತಾರಂತೆ. ಹೌದು.. ಸುದ್ದಿಗಾರೊಂದಿಗೆ ಮಾತನಾಡುತ್ತ ಅವರೇ ರಾಜಕಾರಣದ ಬಗ್ಗೆ ಇರುವ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ.
ಸಮಯ ಬಂದಾಗ ಎಲ್ಲವನ್ನು ಹೇಳುತ್ತೇನೆ. ರಾಜಕಾರಣದ ಬಗ್ಗೆ ಆಸಕ್ತಿಯಿದ್ದು ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಮೈಸೂರು ರಾಜಮನೆತನದ ಯುವರಾಜನ ಪಟ್ಟಕ್ಕೆ ಅಂತಿಮವಾಗಿ ಆಯ್ಕೆಯಾದ ಯದುವೀರ್ ಇದೀಗ ರಾಜಕಾರಣದ ಬಗ್ಗೆ ಸುಳಿವು ನೀಡಿದ್ದು ಕರ್ನಾಟಕದ ರಾಜಕೀಯ ಪಂಡಿತರಲ್ಲಿ ಚರ್ಚೆ ಹುಟ್ಟುಹಾಕಿರುವುದೆಂತೂ ಸತ್ಯ.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]
ಯದುವೀರ್ ರಾಜಕಾರಣಕ್ಕೆ ಕಾಲಿಡಲು ಕಾರಣಗಳನ್ನು ಹುಡುಕುತ್ತ ಹೋದರೆ ಅನೇಕ ಅಂಶಗಳು ಎದುರಾಗುತ್ತವೆ. ದಸರಾ ಆಚರಣೆ ಸಂಬಂಧ, ಆಸ್ತಿ ಹಂಚಿಕೆ ಸಂಬಂಧ ಸರ್ಕಾರ ಮತ್ತು ರಾಜಮನೆತನದ ನಡುವೆ ಎದುರಾಗಿದ್ದ, ಮುಂದೆ ಎದುರಾಗಬಹುದಾದ ಎಲ್ಲ ಸಂಘರ್ಷಗಳಿಗೆ ಕೊನೆ ಹಾಡಲು ಯದುವೀರ್ ರಾಜಕೀಯ ಅಧಿಕಾರವೊಂದನ್ನು ಬಯಸಿದ್ದಾರೆಯೇ? ಎಂಬ ಪ್ರಶ್ನೆ ಮೂಡುತ್ತಿದೆ.[ಸೂತಕದ ನಡುವೆ ಎದ್ದಿದೆ ಒಡೆಯರ್ ಆಸ್ತಿ ಪ್ರಶ್ನೆ]

ಸರ್ಕಾರದ ಆಚರಣೆ
ನಾಡಹಬ್ಬ ದಸರಾವನ್ನು ಸರ್ಕಾರವೂ ಆಚರಣೆ ಮಾಡುತ್ತದೆ. ಅತ್ತ ಅರಮನೆಯಲ್ಲಿ ರಾಜಮನೆತನದವರೂ ಆಚರಿಸುತ್ತಾರೆ. ಬರದ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.

ಖಾಸಗಿ ದರ್ಬಾರ್
ಸರ್ಕಾರ ದಸರಾವನ್ನು ಯಾವ ಬಗೆಯಲ್ಲಾದರೂ ಆಚರಿಸಿಕೊಳ್ಳಲಿ, ರಾಜಮನೆತನದವರು ಪರಂಪರೆಗೆ ಅನುಗುಣವಾಗಿ ದಸರಾ ಆಚರಣೆ ಮಾಡಲಿದ್ದೇವೆ. ಖಾಸಗಿ ದರ್ಬಾರ್ ಹೇಗೆ ನಡೆಸಬೇಕು ಎಂಬುದನ್ನು ನಾವೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ರಾಣಿ ಪ್ರಮೋದಾದೇವಿ ಒಡೆಯರ್ ಹೇಳಿಕೆ ನೀಡಿದ್ದಾರೆ.

ರಾಜಧನ ಬೇಕೆ?
ರಾಜಮನೆತನದವರಿಗೆ ಸರ್ಕಾರ ಏತಕ್ಕೆ ಗೌರವ ಧನ ನೀಡಬೇಕೆಂದು ಇತಿಹಾಸತಜ್ಞ ಪ್ರೊ. ನಂಜರಾಜೇ ಅರಸ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇದಕ್ಕೆ ಉತ್ತರಿಸಿದ್ದ ರಾಣಿ ಪ್ರಮೋದಾದೇವಿ ಅಂಬಾರಿ ನೀಡುವುದಕ್ಕೆ ಪ್ರತಿಯಾಗಿ ಸರ್ಕಾರ ಗೌರವ ಧನ ನೀಡುತ್ತದೆಯೇ ಹೊರತು ರಾಜಮನೆತನಕ್ಕೆ ಗೌರವಧನ ನೀಡುತ್ತಿಲ್ಲ ಎಂದು ತಿರುಗೇಟು ನೀಡಿದ್ದರು.

ಶ್ರೀಕಂಠದತ್ತ ಒಡೆಯರ್
ಮೈಸೂರು ಅರಸ ಶ್ರೀಕಂಠದತ್ತ ಒಡೆಯರ್ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಆ ಮೂಲಕ ರಾಜಕಾರಣದಲ್ಲಿ ನೆಲೆ ಕಂಡುಕೊಂಡಿದ್ದರು. ಯದುವೀರ್ ಸಹ ಅಂಥದ್ದೇ ಯಾವುದಾದರೂ ಪ್ರಯತ್ನ ಮಾಡಲಿದ್ದಾರೆಯೇ? ಕಾದು ನೋಡಬೇಕು.

ಬೆಂಗಳೂರು ಅರಮನೆ ವಿವಾದ
ಹಿಂದೆ ಮೈಸೂರು ರಾಜರಿಗೆ ಸೇರಿದ್ದ್ ಬೆಂಗಳೂರು ಅರಮನೆ ಜಾಗದಲ್ಲಿ ರಸ್ತೆ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರ ಮತ್ತು ಒಡೆಯರ್ ನಡುವೆ ವಿವಾದ ಉಂಟಾಗಿತ್ತು. ಆದರೆ ನಂತರ ಬೆಂಗಳೂರು ಅರಮನೆ ಜಾಗವನ್ನು ರಸ್ತೆ ವಿಸ್ತರಣೆಗೆ ಬಳಸಿಕೊಳ್ಳಬಹುಹುದು ಎಂದು ಸುಪ್ರೀಂ ಕೋರ್ಟ್ ತೀರ್ಮಾನ ನೀಡಿತ್ತು.

ಅಧಿಕಾರವೇ ಉತ್ತರವೇ?
ಸರ್ಕಾರ ಅಥವಾ ಸರ್ಕಾರದ ಮೇಲೆ ಒತ್ತಡ ತರುವಂಥ ಅಧಿಕಾರ ಕೈಯಲ್ಲಿದ್ದರೆ ಇಂಥ ವಿವಾದಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುಹುದು ಎಂಬುದನ್ನು ಯದುವೀರ್ ಮನಗಂಡಂತಿದೆ. ಅಲ್ಲದೇ ಮೈಸೂರು ಸಂಸ್ಥಾನದ ಆಸ್ತಿ ಕಾಪಾಡಲು ಇದೊಂದು ಅಸ್ತ್ರವಾಗಿ ಬಳಕೆಯಾಗುತ್ತದೆ ಎಂದು ಅರಿತಿರುವ ಯದುವೀರ್ ರಾಜಕಾರಣಕ್ಕೆ ಬರುವ ಮಾತನ್ನಾಡಿದ್ದಾರೆ.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
Tamilnadu Election 2026: ಮಹಿಳೆಯರಿಗೆ 2 ಸಾವಿರ: ತಮಿಳುನಾಡಿನ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ










Click it and Unblock the Notifications